ಸ್ವದೇಶಿ ಲಸಿಕೆ ಕೊವ್ಯಾಕ್ಸಿನ್ ಪ್ರಯೋಗಕ್ಕೆ ಸಿಕ್ತು ಅನುಮತಿ!
ಹೈದರಾಬಾದ್, ಜೂನ್ 30: ಕೊರೊನಾವೈರಸ್ ವಿರುದ್ಧ ಲಸಿಕೆ, ಔಷಧ ಕಂಡು ಹಿಡಿಯಲು ವಿಶ್ವದೆಲ್ಲೆಡೆ ನಿರಂತರವಾಗಿ ಸಂಶೋಧನೆಗಳು ನಡೆದಿದೆ. ಈಗ ಸ್ವದೇಶಿ ಲಸಿಕೆ ಕೊವ್ಯಾಕ್ಸಿನ್ ಹೊಸ ಆಶಾಕಿರಣವಾಗಿ ಹೊರಹೊಮ್ಮಿದೆ.
ಹೈದರಾಬಾದ್ ಮೂಲದ ಲಸಿಕೆ ತಯಾರಕ ಕಂಪನಿ ಭಾರತ್ ಬಯೋಟೆಕ್ ತಯಾರಿಸಿರುವ ಕೊವ್ಯಾಕ್ಸಿನ್ ಲಸಿಕೆಯನ್ನು ಕ್ಲಿನಿಕಲ್ ಟ್ರಯಲ್ ಗೆ ಬಳಸಬಹುದು ಎಂದು ಡ್ರಗ್ ಕಂಟ್ರೋಲರ್ ಜನರಲ್ ಅಫ್ ಇಂಡಿಯಾ(ಡಿಸಿಜಿಐ) ಅನುಮತಿ ನೀಡಿದೆ.
ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಕಂಪನಿಗೆ ಇಂಡಿಯನ್ ಕೌನ್ಸಿಲ್ ಅಫ್ ಮೆಡಿಕಲ್ ರಿಸರ್ಚ್ ( ಐಸಿಎಂಆರ್) ಹಾಗೂ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ(ಎನ್ಐಜಿ) ಸಹಕಾರ ನೀಡಿವೆ.

ಸಂಸ್ಥೆ ಪೂರ್ವಭಾವಿ ಅಧ್ಯಯನಗಳಿಂದ ಕಂಡುಕೊಂಡ ಫಲಿತಾಂಶಗಳ ಆಧಾರದ ಮೇಲೆ ಮಾನವರ ಮೇಲೆ ಪ್ರಯೋಗಿಸಲು ಅನುಮತಿಯನ್ನು ಸಂಸ್ಥೆ ಕೋರಿತ್ತು. ನಿಯಮಾವಳಿಗೆ ಬದ್ಧವಾಗಿದ್ದರಿಂದ ಮೊದಲ ಹಾಗೂ ಎರಡನೇ ಹಂತದ ಕ್ಲಿನಿಕಲ್ ಪ್ರಯೋಗಗಳನ್ನು ಆರಂಭಿಸಲು ಅನುಮತಿ ನೀಡಲಾಗಿದೆ.
ಹೈದರಾಬಾದ್ ನಲ್ಲಿ ಅಭಿವೃದ್ಧಿಪಡಿಸಿದ ಲಸಿಕೆಗೆ ಕೊವ್ಯಾಕ್ಸಿನ್ ಎಂದು ಹೆಸರಿಡಲಾಗಿದೆ. ಇದು ದೇಶದ ಮೊದಲ ಸ್ಥಳೀಯ ಲಸಿಕೆಯಾಗಿದ್ದು ಕೊರೊನಾ ವಿರುದ್ಧ ಪರಿಣಾಮಕಾರಿಯಾಗಿ ಕೆಲಸ ಮಾಡಲಿದೆ, ಜುಲೈ 2020ರಲ್ಲಿ ಮೊದಲ ಹಂತದ ಕ್ಲಿನಿಕಲ್ ಟ್ರಯಲ್ ಆರಂಭವಾಗಲಿದೆ ಎಂದು ಭಾರತ್ ಬಯೋಟೆಕ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಡಾ. ಕೃಷ್ಣ ತಿಳಿಸಿದ್ದಾರೆ.
COVAXIN™, India's 1st indigenous Covid-19 vaccine, developed by Bharat Biotech successfully enters human trials.
— BharatBiotech (@BharatBiotech) June 29, 2020
@ICMRDELHI @DBTIndia @icmr_niv #BharatBiotech #COVAXIN #covid19 #Collaboration #Indiafightscorona #makeinindia #ICMR #coronavirusvaccine pic.twitter.com/MSehntuE8d
ಜಿನೋಮ್ ವ್ಯಾಲಿಯ ಪ್ರಯೋಗಾಲಯದಿಂದ ಹೊರ ಬಂದಿರುವ ಕೊವ್ಯಾಕ್ಸಿನ್ ನ ಕ್ಲಿನಿಕಲ್ ಟ್ರಯಲ್ ಅವಧಿ ಬಗ್ಗೆ ಹೆಚ್ಚಿನ ಮಾಹಿತಿಯಿಲ್ಲ. ಕನಿಷ್ಠ ಎರಡು ಹಂತದ ಕ್ಲಿನಿಕಲ್ ಟ್ರಯಲ್ ಯಶಸ್ವಿಯಾದ ಬಳಿಕ ಮಾರುಕಟ್ಟೆಯಲ್ಲಿ ಲಸಿಕೆ ಲಭ್ಯವಾಗಲ್ದೆ.
ಭಾರತದ ವಿಜ್ಞಾನಿ ಇ ಕೃಷ್ಣಾ ಸ್ಥಾಪಿಸಿದ ಭಾರತ್ ಬಯೋಟೆಕ್, ಹೈದರಾಬಾದಿನಲ್ಲಿ ಕೇಂದ್ರ ಕಚೆರಿ ಹೊಂದಿದೆ. ಈ ಹಿಂದೆ ಹಂದಿಜ್ವರ, ಎಚ್ 1 ಎನ್ 1 ವಿರುದ್ಧ HNVAC ಎಂಬ ವ್ಯಾಕ್ಸಿನ್ ಹೊರ ತಂದಿತ್ತು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications