Get Updates
Get notified of breaking news, exclusive insights, and must-see stories!

ಬುಕಿಗಳ ಜತೆ ನಂಟು ಆರೋಪ, ವೈಎಸ್ ಆರ್ ಕಾಂಗ್ರೆಸ್ ಶಾಸಕರ ವಿಚಾರಣೆ

ಹೈದರಾಬಾದ್, ಆಗಸ್ಟ್ 24: ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳು ವೈಎಸ್ ಆರ್ ಕಾಂಗ್ರೆಸ್ ಪಕ್ಷದ ಇಬ್ಬರು ಶಾಸಕರ ವಿಚಾರಣೆ ನಡೆಸಿದ್ದಾರೆ. ಕ್ರಿಕೆಟ್ ಬುಕಿಗಳು ಹಾಗೂ ಅವರ ಸಹವರ್ತಿಗಳ ಜತೆಗೆ ಶಾಸಕರ ಆರ್ಥಿಕ ವ್ಯವಹಾರಗಳ ವಿಚಾರವನ್ನು ಪೊಲೀಸರು ಪ್ರಶ್ನೆ ಮಾಡಿದ್ದಾರೆ.

ಬುಕಿಗಳೊಂದಿಗೆ ಯಾವುದೇ ದುಡ್ಡು-ಕಾಸಿನ ವ್ಯವಹಾರ ಮಾಡಿಲ್ಲ ಎಂದು ಶಾಸಕರು ಹೇಳಿದ್ದಾರೆ. ಜತೆಗೆ ತನಿಖಾಧಿಕಾರಿಗಳ ವಿಚಾರಣೆಗೆ ಸಂಪೂರ್ಣವಾದ ಸಹಕಾರ ನೀಡಿದ್ದಾರೆ.

Cricket betting: YSR Cogress MLAs deny role

ನೆಲ್ಲೂರು ಗ್ರಾಮಾಂತರ ಶಾಸಲ ಕೋಟಂರೆಡ್ಡಿ ಶ್ರೀಧರ್ ರೆಡ್ಡಿ ಮತ್ತು ನೆಲ್ಲೂರು ಪಟ್ಟಣದ ಶಾಸಕ ಪಿ.ಅನಿಲ್ ಕುಮಾರ್ ಇಬ್ಬರಿಗೂ ನೋಟಿಸ್ ನೀಡಲಾಗಿತ್ತು. ಆ ನಂತರ ತನಿಖಾಧಿಕಾರಿಗಳ ಮುಂದೆ ಹಾಜರಾಗಿದ್ದರು. ಹೆಚ್ಚುವರಿ ಎಸ್ ಪಿ ಬಿ.ಶರತ್ ಬಾಬು ಹಾಗೂ ತಂಡವು ಶಾಸಕರ ವಿಚಾರಣೆ ನಡೆಸಿದ್ದಾರೆ. ವೈಯಕ್ತಿಕ ಮಾಹಿತಿಗಳನ್ನು ಕೇಳಿದ್ದಾರೆ.

ಆರ್ಥಿಕ ವ್ಯವಹಾರಗಳ ಬಗ್ಗೆ ಪರಿಶೀಲನೆ ನಡೆಸಲು ವೈಯಕ್ತಿಕ ಹಾಗೂ ಕುಟುಂಬದವರ ಬ್ಯಾಂಕ್ ಮಾಹಿತಿಗಳನ್ನು ಪರಿಶೀಲಿಸಿ, ಅನುಮಾನಗಳನ್ನು ಬಗೆಹರಿಸಿಕೊಳ್ಳಬಹುದು ಎಂದು ಶ್ರೀಧರ್ ರೆಡ್ಡಿ ಮಾಧ್ಯಮದವರಿಗೆ ಹೇಳಿದ್ದಾರೆ.

ಇನ್ನು ವಿಪಕ್ಷಗಳ ಶಾಸಕರಿಗೆ ತೊಂದರೆ ಕೊಡಬೇಕು ಎಂಬ ಕಾರಣಕ್ಕೆ ಹಾಗೂ ರಾಜಕೀಯ ಲಾಭ ಪಡೆಯುವ ಉದ್ದೇಶದಿಂದ ಹೀಗೆ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಾಸಕ ಅನಿಲ್ ಕುಮಾರ್ ಮಾತನಾಡಿ, ಬುಕಿಗಳ ಜತೆ ಟಿಡಿಪಿ ಮುಖಂಡರ ನಂಟಿತ್ತು. ಆದರೆ ಅವರನ್ನು ಕೈ ಬಿಟ್ಟು ವೈಎಸ್ ಆರ್ ಕಾಂಗ್ರೆಸ್ ಪಕ್ಷದ ಶಾಸಕರನ್ನು ಗುರಿ ಮಾಡಿಕೊಳ್ಳಲಾಗಿದೆ. ನನ್ನ ರಾಜಕೀಯ ಬದುಕು ಸ್ವಚ್ಛವಾಗಿದೆ. ವಿಚಾರಣೆಗಾಗಿ ಎಷ್ಟು ಬಾರಿ ಕರೆಸಿದರೂ ಬರುತ್ತೇನೆ ಎಂದು ಹೇಳಿದ್ದಾರೆ.

ಮುಂದಿನ ವಿಚಾರಣೆಗಾಗಿ ಆಗಸ್ಟ್ ಇಪ್ಪತ್ತೇಳರಂದು ಮತ್ತೆ ಹಾಜರಾಗುವಂತೆ ಪೊಲೀಸರು ತಿಳಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+