ಯಾಸಿನ್ ಭಟ್ಕಳ ಹಾಗೂ ನಾಲ್ವರು ಉಗ್ರರಿಗೆ ಗಲ್ಲು ಶಿಕ್ಷೆ
ದಿಲ್ ಸುಖ್ ನಗರ ಸ್ಫೋಟ ಪ್ರಕರಣದಲ್ಲಿ ಅಪರಾಧಿಗಳಾಗಿರುವ ಇಂಡಿಯನ್ ಮುಜಾಹಿದ್ದೀನ್ ಮುಖ್ಯಸ್ಥ ಯಾಸಿನ್ ಭಟ್ಕಳ್ ಸೇರಿದಂತೆ ನಾಲ್ವರಿಗೆ ಗಲ್ಲುಶಿಕ್ಷೆ ಪ್ರಕಟಿಸಿ ಎನ್ ಐಎ ವಿಶೇಷ ನ್ಯಾಯಾಲಯ ಸೋಮವಾರ ಆದೇಶ ಹೊರಡಿಸಿದೆ.
ಹೈದರಾಬಾದ್, ಡಿಸೆಂಬರ್ 19: ಇಲ್ಲಿನ ಹೈದರಾಬಾದಿನ ದಿಲ್ ಸುಖ್ ನಗರ ಸ್ಫೋಟ ಪ್ರಕರಣದಲ್ಲಿ ಅಪರಾಧಿಗಳಾಗಿರುವ ಇಂಡಿಯನ್ ಮುಜಾಹಿದ್ದೀನ್ ಮುಖ್ಯಸ್ಥ ಯಾಸಿನ್ ಭಟ್ಕಳ್ ಸೇರಿದಂತೆ ಐವರಿಗೆ ಗಲ್ಲುಶಿಕ್ಷೆ ಪ್ರಕಟಿಸಿ ಎನ್ ಐಎ ವಿಶೇಷ ನ್ಯಾಯಾಲಯ ಸೋಮವಾರ ಆದೇಶ ಹೊರಡಿಸಿದೆ.
2013ರ ಫೆಬ್ರವರಿಯಲ್ಲಿ ಹೈದರಾಬಾದಿನ ದಿಲ್ ಸುಖ್ ನಗರದಲ್ಲಿ ಸಂಭವಿಸಿದ ಸ್ಫೋಟ ಪ್ರಕರಣದಲ್ಲಿ ಯಾಸೀನ್ ಭಟ್ಕಳ ಮತ್ತು ಇತರೆ 4 ಮಂದಿ ಉಗ್ರರು ತಪ್ಪಿತಸ್ಥರು ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ನ್ಯಾಯಾಲಯ ಮಂಗಳವಾರ(ಡಿಸೆಂಬರ್ 13) ತೀರ್ಪು ನೀಡಿತ್ತು. [ಯಾಸಿನ್ ಭಟ್ಕಳ್ ಯಾರು?]

ಎಲ್ಲಾ ತಪ್ಪಿತಸ್ಥರ ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯವು ಡಿಸೆಂಬರ್ 19ರಂದು ಪ್ರಕಟಿಸಿದೆ. ಎಲ್ಲ ಆರೋಪಿಗಳು ಸದ್ಯಕ್ಕೆ ಚೆರ್ಲಪಲ್ಲಿ ಜೈಲಿನಲ್ಲಿದ್ದಾರೆ.[ಬಿರಿಯಾನಿಗೆ ಹೆಸರಾಗಿದ್ದ ಭಟ್ಕಳದಲ್ಲಿ ಉಗ್ರರು ಹುಟ್ಟಿದ್ದು ಹೇಗೆ?]
ಇಂಡಿಯನ್ ಮುಜಾಹಿದೀನ್ ಸಹ ಸಂಸ್ಥಾಪಕ ಯಾಸೀನ್ ಭಟ್ಕಳ, ಪಾಕಿಸ್ತಾನಿ ಪ್ರಜೆ ಜಿಯಾ-ಉರ್-ರಹಮಾನ್ ಅಲಿಯಾಸ್ ವಕಸ್, ಅಸಾದುಲ್ಲಾ ಅಖ್ತರ್ ಅಲಿಯಾಸ್ ಹಡ್ಡಿ, ತಹಸೀನ್ ಅಖ್ತರ್ ಅಲಿಯಾಸ್ ಮೋನು ಮತ್ತು ಐಜಾಜ್ ಷೇಖ್ ಅವರ ವಿರುದ್ಧ ನ್ಯಾಯಾಲಯ ಎನ್ ಐಎ ದೋಷಾರೋಪ ಪಟ್ಟಿ ಸಲ್ಲಿಸಿತ್ತು.[ನ್ಯೂಕ್ಲಿಯಾರ್ ಬಾಂಬಿಡಲು ಕಾರ್ಯಗತನಾಗಿದ್ದೆ- ಯಾಸಿನ್]
ಈ ಪ್ರಕರಣದ ಮುಖ್ಯ ಆರೋಪಿ ಇಂಡಿಯನ್ ಮುಜಾಹಿದೀನ್ ಸಂಸ್ಥಾಪಕ ರಿಯಾಜ್ ಭಟ್ಕಳ ಇನ್ನೂ ಪತ್ತೆಯಾಗಿಲ್ಲ. 2013ರ ಫೆಬ್ರವರಿ 21ರಂದು ಸಂಭವಿಸಿದ್ದ ಹೈದರಾಬಾದ್ ಸ್ಪೋಟದಲ್ಲಿ 17 ಮಂದಿ ಮೃತಪಟ್ಟಿದ್ದರು ಹಾಗೂ 119 ಮಂದಿ ತೀವ್ರವಾಗಿ ಗಾಯಗೊಂಡಿದ್ದರು.[ನಮ್ಮ ಮೊದಲ ಟಾರ್ಗೆಟ್ ನರೇಂದ್ರ ಮೋದಿ: ಐಎಂ]
ಯಾಸಿನ್ ಭಟ್ಕಳ,ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಮುಗ್ದಮ್ ಕಾಲೋನಿಯ ನಿವಾಸಿಯಾಗಿದ್ದಾನೆ. ರಿಯಾಜ್ ಭಟ್ಕಳ ಸೆರೆಸಿಕ್ಕ ನಂತರ ಆತನಿಗೂ ಗಲ್ಲುಶಿಕ್ಷೆ ಅನ್ವಯವಾಗಲಿದೆ ಎಂದು ತಿಳಿದು ಬಂದಿದೆ.
-
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ












Click it and Unblock the Notifications