ಚಿತ್ತೂರು ಎನ್ ಕೌಂಟರ್: ಎಸ್ ಟಿಎಫ್ ಮೇಲೆ ಎಫ್ ಐಆರ್
ಹೈದರಾಬಾದ್, ಏ.16: ತಮಿಳುನಾಡು ಮೂಲದ ಕೂಲಿ ಕಾರ್ಮಿಕ ಹತ್ಯೆ ಆರೋಪದ ಮೇಲೆ ಸ್ಪೆಷಲ್ ಟಾಸ್ಕ್ ಫೋರ್ಸ್ ಪೊಲೀಸರ ಮೇಲೆ ಕೊಲೆ ಆರೋಪ ಹೊರೆಸಿ ಪ್ರಕರಣ ದಾಖಲಿಸಲಾಗಿದೆ. ಎಫ್ ಐಆರ್ ಹಾಕಿ ತನಿಖೆ ಕೈಗೊಳ್ಳಲಾಗಿದೆ ಎಂದು ಚಿತ್ತೂರು ಪೊಲೀಸರು ಆಂಧ್ರಪ್ರದೇಶ ಹೈಕೋರ್ಟಿಗೆ ಹೇಳಿದ್ದಾರೆ.
ಚಿತ್ತೂರು ಎನ್ಕೌಂಟರ್ನಲ್ಲಿ ಮೃತ ಕೂಲಿಕಾರ್ಮಿಕ, ತಮಿಳುನಾಡು ನಿವಾಸಿ ಶಶಿಕುಮಾರ್ ಅವರ ಪತ್ನಿ ಮುನಿಯಮ್ಮಾಳ್ಎಂಬುವರು ಎಸ್ ಟಿಎಫ್ ವಿರುದ್ಧ ದೂರು ಸಲ್ಲಿಸಿದ್ದರು. ದೂರಿನ ಮೇರೆಗೆ ಕೊಲೆ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಹೆಚ್ಚುವರಿ ಅಡ್ವೋಕೇಟ್ ಜನರಲ್(ಎಎಜಿ) ಡಿ.ಶ್ರೀನಿವಾಸ್ ಅವರು ಬುಧವಾರ ಮುಖ್ಯ ನ್ಯಾಯಾಧೀಶ ಕಲ್ಯಾಣ ಜ್ಯೋತಿ ಸೇನ್ಗುಪ್ತಾ ಮತ್ತು ನ್ಯಾ.ಪಿ.ವಿ.ಸಂಜಯಕುಮಾರ ಅವರನ್ನೊಳಗೊಂಡ ವಿಭಾಗೀಯ ಪೀಠಕ್ಕೆ ತಿಳಿಸಿದರು. [ಆಂಧ್ರ -ತಮಿಳುನಾಡು ಸಂಬಂಧಕ್ಕೆ ಬೆಂಕಿ ಹಚ್ಚಿದ ರಕ್ತ ಚಂದನ]

ಎಸ್ಟಿಎಫ್ ಸಿಬ್ಬಂದಿಗಳ ವಿರುದ್ಧ ಐಪಿಸಿಯ ಕಲಂ 302,364 ಮತ್ತು 34ರಡಿ ಎಫ್ಐಆರ್ ದಾಖಲಾಗಿದೆ. ತನಿಖೆಯನ್ನು ವಿಶೇಷ ತಂಡ ಕೈಗೊಳ್ಳಲಿದೆ ಎಂದು ಎಎಜಿ ಶ್ರೀನಿವಾಸ್ ಹೇಳಿದ್ದಾರೆ.
ಚಿತ್ತೂರು ಜಿಲ್ಲೆಯ ತಿರುಪತಿ ಸಮೀಪದ ಅರಣ್ಯ ಪ್ರದೇಶದಲ್ಲಿ ರಕ್ತಚಂದನ ಕಳ್ಳಸಾಗಾಣಿಕೆ ಮಾಡುವವರ ತಂಡದ ಮೇಲೆ ದಾಳಿ ನಡೆಸಿದ್ದ ಅರಣ್ಯ ಅಧಿಕಾರಿಗಳು ಹಾಗೂ ಎಸ್ ಟಿಎಫ್ ಸುಮಾರು 20ಜನರನ್ನು ಹತ್ಯೆ ಮಾಡಿತ್ತು.
Chennai:Pro-Tamil groups protest against Andhra Pradesh&Tamil Nadu Govt demanding CBI inquiry into Chittoor encounter pic.twitter.com/TcmZmDDjUb
— ANI (@ANI_news) April 16, 2015 ಎನ್ ಕೌಂಟರ್ ಹೆಸರಿನಲ್ಲಿ ಅಮಾಯಕ ಕೂಲಿ ಕಾರ್ಮಿಕರನ್ನು ಹತ್ಯೆ ಮಾಡಲಾಗಿದೆ ಎಂದು ತಮಿಳುನಾಡಿನಲ್ಲಿ ಕೂಗೆದ್ದಿತ್ತು. ಭಾರಿ ಪ್ರತಿಭಟನೆ ನಂತರ ಆಂಧ್ರಪ್ರದೇಶ ಎಸ್ ಟಿಎಫ್ ವಿರುದ್ಧ ಕ್ರಮಕ್ಕೆ ಚಂದ್ರಬಾಬು ನಾಯ್ಡು ಸರ್ಕಾರ ಮುಂದಾಯಿತು.
ತಿರುನಲ್ವೇಲಿ, ತಿರುವಣ್ಣಾಮಲೈ, ಸೇಲಂ ಮೂಲದ ಮೃತ ಕೂಲಿ ಕಾರ್ಮಿಕರಿಗೆ ತಮಿಳುನಾಡಿನ ಪನ್ನೀರ್ ಸೆಲ್ವಂ ಸರ್ಕಾರ ತಲಾ 3 ಲಕ್ಷ ರು ಪರಿಹಾರ ಧನ ಘೋಷಿಸಿತ್ತು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications