ಹಿಂದೂ-ಮುಸ್ಲಿಮರನ್ನು ವಿಭಜಿಸುತ್ತಿರುವುದು ಜಾನುವಾರುಗಳು: ಮೇನಕಾ ಗಾಂಧಿ
ಹೈದರಾಬಾದ್, ಆಗಸ್ಟ್ 25: ಪ್ರಾಣಿಗಳ ಮಾಂಸದಿಂದ ಮಿಥೇನ್ ಬಿಡುಗಡೆಯಾಗುವುದರಿಂದ ಜನರು ಮಾಮೂಲಿ ಮಾಂಸವನ್ನು ಸೇವಿಸುವ ಬದಲು ಪ್ರಯೋಗಾಲಯದಲ್ಲಿ ಬೆಳೆಸಿದ ಮಾಂಸವನ್ನು ಸೇವಿಸಬೇಕು ಎಂದು ಕೇಂದ್ರ ಸಚಿವೆ ಮೇನಕಾ ಗಾಂಧಿ ಹೇಳಿದ್ದಾರೆ.
ಮಿಥೇನ್ ಜಾಗತಿಕ ತಾಪಮಾನಕ್ಕೆ ಕಾರಣವಾಗುವ ಪ್ರಮುಖ ಅನಿಲ. ಜಾಗತಿಕ ತಾಪಮಾನವೇ ಕೇರಳದಲ್ಲಿ ಸಂಭವಿಸಿದ ಪ್ರವಾಹ, ತಮಿಳುನಾಡಿನ ಸುನಾಮಿ ಮತ್ತು ಮಂಜುಗಡ್ಡೆಯ ಕರುಗುವಿಕೆಯಂತಹ ಸನ್ನಿವೇಶಗಳಿಗೆ ಕಾರಣ. ನಾವು ಕಾಡನ್ನು ಕಳೆದುಕೊಳ್ಳುತ್ತಿದ್ದೇವೆ. ಜಾನರುವಾರುಗಳು ಇದ್ದಲ್ಲಿ ಕೇರಳದಂತೆ ಇನ್ನಷ್ಟು ಬಿಕ್ಕಟ್ಟುಗಳು ಉಂಟಾಗುತ್ತವೆ ಎಂದು ಅವರು ಹೇಳಿದರು.
ಮಾಂಸ ಉತ್ಪಾದನೆಗೆ ನಾವು ಪ್ರಾಣಿಗಳ ಮಾಂಸದ ಮೇಲಿನ ಅವಲಂಬನೆ ಕಡಿಮೆ ಮಾಡಿದರೆ ಮಿಥೇನ್ ಪ್ರಮಾಣವೂ ತಗ್ಗುತ್ತದೆ.

ಜಾನುವಾರುಗಳು ಹಿಂದೂಗಳು ಮತ್ತು ಮುಸ್ಲಿಮರನ್ನು ವಿಭಜಿಸುತ್ತಿವೆ. ಜನರು ಮಾಂಸವನ್ನು ತಿನ್ನುತ್ತಿಲ್ಲ. ಮಾಂಸವೇ ಜನರನ್ನು ತಿನ್ನುತ್ತಿದೆ ಎಂದು ಮೇನಕಾ ಹೇಳಿದರು.
ಪ್ರಾಣಿಗಳಿಂದಲೇ ಶೇ 70ರಷ್ಟು ಮಿಥೇನ್ ಉತ್ಪತ್ತಿಯಾಗುತ್ತದೆ. ಕೇವಲ ಶೇ 30 ಮಿಥೇನ್ ಕಲ್ಲಿದ್ದಲು ಮತ್ತು ಅಕ್ಕಿ ಬೆಳೆಯುವುದರಿಂದ ಉತ್ಪತ್ತಿಯಾಗುತ್ತದೆ. ನಾವು ಮಾಂಸ ಸೇವನೆಯನ್ನು ನಿಯಂತ್ರಿಸಲು ಸಾಧ್ಯವಿಲ್ಲ. 2008ರಲ್ಲಿ ಅತ್ಯಧಿಕ ಮಾಂಸ ಬಳಕೆಯಾಗಿತ್ತು. ಈಗ ಅದರ ಪ್ರಮಾಣ ದುಪ್ಪಟ್ಟಾಗಿದೆ.
ಭಾರತ ಮತ್ತು ಚೀನಾಗಳಲ್ಲಿ ಮಾಂಸ ಸೇವಿಸುವವರ ಜನಸಂಖ್ಯೆ ಹೆಚ್ಚಾಗುತ್ತಿದೆ. ಆದರೆ, ಮಾಂಸ ಸೇವನೆಯು ನಮಗೇನು ಮಾಡುತ್ತಿದೆ? ಸಸ್ಯಾಹಾರಿ ಪ್ರಾಣಿಯು ಹುಲ್ಲನ್ನು ತಿಂದಾಗ ಅವು ಮಿಥೇನ್ ಉತ್ಪತ್ತಿ ಮಾಡುತ್ತವೆ. ಇದು ಅರಣ್ಯಕ್ಕೆ ಹಾನಿಮಾಡುತ್ತದೆ ಮತ್ತು ಹವಾಮಾನ ಬದಲಾವಣೆ ಮೇಲೆ ಪರಿಣಾಮ ಬೀರುತ್ತದೆ.
ಭಾರತ, ಚೀನಾ ಮತ್ತು ಬ್ರೆಜಿಲ್ಗಳು ಜಾಗತಿಕ ವೇದಿಕೆಯಲ್ಲಿ ಮಿಥೇನ್ ಕುರಿತು ಚರ್ಚೆಗೆ ಅವಕಾಶ ನೀಡುತ್ತಿಲ್ಲ. ಪಶ್ಚಿಮದ ದೇಶಗಳು ಇದಕ್ಕೆ ಅವಕಾಶ ನೀಡುತ್ತಿವೆ ಎಂದರು.
ನಾವು ಪ್ರಯತ್ನಿಸಿದರೂ ಜನರನ್ನು ಸಸ್ಯಾಹಾರಿಗಳನ್ನಾಗಿ ಪರಿವರ್ತಿಸಲು ಸಾಧ್ಯವಾಗುವುದಿಲ್ಲ. ಕೆಲವು ದಿನ ಸಸ್ಯಾಹಾರಿಗಳಾಗಿರುತ್ತಾರೆ. ಬಳಿಕ ತಮ್ಮ ಹಳೆಯ ಅಭ್ಯಾಸಕ್ಕೆ ಮರಳುತ್ತಾರೆ ಎಂದು ಮೇನಕಾ ಹೇಳಿದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications