Video: ನಡುರಸ್ತೆಯಲ್ಲೇ ವೃದ್ಧ ಅತ್ತೆಯ ಮೇಲೆ ಸೊಸೆ ಹಲ್ಲೆ
ಹೈದ್ರಾಬಾದ್, ಅಕ್ಟೋಬರ್.10: ತೆಲಂಗಾಣದಲ್ಲಿ ನಡೆದಿರುವ ಇದೊಂದು ಘಟನೆಯನ್ನು ನೋಡುತ್ತಿದ್ದರೆ ಮಾನವೀಯತೆಯೇ ಕಳೆದು ಹೋಗಿದೆಯಾ ಎನ್ನುವ ಅನುಮಾನ ಹುಟ್ಟಿಕೊಳ್ಳುತ್ತದೆ. ವೃದ್ಧ ಅತ್ತೆಯ ಮೇಲೆ ಸೊಸೆ ನಡೆಸಿದ ಹಲ್ಲೆಯ ದೃಶ್ಯ ಕರುಳು ಹಿಂಡುವಂತಿದೆ.
ಕೌಟುಂಬಿಕ ಕಲಹದ ಹಿನ್ನೆಲೆ 55 ವರ್ಷದ ತಸ್ನೀಮ್ ಸುಲ್ತಾನ್ ಮೇಲೆ ಸೊಸೆ ಉಜ್ಮಾ ಬೇಗಮ್ ಎಂಬುವವರು ನಡುರಸ್ತೆಯಲ್ಲೇ ಹಲ್ಲೆ ನಡೆಸಿದ್ದಾರೆ. ಹೈದ್ರಾಬಾದ್ ಮಲ್ಲೇಪಲ್ಲಿ ಎಂಬಲ್ಲಿ ನಡೆದ ಘಟನೆಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು.
#WATCH Telangana: A woman being thrashed by her daughter-in-law and her mother in Hyderabad over family dispute.
— ANI (@ANI) October 10, 2020
Police says, "The incident happened in the Humayun Nagar area on October 8. A case has been registered and further investigation is underway." pic.twitter.com/FQgCSzjVbF
ಕಳೆದ ಗುರುವಾರ ಹುಮಾಯೂನ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ವೃದ್ಧ ಅತ್ತೆ ಮೇಲೆ ಸೊಸೆ ಮತ್ತು ಮಗಳು ಹಲ್ಲೆ ನಡೆಸುತ್ತಿರುವುದನ್ನು ಪುಟ್ಟ ಮಗುವೊಂದು ಅಲ್ಲಿ ಮೊಬೈಲ್ ನಲ್ಲಿ ಸೆರೆ ಹಿಡಿಯುತ್ತಿರುವ ದೃಶ್ಯ ಕೂಡಾ ಸಿಸಿ ಕ್ಯಾಮರಾದಲ್ಲಿದೆ. ಈ ಸಿಸಿ ಕ್ಯಾಮರಾ ದೃಶ್ಯಾವಳಿ ವೈರಲ್ ಆಗುತ್ತಿದ್ದಂತೆ ಪ್ರಕರಣವು ಬೆಳಕಿಗೆ ಬಂದಿದೆ.

ಸೊಸೆ ವಿರುದ್ಧ ಪ್ರಕರಣ ದಾಖಲು:
ತಸ್ನೀಮ್ ಸುಲ್ತಾನ್ ಮೇಲೆ ಹಲ್ಲೆ ನಡೆಸಿದ ಸೊಸೆ ಉಜ್ಮಾ ಬೇಗಮ್ ಮತ್ತು ಮಗಳು ಆಸಿಫಾ ಬೇಗಮ್ ವಿರುದ್ಧ ಪೊಲೀಸರು ಪ್ರಕರಣವನ್ನು ದಾಖಿಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಅದೇ ಕಟ್ಟಡದಲ್ಲಿ ವಾಸವಾಗಿದ್ದ ಸಂಬಂಧಿಕರು ಮನೆಯ ವಿದ್ಯುತ್ ಮತ್ತು ನೀರಿನ ಸಂಪರ್ಕವನ್ನು ಕಡಿತಗೊಳಿಸಿದ್ದಕ್ಕೆ ವೃದ್ಧೆ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಕಾರಣ ಏನೂ ಇದ್ದರೂ ವೃದ್ಧೆಯ ಮೇಲೆ ಕ್ರೌರ್ಯ ಮೆರೆದಿರುವ ಸೊಸೆ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications