ಬುಕಿಗಳ ಜತೆ ನಂಟು ಆರೋಪ, ವೈಎಸ್ ಆರ್ ಕಾಂಗ್ರೆಸ್ ಶಾಸಕರ ವಿಚಾರಣೆ
ಹೈದರಾಬಾದ್, ಆಗಸ್ಟ್ 24: ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳು ವೈಎಸ್ ಆರ್ ಕಾಂಗ್ರೆಸ್ ಪಕ್ಷದ ಇಬ್ಬರು ಶಾಸಕರ ವಿಚಾರಣೆ ನಡೆಸಿದ್ದಾರೆ. ಕ್ರಿಕೆಟ್ ಬುಕಿಗಳು ಹಾಗೂ ಅವರ ಸಹವರ್ತಿಗಳ ಜತೆಗೆ ಶಾಸಕರ ಆರ್ಥಿಕ ವ್ಯವಹಾರಗಳ ವಿಚಾರವನ್ನು ಪೊಲೀಸರು ಪ್ರಶ್ನೆ ಮಾಡಿದ್ದಾರೆ.
ಬುಕಿಗಳೊಂದಿಗೆ ಯಾವುದೇ ದುಡ್ಡು-ಕಾಸಿನ ವ್ಯವಹಾರ ಮಾಡಿಲ್ಲ ಎಂದು ಶಾಸಕರು ಹೇಳಿದ್ದಾರೆ. ಜತೆಗೆ ತನಿಖಾಧಿಕಾರಿಗಳ ವಿಚಾರಣೆಗೆ ಸಂಪೂರ್ಣವಾದ ಸಹಕಾರ ನೀಡಿದ್ದಾರೆ.

ನೆಲ್ಲೂರು ಗ್ರಾಮಾಂತರ ಶಾಸಲ ಕೋಟಂರೆಡ್ಡಿ ಶ್ರೀಧರ್ ರೆಡ್ಡಿ ಮತ್ತು ನೆಲ್ಲೂರು ಪಟ್ಟಣದ ಶಾಸಕ ಪಿ.ಅನಿಲ್ ಕುಮಾರ್ ಇಬ್ಬರಿಗೂ ನೋಟಿಸ್ ನೀಡಲಾಗಿತ್ತು. ಆ ನಂತರ ತನಿಖಾಧಿಕಾರಿಗಳ ಮುಂದೆ ಹಾಜರಾಗಿದ್ದರು. ಹೆಚ್ಚುವರಿ ಎಸ್ ಪಿ ಬಿ.ಶರತ್ ಬಾಬು ಹಾಗೂ ತಂಡವು ಶಾಸಕರ ವಿಚಾರಣೆ ನಡೆಸಿದ್ದಾರೆ. ವೈಯಕ್ತಿಕ ಮಾಹಿತಿಗಳನ್ನು ಕೇಳಿದ್ದಾರೆ.
ಆರ್ಥಿಕ ವ್ಯವಹಾರಗಳ ಬಗ್ಗೆ ಪರಿಶೀಲನೆ ನಡೆಸಲು ವೈಯಕ್ತಿಕ ಹಾಗೂ ಕುಟುಂಬದವರ ಬ್ಯಾಂಕ್ ಮಾಹಿತಿಗಳನ್ನು ಪರಿಶೀಲಿಸಿ, ಅನುಮಾನಗಳನ್ನು ಬಗೆಹರಿಸಿಕೊಳ್ಳಬಹುದು ಎಂದು ಶ್ರೀಧರ್ ರೆಡ್ಡಿ ಮಾಧ್ಯಮದವರಿಗೆ ಹೇಳಿದ್ದಾರೆ.
ಇನ್ನು ವಿಪಕ್ಷಗಳ ಶಾಸಕರಿಗೆ ತೊಂದರೆ ಕೊಡಬೇಕು ಎಂಬ ಕಾರಣಕ್ಕೆ ಹಾಗೂ ರಾಜಕೀಯ ಲಾಭ ಪಡೆಯುವ ಉದ್ದೇಶದಿಂದ ಹೀಗೆ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಾಸಕ ಅನಿಲ್ ಕುಮಾರ್ ಮಾತನಾಡಿ, ಬುಕಿಗಳ ಜತೆ ಟಿಡಿಪಿ ಮುಖಂಡರ ನಂಟಿತ್ತು. ಆದರೆ ಅವರನ್ನು ಕೈ ಬಿಟ್ಟು ವೈಎಸ್ ಆರ್ ಕಾಂಗ್ರೆಸ್ ಪಕ್ಷದ ಶಾಸಕರನ್ನು ಗುರಿ ಮಾಡಿಕೊಳ್ಳಲಾಗಿದೆ. ನನ್ನ ರಾಜಕೀಯ ಬದುಕು ಸ್ವಚ್ಛವಾಗಿದೆ. ವಿಚಾರಣೆಗಾಗಿ ಎಷ್ಟು ಬಾರಿ ಕರೆಸಿದರೂ ಬರುತ್ತೇನೆ ಎಂದು ಹೇಳಿದ್ದಾರೆ.
ಮುಂದಿನ ವಿಚಾರಣೆಗಾಗಿ ಆಗಸ್ಟ್ ಇಪ್ಪತ್ತೇಳರಂದು ಮತ್ತೆ ಹಾಜರಾಗುವಂತೆ ಪೊಲೀಸರು ತಿಳಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications