ಬೆಂಗಳೂರಿನ ಸಿಬಿಐನಿಂದ ಡೆಕ್ಕನ್ ಕ್ರಾನಿಕಲ್ ರೆಡ್ಡಿ ಬಂಧನ
ಹೈದರಾಬಾದ್, ಫೆ.15: ವಂಚನೆ ಆರೋಪದ ಮೇಲೆ ಡೆಕ್ಕನ್ ಕ್ರಾನಿಕಲ್ ಹೋಲ್ಡಿಂಗ್ಸ್ ಲಿ(ಡಿಸಿಎಚ್ಎಲ್) ಸಂಸ್ಥೆ ಮುಖ್ಯಸ್ಥ ಟಿ ವೆಂಕಟರಾಮ ರೆಡ್ಡಿ ಅವರನ್ನು ಸಿಬಿಐ ತಂಡ ಶನಿವಾರ ರಾತ್ರಿ ಬಂಧಿಸಿದೆ. ಸಿಬಿಐ ತಂಡ ಬಂಧಿತ ರೆಡ್ಡಿ ಅವರನ್ನು ಭಾನುವಾರ ಬೆಂಗಳೂರಿಗೆ ಕರೆ ತರುವ ಸಾಧ್ಯತೆಯಿದೆ.
ಬೆಂಗಳೂರಿನ ಸಿಬಿಐ ತಂಡ(ಬ್ಯಾಂಕಿಂಗ್ ಸಾಲ ಹಾಗೂ ವಂಚನೆ ಅಪರಾಧ ತಡೆ ಘಟಕ) ಅವರನ್ನು ಬಂಧಿಸಲು ಶನಿವಾರ ಬೆಳಗ್ಗೆ ಹೈದರಾಬಾದಿಗೆ ತೆರಳಿತ್ತು, ಅದರೆ, ರಾತ್ರಿ ವೇಳೆಗೆ ವೆಂಕಟರಾಮ ರೆಡ್ಡಿ ಹಾಗೂ ಸಂಸ್ಥೆಯ ಎಂಡಿ ವಿನಾಯಕ್ ರಾಮ್ ರೆಡ್ಡಿ ಅವರನ್ನು ಬಂಧಿಸಿದ್ದಾರೆ. ನಂತರ ಇಬ್ಬರನ್ನು ಉಸ್ಮಾನಿಯಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಮ್ಯಾಜಿಸ್ಟ್ರೇಟ್ ಅವರ ಮುಂದೆ ಇಬ್ಬರನ್ನು ಹಾಜರುಪಡಿಸಿದ್ದಾರೆ.

ಡೆಕ್ಕನ್ ಸಂಸ್ಥೆ ಮೇಲೆ ಐಪಿಸಿ ಸೆಕ್ಷನ್ 120 ಬಿ, 420, 468, 471 ಅನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಸಿಬಿಐ ಎಸ್ಪಿ ಸುಬ್ರಮಣ್ಯೇಶ್ವರ ರಾವ್ ಹೇಳಿದ್ದಾರೆ.
ಕೆನರಾ ಬ್ಯಾಂಕ್(357.77 ಕೋಟಿ ಸಾಲ) ಸೇರಿದಂತೆ ಅನೇಕ ಬ್ಯಾಂಕ್ ಹಾಗೂ ಆರ್ಥಿಕ ಸಂಸ್ಥೆಗಳಿಂದ ಸಾಲ ಪಡೆದು ಹಿಂತಿರುಗಿಸದ ಆರೋಪವನ್ನು ರೆಡ್ಡಿ ಹೊತ್ತಿದ್ದಾರೆ. ಒಂದೇ ಆಸ್ತಿಯನ್ನು ನಾಲ್ಕು ಬ್ಯಾಂಕ್ಗಳಲ್ಲಿ ಅಡವಿಟ್ಟು 1200 ಕೋಟಿ ರೂ. ಹಣ ಸಾಲ ಪಡೆದಿದ್ದರು ಎಂದು ತಿಳಿದು ಬಂದಿದೆ.

ದಿವಾಳಿಯಾದ ಸಂಸ್ಥೆ: ಸಾಲದ ಕಾರಣ ಐಪಿಎಲ್ ನಲ್ಲಿ ಹೊಂದಿದ್ದ ತಂಡವನ್ನು ಮಾರಾಟ ಮಾಡಿದ್ದರು. ಡೆಕ್ಕನ್ ಚಾರ್ಜರ್ಸ್ ತಂಡ 2009ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆದ ಐಪಿಎಲ್ ಟೂರ್ನಿಯಲ್ಲಿ ಪ್ರಶಸ್ತಿ ಗೆದ್ದಿದ್ದು ಬಿಟ್ಟರೆ ಉಳಿದಂತೆ ಕಳಪೆ ಸಾಧನೆ ಮುಂದುವರೆಸಿತ್ತು. ನಂತರ ತಂಡವನ್ನು ಸನ್ ನೆಟ್ವರ್ಕ್ ಖರೀದಿಸಿ ಸನ್ ರೈಸರ್ಸ್ ಹೆಸರಿನಲ್ಲಿ ಐಪಿಎಲ್ ನಲ್ಲಿ ಕಣಕ್ಕಿಳಿಸಿದ್ದರು.

ಹೈದರಾಬಾದ್ ಮೂಲದ ಮಾಧ್ಯಮ ಸಂಸ್ಥೆ ಡೆಕ್ಕನ್ ಡೆಕ್ಕನ್ ಕ್ರಾನಿಕಲ್ ಹೋಲ್ಡಿಂಗ್ ಲಿ. (ಡಿಸಿಎಚ್ಎಲ್) ದಿವಾಳಿ ಅಂಚು ತಲುಪಿದ್ದು, ಕಂಪನಿಯ ಟ್ರೇಡ್ ಮಾರ್ಕ್ ಅನ್ನು ಐಡಿಬಿಐ ಬ್ಯಾಂಕ್ ಮತ್ತೊಮ್ಮೆ ಹರಾಜು ಹಾಕಲು ಸಿದ್ಧತೆ ನಡೆಸಿತ್ತು. ಡಿಸಿಎಚ್ ಎಲ್ ಪ್ರಕಟಣೆಯ ಡೆಕ್ಕನ್ ಕ್ರಾನಿಕಲ್, ದಿ ಏಷ್ಯನ್ ಏಜ್, ಆಂಧ್ರ ಭೂಮಿ ಹಾಗೂ ಫೈನಾನ್ಶಿಯಲ್ ಕ್ರಾನಿಕಲ್ ಟ್ರೇಡ್ ಮಾರ್ಕ್ ಗಳನ್ನು ಅಡಮಾನ ಇಟ್ಟಿದ್ದನ್ನು ಇಲ್ಲಿ ಸ್ಮರಿಸಬಹುದು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್












Click it and Unblock the Notifications