ಕತ್ತೆ ಕದ್ದ ಆರೋಪದಲ್ಲಿ ಕಾಂಗ್ರೆಸ್ ಮುಖಂಡನ ಬಂಧನ!
ಹೈದ್ರಾಬಾದ್, ಫೆಬ್ರವರಿ 18: ತೆಲಂಗಾಣದ ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ ಅಧ್ಯಕ್ಷ ಮತ್ತು ಕಾಂಗ್ರೆಸ್ ಮುಖಂಡ ವೆಂಕಟ್ ಬಲ್ಮೂರ್ ಅವರನ್ನು ಕತ್ತೆ ಕಳ್ಳತನದ ಆರೋಪದ ಮೇಲೆ ಬಂಧಿಸಲಾಗಿದೆ.
ಕಳೆದ ಫೆಬ್ರವರಿ 17ರಂದು ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್) ಮುಖ್ಯಸ್ಥ ಹಾಗೂ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಜನ್ಮದಿನವನ್ನು ಕಾಂಗ್ರೆಸ್ ವಿಭಿನ್ನವಾಗಿ ಆಚರಿಸಿತು. ಕತ್ತೆ ಎದುರು ಕೇಕ್ ಕತ್ತರಿಸುವ ಮೂಲಕ ಕೆಸಿಆರ್ ಹುಟ್ಟುಹಬ್ಬದ ಬಗ್ಗೆ ಲೇವಡಿ ಮಾಡುವುದಕ್ಕೆ ಕಾಂಗ್ರೆಸ್ ಯೋಜನೆ ಹಾಕಿಕೊಂಡಿತ್ತು.
ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾದ ಅಧ್ಯಕ್ಷ ವೆಂಕಟೇಶ್ ಬಲ್ಮೂರ್, ಶಾತವಾಹನ ವಿಶ್ವವಿದ್ಯಾಲಯದ ಬಳಿ ಕತ್ತೆಯ ಮುಖಕ್ಕೆ ಕೆಸಿಆರ್ ಭಾವಚಿತ್ರವನ್ನು ಹಾಕಿ ಹುಟ್ಟುಹಬ್ಬವನ್ನು ಆಚರಿಸಿದ್ದರು. ಈ ಸಂಬಂಧ ತೆಲಂಗಾಣ ರಾಷ್ಟ್ರ ಸಮಿತಿ ಮುಖಂಡರು ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಗುರುವಾರ ರಾತ್ರಿ ಹುಜೂರಾಬಾದ್ ಪಟ್ಟಣದಲ್ಲಿ ವೆಂಕಟೇಶ್ ಬಲ್ಮೂರ್ ಅವರನ್ನು ಬಂಧಿಸಿದ್ದರು.

ವೆಂಕಟೇಶ್ ಬಲ್ಮೂರ್ ಟ್ವೀಟ್:
"ರೈತರು, ವಿದ್ಯಾರ್ಥಿಗಳು ಮತ್ತು ನಿರುದ್ಯೋಗಿ ಯುವಕರ ಜೀವನವನ್ನು ಹಾಳು ಮಾಡಿದ್ದಕ್ಕಾಗಿ. ಸುಳ್ಳು ಭರವಸೆಗಳಿಗಾಗಿ, ಹುಸಿ ಪ್ರಚಾರಕ್ಕಾಗಿ," ಕೆ ಚಂದ್ರಶೇಖರ್ ರಾವ್ ಜನ್ಮದಿನದಂದು ಕತ್ತೆಯ ಚಿತ್ರಗಳೊಂದಿಗೆ ಬಲ್ಮೂರ್ ಟ್ವೀಟ್ ಮಾಡಿದ್ದರು. ಒಟ್ಟು ಆರು ಕಾಂಗ್ರೆಸ್ ನಾಯಕರ ವಿರುದ್ಧ ಐಪಿಸಿಯ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಲ್ಮೂರ್ ಇತ್ತೀಚೆಗೆ ಹುಜೂರಾಬಾದ್ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದರು.
-
Gen Z ಪ್ರತಿಭಟನೆಯಲ್ಲಿ 'ಪಾತ್ರ': ಬಲೆನ್ ಪ್ರಮಾಣ ವಚನ ಸ್ವೀಕರಿಸಿದ ಮರುದಿನವೇ ನೇಪಾಳ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಬಂಧನ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ












Click it and Unblock the Notifications