ತೆಲಂಗಾಣದಲ್ಲಿ ಸೋನಿಯಾ ಮ್ಯಾಜಿಕ್, ಕಾಂಗ್ರೆಸ್ ಪುಟಿದೇಳೋಕೆ ಅದೊಂದೇ ಟಾನಿಕ್!
Recommended Video

ನವದೆಹಲಿ, ನವೆಂಬರ್ 21: ಡಿಸೆಂಬರ್ ತಿಂಗಳಿನಲ್ಲಿ ನಡೆಯಲಿರುವ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ನಡೆಸಲಿರುವ ರ್ಯಾಲಿ ರಾಜ್ಯ ರಾಜಕಾರಣದಲ್ಲಿ ಹೊಸ ತಲ್ಲಣ ಸೃಷ್ಟಿಸಲಿದೆ ಎಂದು ಕಾಂಗ್ರೆಸ್ ನಂಬಿದೆ.
ತೆಲಂಗಾಣದಲ್ಲಿ ನವೆಂಬರ್ 23ರಂದು ಸೋನಿಯಾ ಗಾಂಧಿ ಅವರು ರ್ಯಾಲಿಯೊಂದನ್ನು ನಡೆಸಲಿದ್ದು, ಈ ರ್ಯಾಲಿ ತೆಲಂಗಾಣ ಚುನಾವಣೆಯ ದಿಕ್ಕನ್ನೇ ಬದಲಿಸುವ ಸಾಧ್ಯತೆ ಇದೆ ಎಂಬುದು ಕಾಂಗ್ರೆಸ್ಸಿಗರ ಲೆಕ್ಕಾಚಾರ.
ಈ ರ್ಯಾಲಿಯಲ್ಲಿ ಸೋನಿಯಾ ಗಾಂಧಿ ಅವರು ಭಾವನಾತ್ಮಕ ಭಾಷಣ ಮಾಡಲಿದ್ದಾರೆ. ಸೋನಿಯಾ ಗಾಂಧಿ ಅವರ ಒಂದೇ ಒಂದು ರ್ಯಾಲಿಯೂ ರಾಜ್ಯ ರಾಜಕಾರಣಕ್ಕೆ ಅತ್ಯಂತ ಅಗತ್ಯವಾಗಿದ್ದು, ಕಾಂಗ್ರೆಸ್ ಅದನ್ನು ಉತ್ಸುಕತೆಯಿಂದ ಎದುರು ನೋಡುತ್ತಿದೆ ಎಂದು ತೆಲಂಗಾಣ ಕಾಂಗ್ರೆಸ್ ಉಸ್ತುವಾರಿ ಆರ್ ಸಿ ಖುಂಟಿಯಾ ಹೇಳಿದ್ದಾರೆ.

ತೆಲುಗು ದೇಶಂ ನಾಯಕರೂ ಭಾಗಿ?
ಕಾಂಗ್ರೆಸ್ ಜೊತೆ ತೆಲಂಗಾಣದಲ್ಲಿ ಮೈತ್ರಿ ಮಾಡಿಕೊಂಡಿರುವ ತೆಲುಗುದೇಶಂ ಪಕ್ಷದ ನಾಯಕರೂ ಈ ರ್ಯಾಲಿಯಲ್ಲಿ ಭಾಗವಹಿಸಲಿದ್ದಾರಾ ಎಂಬ ಪ್ರಶ್ನೆಗೆ ಖುಂಟಿಯಾ ಅವರು ಪ್ರತಿಕ್ರಿಯೆ ನೀಡಿಲ್ಲ. ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ಅವರು ಈ ರ್ಯಾಲಿಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.

ಸೋನಿಯಾ ಗಾಂಧಿಗೆ ಸಾಕಷ್ಟು ಅಭಿಮಾನಿಗಳು
ತೆಲಂಗಾಣದಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಗ್ಗೆ ಸಾಕಷ್ಟು ಗೌರವವಿದೆ. ಅವರಿಗೆ ಸಾಕಷ್ಟು ಅಭಿಮಾನಿಗಳೂ ಇದ್ದಾರೆ. ಅದೂ ಅಲ್ಲದೆ, ಇಲ್ಲಿನ ಸ್ಥಳೀಯ ಕಾಂಗ್ರೆಸ್ ನಾಯಕರ್ಯಾರೂ ಪ್ರಭಾವಶಾಲಿಗಳಲ್ಲದ ಕಾರಣ ಸೋನಿಯಾ ಗಾಂಧಿ ಅವರ ರ್ಯಾಲಿಯ ಮೇಲೆಯೇ ಇಲ್ಲಿನ ಕಾಂಗ್ರೆಸ್ ಭರವಸೆ ಇಟ್ಟುಕೊಂಡಿದೆ.

'ಚಂದ್ರಶೇಖರ್ ರಾವ್ ಗೆ ಸೋಲು'
"ಅವಧಿಗೂ ಮುನ್ನವೇ ಚುನಾವಣೆ ನಡೆಸುವುದಕ್ಕೆ ಕಾರಣರಾದ ತೆಲಂಗಾಣ ರಾಷ್ಟ್ರೀಯ ಸಮಿತಿ ಮುಖಂಡ ಕೆ.ಚಂದ್ರಶೇಖರ್ ರಾವ್ ಅವರು ಸೋಲಲಿದ್ದಾರೆ. ಅವಧಿಗೂ ಮುನ್ನವೇ ಚುನಾವಣೆ ನಡೆಯುವಂತೆ ಮಾಡಿದ್ದೇ ಅವರಿಗೆ ಮುಳುವಾಗಲಿದೆ. ಕಾಂಗ್ರೆಸ್ ಈ ರಾಜ್ಯದಲ್ಲಿ ಟಿಡಿಪಿ, ಎಡಪಕ್ಷಗಳ ಜೊತೆ ಮೈತ್ರಿ ಮಾಡಿಕೊಂಡಿರುವುದರಿಂದ ಗೆಲುವು ಸುಲಭವಾಗಲಿದೆ" ಎಂದು ಆರ್ ಸಿ ಖುಂಟಿಯಾ ಹೇಳಿದ್ದಾರೆ.

ಚುನಾವಣೆ ಯಾವಾಗ?
119 ಕ್ಷೇತ್ರಗಳ ತೆಲಂಗಾಣ ವಿಧಾನಸಭೆಗೆ ಡಿಸೆಂಬರ್ 7 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಫಲಿತಾಂಶ ಡಿಸೆಂಬರ್ 11 ರಂದು ಹೊರಬೀಳಲಿದೆ. ತೆಲಂಗಾಣದ ಮುಖ್ಯಮಂತ್ರಿಯಾಗಿದ್ದ ಕೆ ಚಂದ್ರಶೇಖರ ರಾವ್ ಅವರು ವಿಧಾನಸಭೆಯನ್ನು ವಿಸರ್ಜಿಸಿದ್ದರಿಂದ ಅವಧಿಗೂ ಮುನ್ನವೇ ಚುನಾವಣೆ ನಡೆಯುತ್ತಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications