ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ ಶಂಕಿತರನ್ನು ಆಸ್ಪತ್ರೆ ದಿಗ್ಬಂಧನದಲ್ಲಿ ಇಟ್ಟರೂ ಸಾಮೂಹಿಕ ಪ್ರಾರ್ಥನೆ

|
Google Oneindia Kannada News

ಹೈದ್ರಾಬಾದ್, ಏಪ್ರಿಲ್.02: ಕೊರೊನಾ ವೈರಸ್ ಹರಡುವುದನ್ನು ನಿಯಂತ್ರಿಸುವ ಉದ್ದೇಶದಿಂದ ದೇಶವನ್ನು ಲಾಕ್ ಡೌನ್ ಮಾಡಲಾಗಿದೆ. ಮಾರಕ ಸೋಂಕಿನ ಲಕ್ಷಣಗಳು ಕಂಡು ಬಂದ ಶಂಕಿತರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಲಾಕ್ ಡೌನ್: ಬೆಳಗಾವಿಯಲ್ಲಿ ಮದ್ಯ ಸಿಗದಿದ್ದಕ್ಕೆ ವ್ಯಕ್ತಿ ಆತ್ಮಹತ್ಯೆಲಾಕ್ ಡೌನ್: ಬೆಳಗಾವಿಯಲ್ಲಿ ಮದ್ಯ ಸಿಗದಿದ್ದಕ್ಕೆ ವ್ಯಕ್ತಿ ಆತ್ಮಹತ್ಯೆ

ಹೈದ್ರಾಬಾದ್ ನಲ್ಲಿ ಇರುವ ಗಾಂಧಿ ಆಸ್ಪತ್ರೆಯಲ್ಲಿ ದಿಗ್ಬಂಧನದಲ್ಲೇ ಇರಿಸಿದ ಶಂಕಿತರು ಸಾಮೂಹಿಕ ಪ್ರಾರ್ಥನೆ ಮಾಡುವ ಮೂಲಕ ಲಾಕ್ ಡೌನ್ ನಿಯಮವನ್ನು ಉಲ್ಲಂಘಿಸಿದ್ದಾರೆ. ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ವರ್ತಿಸುತ್ತಿರುವುದಕ್ಕೆ ಇದೀಗ ಸಾಕ್ಷ್ಯ ಲಭ್ಯವಾಗಿದೆ.

Coronavirus: Peoples Mass Prayer At Quarantine Center Of Hydrabad Gandhi Hospital

ಸಮಾಜದಲ್ಲಿ ಓಡಾಡಿಕೊಂಡಿದ್ದಲ್ಲಿ ಸಾರ್ವಜನಿಕರಿಗೆ ಸೋಂಕು ಹರಡುವ ಅಪಾಯವಿರುತ್ತದೆ ಎಂಬ ಉದ್ದೇಶದಿಂದ ಶಂಕಿತರನ್ನು ದಿಗ್ಬಂಧನದಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಇಲ್ಲಿಯೂ ಕೂಡಾ ಶಂಕಿತರು ಬೇಜವಾಬ್ದಾರಿಯಾಗಿ ವರ್ತಿಸಿದ್ದಾರೆ.

Coronavirus: Peoples Mass Prayer At Quarantine Center Of Hydrabad Gandhi Hospital

ದಿಗ್ಬಂಧನಕ್ಕೆ ಒಳಗಾದ ಆಸ್ಪತ್ರೆಯಲ್ಲಿ ನಮಾಜ್:

ತೆಲಂಗಾಣದ ಹೈದ್ರಾಬಾದ್ ನಲ್ಲಿ ಇರುವ ಗಾಂಧಿ ಆಸ್ಪತ್ರೆಯಲ್ಲಿ ದಿಗ್ಬಂಧನಕ್ಕೆ ಒಳಗಾದ ಕೊರೊನಾ ವೈರಸ್ ಸೋಂಕಿತ ಶಂಕಿತರು ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳದೇ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದಾರೆ. ಅಕ್ಕಪಕ್ಕದಲ್ಲಿಯೇ ನಿಂತು ಪ್ರಾರ್ಥನೆ ಮಾಡಿದ್ದು, ನಿಯಮವನ್ನು ಉಲ್ಲಂಘಿಸಿರುವುದು ಇದೀಗ ಬೆಳಕಿಗೆ ಬಂದಿದೆ. ಇನ್ನು, ರಾಜ್ಯದಲ್ಲಿ ಇದುವರೆಗೂ 6 ಮಂದಿ ಕೊರೊನಾ ವೈರಸ್ ನಿಂದ ಪ್ರಾಣ ಬಿಟ್ಟಿದ್ದರೆ, 127 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. ಈ ಪೈಕಿ 14 ಮಂದಿ ಸೋಂಕಿತರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ.

English summary
Coronavirus: Peoples Mass Prayer At Quarantine Center Of Hydrabad Gandhi Hospital.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X