ಕತ್ತೆ ಕದ್ದ ಆರೋಪದಲ್ಲಿ ಕಾಂಗ್ರೆಸ್ ಮುಖಂಡನ ಬಂಧನ!
ಹೈದ್ರಾಬಾದ್, ಫೆಬ್ರವರಿ 18: ತೆಲಂಗಾಣದ ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ ಅಧ್ಯಕ್ಷ ಮತ್ತು ಕಾಂಗ್ರೆಸ್ ಮುಖಂಡ ವೆಂಕಟ್ ಬಲ್ಮೂರ್ ಅವರನ್ನು ಕತ್ತೆ ಕಳ್ಳತನದ ಆರೋಪದ ಮೇಲೆ ಬಂಧಿಸಲಾಗಿದೆ.
ಕಳೆದ ಫೆಬ್ರವರಿ 17ರಂದು ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್) ಮುಖ್ಯಸ್ಥ ಹಾಗೂ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಜನ್ಮದಿನವನ್ನು ಕಾಂಗ್ರೆಸ್ ವಿಭಿನ್ನವಾಗಿ ಆಚರಿಸಿತು. ಕತ್ತೆ ಎದುರು ಕೇಕ್ ಕತ್ತರಿಸುವ ಮೂಲಕ ಕೆಸಿಆರ್ ಹುಟ್ಟುಹಬ್ಬದ ಬಗ್ಗೆ ಲೇವಡಿ ಮಾಡುವುದಕ್ಕೆ ಕಾಂಗ್ರೆಸ್ ಯೋಜನೆ ಹಾಕಿಕೊಂಡಿತ್ತು.
ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾದ ಅಧ್ಯಕ್ಷ ವೆಂಕಟೇಶ್ ಬಲ್ಮೂರ್, ಶಾತವಾಹನ ವಿಶ್ವವಿದ್ಯಾಲಯದ ಬಳಿ ಕತ್ತೆಯ ಮುಖಕ್ಕೆ ಕೆಸಿಆರ್ ಭಾವಚಿತ್ರವನ್ನು ಹಾಕಿ ಹುಟ್ಟುಹಬ್ಬವನ್ನು ಆಚರಿಸಿದ್ದರು. ಈ ಸಂಬಂಧ ತೆಲಂಗಾಣ ರಾಷ್ಟ್ರ ಸಮಿತಿ ಮುಖಂಡರು ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಗುರುವಾರ ರಾತ್ರಿ ಹುಜೂರಾಬಾದ್ ಪಟ್ಟಣದಲ್ಲಿ ವೆಂಕಟೇಶ್ ಬಲ್ಮೂರ್ ಅವರನ್ನು ಬಂಧಿಸಿದ್ದರು.

ವೆಂಕಟೇಶ್ ಬಲ್ಮೂರ್ ಟ್ವೀಟ್:
"ರೈತರು, ವಿದ್ಯಾರ್ಥಿಗಳು ಮತ್ತು ನಿರುದ್ಯೋಗಿ ಯುವಕರ ಜೀವನವನ್ನು ಹಾಳು ಮಾಡಿದ್ದಕ್ಕಾಗಿ. ಸುಳ್ಳು ಭರವಸೆಗಳಿಗಾಗಿ, ಹುಸಿ ಪ್ರಚಾರಕ್ಕಾಗಿ," ಕೆ ಚಂದ್ರಶೇಖರ್ ರಾವ್ ಜನ್ಮದಿನದಂದು ಕತ್ತೆಯ ಚಿತ್ರಗಳೊಂದಿಗೆ ಬಲ್ಮೂರ್ ಟ್ವೀಟ್ ಮಾಡಿದ್ದರು. ಒಟ್ಟು ಆರು ಕಾಂಗ್ರೆಸ್ ನಾಯಕರ ವಿರುದ್ಧ ಐಪಿಸಿಯ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಲ್ಮೂರ್ ಇತ್ತೀಚೆಗೆ ಹುಜೂರಾಬಾದ್ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದರು.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications