ತೆಲಂಗಾಣದಲ್ಲಿ ಅಸ್ತಿತ್ವವನ್ನೇ ಕಳೆದುಕೊಂಡ ಚಂದ್ರಬಾಬು ನೇತೃತ್ವದ ಟಿಡಿಪಿ
ಆಂಧ್ರ ಪ್ರದೇಶ ಮತ್ತು ತೆಲಂಗಾಣದಲ್ಲಿ ನಡೆಯುತ್ತಿರುವ ರಾಜಕೀಯ ವಿದ್ಯಮಾನಗಳು ನಾರಾ ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗುದೇಶಂ ಪಕ್ಷದ ಬುಡವನ್ನೇ ಅಲುಗಾಡಿಸಲಾರಂಭಿಸಿದೆ.
ಇದುವರೆಗಿನ ತಮ್ಮ ರಾಜಕೀಯ ಜೀವನದಲ್ಲಿ ಪಕ್ಷದ ಇಂಥ ಅಧಃಪತನವನ್ನು ನಿರೀಕ್ಷಿಸದ ಚಂದ್ರಬಾಬು ನಾಯ್ಡು, ತೆಲುಗು ಭಾಷಿಗರ ಎರಡೂ ರಾಜ್ಯಗಳಲ್ಲಿ ತೀವ್ರ ಹಿನ್ನಡೆಯನ್ನು ಅನುಭವಿಸುತ್ತಿದೆ. ಜೊತೆಗೆ ಹೊಸಹೊಸ ಸವಾಲುಗಳನ್ನು ಎದುರಿಸಬೇಕಾಗಿದೆ.
ರಾಜಕೀಯದಲ್ಲಿ ಏರಿಳಿತ ನಿರೀಕ್ಷಿತವಾಗಿದ್ದರೂ, ವಿರೋಧಿಗಳ ರಾಜಕೀಯದ ಮುಂದೆ ಟಿಡಿಪಿ ಸದ್ಯ ಮಂಕಾದಂತೆ ಕಾಣುತ್ತಿದೆ. ಒಂದು ಕಡೆ ಜಗನ್ಮೋಹನ್ ರೆಡ್ಡಿ ಇನ್ನೊಂದು ಕಡೆ ಕೆ.ಚಂದ್ರಶೇಖರ್ ರಾವ್ ಅವರ ಗೇಂ ಪ್ಲ್ಯಾನ್ ಮುಂದೆ ನಾಯ್ಡು ತಬ್ಬಿಬ್ಬಾಗುತ್ತಿದ್ದಾರೆ.
ಒಂದರ ಮೇಲೊಂದು ಹಿನ್ನಡೆ ಅನುಭವಿಸುತ್ತಿರುವ ಚಂದ್ರಬಾಬು ನಾಯ್ಡುಗೆ, ಸ್ವಪಕ್ಷೀಯ ಸದಸ್ಯರಿಬ್ಬರು ಭರ್ಜರಿ ಶಾಕ್ ನೀಡಿದ್ದು, ತೆಲುಗುದೇಶಂ ಪಕ್ಷ ಅಸ್ತಿತ್ವವನ್ನೇ ಕಳೆದುಕೊಳ್ಳುವಂತೆ ಮಾಡಿದೆ.

2018ರ ಅಸೆಂಬ್ಲಿ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದ್ದ ಕೆಸಿಆರ್
ಕಳೆದ 2018ರ ಅಸೆಂಬ್ಲಿ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದ್ದ ಕೆಸಿಆರ್ ನೇತೃತ್ವದ ಟಿಆರ್ಎಸ್ ಪಕ್ಷ 88 ಕ್ಷೇತ್ರದಲ್ಲಿ ಜಯ ಸಾಧಿಸಿತ್ತು. ಕೇವಲ ಹದಿಮೂರು ಕ್ಷೇತ್ರದಲ್ಲಿ ಟಿಡಿಪಿ ಸ್ಪರ್ಧಿಸಿದ್ದರೂ ಎರಡು ಕ್ಷೇತ್ರದಲ್ಲಿ ನಾಯ್ಡು ಪಕ್ಷ ಗೆಲುವನ್ನು ಸಾಧಿಸಿತ್ತು. ಆದರೆ, ಎರಡು ವರ್ಷದಲ್ಲಿ ನಡೆಯ ಬೇಕಾಗಿರುವ ಅಸೆಂಬ್ಲಿ ಚುನಾವಣೆಗೆ ಮುನ್ನ ಪಕ್ಷದ ಬೇರನ್ನು ಬಲಪಡಿಸಲು ರಣತಂತ್ರವನ್ನು ಚಂದ್ರಬಾಬು ನಾಯ್ಡು ರೂಪಿಸಲು ಆರಂಭಿಸಿದ್ದರು. ಆದರೆ..

ಇಬ್ಬರು ಟಿಡಿಪಿ ಶಾಸಕರ ರಾಜೀನಾಮೆ
ಆದರೆ, ಪಕ್ಷದ ಇಬ್ಬರು ಶಾಸಕರು ಕೆಸಿಆರ್ ನೇತೃತ್ವದ ಟಿಆರ್ಎಸ್ ಪಕ್ಷಕ್ಕೆ ನಿಯತ್ತು ತೋರಿ ತೆಲುಗುದೇಶಂ ಪಕ್ಷಕ್ಕೆ ರಾಜೀನಾಮೆ ನೀಡಿರುವುದರಿಂದ ಟಿಡಿಪಿ, ತೆಲಂಗಾಣ ಅಸೆಂಬ್ಲಿಯಲ್ಲಿ ತನ್ನ ಅಸ್ತಿತ್ವವನ್ನೇ ಕಳೆದುಕೊಂಡಿದೆ. ಸ್ಪೀಕರ್ ಪಿ. ಶ್ರೀನಿವಾಸ ರೆಡ್ಡಿಯವರಿಗೆ ಇಬ್ಬರು ಟಿಡಿಪಿ ಶಾಸಕರು ರಾಜೀನಾಮೆ ಸಲ್ಲಿಸಿರುವುದನ್ನು ಸ್ಪೀಕರ್ ಕಚೇರಿ ಧೃಡೀಕರಿಸಿದೆ. ಎಸ್.ವೆಂಕಟ ವೀರಯ್ಯ ಮತ್ತು ಎಂ.ನಾಗೇಶ್ವರ ರಾವ್ ರಾಜೀನಾಮೆ ನೀಡಿದ ಇಬ್ಬರು ಶಾಸಕರು.

ಚಂದ್ರಬಾಬು ನಾಯ್ಡು ಅನುಮತಿ ಇಲ್ಲದೇ ರಾಜೀನಾಮೆ
ಇಬ್ಬರು ಶಾಸಕರು ರಾಜೀನಾಮೆ ನೀಡಿದ ವಿದ್ಯಮಾನಕ್ಕಿಂತಲೂ, ಟಿಡಿಪಿಯನ್ನು ಕಟ್ಟಿ ಬೆಳೆಸಿದ ಚಂದ್ರಬಾಬು ನಾಯ್ಡು ಅವರ ಅನುಮತಿಯನ್ನು ಪಡೆಯದೇ ತೆಲುಗುದೇಶಂ ಪಕ್ಷವನ್ನು ಟಿಆರ್ಎಸ್ ಪಕ್ಷದ ಜೊತೆಗೆ ವಿಲೀನಗೊಳಿಸಲು ಇಬ್ಬರು ಶಾಸಕರು ಸ್ಪೀಕರ್ ಅವರಿಗೆ ಪತ್ರ ಬರೆದಿರುವುದು ನಾಯ್ಡು ಅವರನ್ನು ತೀವ್ರ ಮುಜುಗರಕ್ಕೀಡಾಗುವಂತೆ ಮಾಡಿದೆ.

ಸಿಎಂ ಜಗನ್, ಮೋದಿ ಮತ್ತು ಅಮಿತ್ ಶಾ ಜೊತೆಗೆ ಉತ್ತಮ ಸಂಬಂಧ
ಬಿಜೆಪಿ ಜೊತೆಗೆ ದೂರವಾದ ನಂತರ ತೆಲುಗುದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ದೇಶವ್ಯಾಪಿ ಸಂಚರಿಸಿ ಮೋದಿ ವಿರುದ್ದ ಪ್ರಚಾರ ನಡೆಸಿದ್ದರು. ಬದಲಾದ ರಾಜಕೀಯದಲ್ಲಿ ಮತ್ತೆ ಎನ್ಡಿಎ ಮೈತ್ರಿಕೂಟಕ್ಕೆ ಹತ್ತಿರವಾಗುವ ಸೂಚನೆಯನ್ನು ನೀಡಿದ್ದರು ಕೂಡಾ. ಆದರೆ, ಸಿಎಂ ಜಗನ್, ಮೋದಿ ಮತ್ತು ಅಮಿತ್ ಶಾ ಜೊತೆಗೆ ಉತ್ತಮ ಸಂಬಂಧವನ್ನು ಇಟ್ಟುಕೊಂಡಿರುವುದರಿಂದ ನಾಯ್ಡು ಅವರ ಈ ಗೇಂ ಪ್ಲ್ಯಾನ್ ವರ್ಕೌಟ್ ಆಗುತ್ತಿಲ್ಲ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications