ದೇವರಿಗೂ ಸಿಎಎ: ತಿರುಪತಿ ತಿಮ್ಮಪ್ಪ, ಶಬರಿಮಲೆ ಅಯ್ಯಪ್ಪಗೂ ಪೌರತ್ವ!
ಹೈದ್ರಾಬಾದ್, ಜನವರಿ.26: ಭಾರತದಲ್ಲಿ ಜನರಿಗಷ್ಟೇ ಅಲ್ಲ ದೇವರಿಗೂ ಪೌರತ್ವ ತಿದ್ದುಪಡಿ ಕಾಯ್ದೆ ಅನ್ವಯವಾಗುತ್ತದೆ. ದೇಶದ ದೊಡ್ಡ ದೊಡ್ಡ ದೇವಸ್ಥಾನಗಳ ದೇವರಿಗೂ ಭಾರತದ ಪೌರತ್ವವನ್ನು ನೀಡಬೇಕೆಂತೆ. ಇಂಥದೊಂದು ಬೇಡಿಕೆ ಇದೀಗ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.
ತೆಲಂಗಾಣದ ಚಿಲ್ಕೂರು ದೇವಸ್ಥಾನದ ಬಾಲಾಜಿ ವೆಂಕಟೇಶ್ವರ ಸ್ವಾಮಿಗೆ ಪೌರತ್ವ ತಿದ್ದುಪಡಿ ಕಾಯ್ದೆ ಅಡಿಯಲ್ಲಿ ಭಾರತದ ಪೌರತ್ವವನ್ನು ನೀಡಬೇಕು ಎಂದು ದೇವಸ್ಥಾನದ ಪೂಜಾರಿ ಸಿ ಎಸ್ ರಂಗರಾಜನ್ ಮನವಿ ಮಾಡಿಕೊಂಡಿದ್ದಾರೆ.
ದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ನಾಗರಿಕ ನೊಂದಣಿ ವಿರುದ್ಧ ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರದ ನೀತಿಯನ್ನು ಖಂಡಿಸಿ ಈಗಾಗಲೇ ರಾಜ್ಯ ಸರ್ಕಾರಗಳು ವಿಧಾನಸಭೆಗಳಲ್ಲಿ ನಿರ್ಣಯ ಮಂಡಿಸುತ್ತಿವೆ. ಇದರ ನಡುವೆ ದೇವಸ್ಥಾನದ ಪೂಜಾರಿ ನೀಡಿರುವ ಹೇಳಿಕೆ ಸಾಕಷ್ಟು ಸುದ್ದಿಯಾಗಿದೆ.

ತಿರುಪತಿ ತಿಮ್ಮಪ್ಪ, ಶಬರಿಮಲೆ ಅಯ್ಯಪ್ಪ ಸ್ವಾಮಿಗೂ ಪೌರತ್ವ!
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆಯ ಅಡಿಯಲ್ಲಿ 5(4) ವಿಧಿಯ ಪ್ರಕಾರ ದೇವರಿಗೂ ಪೌರತ್ವವನ್ನು ನೀಡಬೇಕು. ತಿರುಮಲದ ತಿರುಪತಿ ತಿಮ್ಮಪ್ಪ ಹಾಗೂ ಶಬರಿಮಲೆ ಅಯ್ಯಪ್ಪ ಸ್ವಾಮಿ ಹಾಗೂ ಕೇರಳದ ಪ್ರಸಿದ್ಧ ಪದ್ಮನಾಭಸ್ವಾಮಿ ಸೇರಿದಂತೆ ಎಲ್ಲ ದೇವರಿಗೂ ಭಾರತದ ಪೌರತ್ವ ಅನ್ವಯವಾಗಬೇಕು. ದೇವರಿಗೂ ಪೌರತ್ವವನ್ನು ನೀಡಬೇಕು ಎಂದು ಪೂಜಾರಿ ಸಿ.ಎಸ್.ರಂಗರಾಜನ್ ಪ್ರತಿಪಾದಿಸಿದ್ದಾರೆ.
ಭಾರತವು ಜಾತ್ಯಾತೀತ ರಾಷ್ಟ್ರವಾಗಿದ್ದರೂ ಸಹ ಹಿಂದೂ ದೇವಸ್ಥಾನಗಳು ಹಾಗೂ ದತ್ತಿ ಸಂಸ್ಥೆಗಳಿಗೆ ಬೆದರಿಕೆ ಹಾಕಲಾಗುತ್ತಿದೆ. ನ್ಯಾಯಾಂಗದ ನಿರ್ಧಾರ ಹಾಗೂ ಸಂವಿಧಾನದ ನಿಬಂಧನೆ ನಡುವೆಯೂ ದೇವಸ್ಥಾನಗಳನ್ನು ಸ್ವಾಧೀನಪಡಿಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications