ಅಭ್ಯರ್ಥಿಗಳ ಪಟ್ಟಿ: ತೆಲಂಗಾಣ ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಅಸಮಾಧಾನ
ಹೈದರಾಬಾದ್, ನವೆಂಬರ್ 15: ಡಿಸೆಂಬರ್ ನಲ್ಲಿ ನಡೆಯಲಿರುವ ತೆಲಂಗಾಣ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ 10 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ.
ಕಳೆದ ಭಾನುವಾರವಷ್ಟೇ 65 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿತ್ತು.
ಟಿಕೆಟ್ ಹಂಚಿಕೆಯ ನಂತರ ತೆಲಂಗಾಣ ಕಾಂಗ್ರೆಸ್ ನಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ತೆಲಂಗಾಣ ಪ್ರದೇಶ ಕಾಂಗ್ರೆಸ್ ಕಮಿಟಿ(ಟಿಪಿಸಿಸಿ) ಎದುರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.
ತೆಲಂಗಾಣದಲ್ಲಿ ಟಿಡಿಪಿ ಮತ್ತು ಎಡಪಕ್ಷಗಳೊಂದಿಗೆ ಚುನಾವಣಾ ಪೂರ್ವ ಮೈತ್ರಿಯ ನಿರ್ಧಾರ ಕೈಗೊಂಡಿರುವ ಕಾಂಗ್ರೆಸ್ ಟಿಕೆಟ್ ಹಂಚಿಕೆಯ ವಿಷಯದಲ್ಲೂ ಈ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡಿದೆ. ಒಟ್ಟು 119 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ತೆಲಂಗಾಣದಲ್ಲಿ ಸುಮಾರು 90 ಅಭ್ಯರ್ಥಿಗಳನ್ನು ಕಾಂಗ್ರೆಸ್ ಪಕ್ಷ ಕಣಕ್ಕಿಳಿಸಲಿದ್ದು, ಇನ್ನುಳಿದ ಸ್ಥಾನಗಳಿಗೆ ಮಿತ್ರಪಕ್ಷಗಳು ತಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸಲಿವೆ.
ಇದು ಸ್ಥಳೀಯ ಕಾಂಗ್ರೆಸ್ಸಿಗರಿಗೆ ಇಷ್ಟವಿಲ್ಲ. ಅದೂ ಅಲ್ಲದೆ ಟಿಕೆಟ್ ಹಂಚಿಕೆಯ ಸಮಯದಲ್ಲೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಾಗಿಲ್ಲ ಎಂಬ ಮಾತೂ ಕೇಳಿಬರುತ್ತಿದೆ.

ಮಹಾಮೈತ್ರಿ ಫಲಿಸುತ್ತಾ?
ತೆಲಂಗಾಣದಲ್ಲಿ ಕೆ ಚಂದ್ರಶೇಖರ್ ರಾವ್ ನೇತೃತ್ವದ ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್ ಎಸ್) ಪಕ್ಷವನ್ನು ಸೋಲಿಸುವ ಉದ್ದೇಶ ಹೊಂದಿರುವ ಕಾಂಗ್ರೆಸ್ ಮತ್ತು ತೆಲುಗು ದೇಶಂ ಪಕ್ಷ(ಟಿಡಿಪಿ)ಗಳು ಒಂದಾಗಿವೆ. ಅಷ್ಟೇ ಅಲ್ಲ ತೆಲಂಗಾಣ ಜನ ಸಮಿತಿ(ಟಿಜೆಎಸ್), ಸಿಪಿಐ ಪಕ್ಷಗಳೂ ಕಾಂಗ್ರೆಸ್ ಜೊತೆ ಕೈಜೋಡಿಸಿವೆ. ತೆಲಂಗಾಣದ 119 ಸ್ಥಾನಗಳಲ್ಲಿ ಟಿಆರ್ ಎಸ್ ಬಹುಮತ ಪಡೆಯುವ ಸಾಧ್ಯತೆಗಳು ಹೆಚ್ಚಿದ್ದು, ಅಕಸ್ಮಾತ್ ಬಹುಮತ ಪಡೆಯುವಲ್ಲಿ ಟಿಆರ್ ಎಸ್ ವಿಫಲವಾದರೆ, ಬಿಜೆಪಿ ಅದಕ್ಕೆ ಬೆಂಬಲ ನೀಡಿದರೆ ಅಚ್ಚರಿಯಿಲ್ಲ. ಬಿಜೆಪಿ ಚುನಾವಣೆಗೂ ಮುನ್ನ ಸ್ವತಂತ್ರವಾಗಿಯೇ ಸ್ಪರ್ಧಿಸಿದರೂ, ಚುನಾವಣೆಯ ನಂತರ ಅಗತ್ಯ ಬಂದರೆ ಟಿಆರ್ ಎಸ್ ಗೆ ಬೆಂಬಲ ನೀಡಬಹುದು.

ಯಾವ ಪಕ್ಷಕ್ಕೆ ಎಷ್ಟು ಸೀಟು?
ಮಹಾಮೈತ್ರಿಕೂಟದಲ್ಲಿ ಕಾಂಗ್ರೆಸ್, ಟಿಡಿಪಿ, ಸಿಪಿಐ ಮತ್ತು ಟಿಜೆ ಎಸ್ ಪಕ್ಷಗಳಿದ್ದು, 119 ರಲ್ಲಿ 90 ಸ್ಥಾನಗಳಲ್ಲಿ ಕಾಂಗ್ರೆಸ್ ಸ್ಪರ್ಧಿಸಲಿದೆ. ಇನ್ನುಳಿದ ಸ್ಥಾನಗಳಲ್ಲಿ ಟಿಡಿಪಿ 14, ಟಿಜೆಎಸ್ 8 ಮತ್ತು ಸಿಪಿಐ ಮೂರರಿಂದ ಐದು ಕ್ಷೇತ್ರಗಳಲ್ಲಿ ಕಣಕ್ಕಿಳಿಯುವ ಸಾಧ್ಯತೆ ಇದೆ.

ಕಾರ್ಯಕರ್ತರ ಆಕ್ರೋಶ
ಕಾಂಗ್ರೆಸ್ ತನ್ನ ಮೂರು ಮಿತ್ರಪಕ್ಷಗಳಿಗಳ ಅಭ್ಯರ್ಥಿಗಳಿಗೂ ಚುನಾವಣೆಗೆ ನಿಲ್ಲಲು ಅವಕಾಶ ನೀಡಬೇಕಿರುವುದರಿಂದ ಹಲವರು ಟಿಕೆಟ್ ನಿಂದ ವಂಚಿತರಾಗಿದ್ದಾರೆ. ಇದರಿಂದಾಗಿ ಮೂಲ ಕಾಂಗ್ರೆಸ್ಸಿಗರು ಮತ್ತು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸಾಕಷ್ಟು ಅಸಮಾಧಾನ ಹುಟ್ಟಿಕೊಂಡಿದೆ. ಚುನಾವಣೆಗೂ ಮುನ್ನ ಹಲವು ಬೆಳವಣಿಗೆಗಳು, ಸಂಧಾನಗಳು ನಡೆದರೂ ಅಚ್ಚರಿಯಿಲ್ಲ.

ಚುನಾವಣೆ ಎಂದು?
119 ಕ್ಷೇತ್ರಗಳ ತೆಲಂಗಾಣ ವಿಧಾನಸಭೆಗೆ ಡಿಸೆಂಬರ್ 7 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಫಲಿತಾಂಶ ಡಿಸೆಂಬರ್ 11 ರಂದು ಹೊರಬೀಳಲಿದೆ. ತೆಲಂಗಾಣದ ಮುಖ್ಯಮಂತ್ರಿಯಾಗಿದ್ದ ಕೆ ಚಂದ್ರಶೇಖರ ರಾವ್ ಅವರು ವಿಧಾನಸಭೆಯನ್ನು ವಿಸರ್ಜಿಸಿದ್ದರಿಂದ ಅವಧಿಗೂ ಮುನ್ನವೇ ಚುನಾವಣೆ ನಡೆಯುತ್ತಿದೆ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು?












Click it and Unblock the Notifications