ಕೊರೊನಾ ಸೋಂಕಿತನ ಶವವನ್ನು ಕಚ್ಚಿತಿಂದ ಬೀದಿನಾಯಿಗಳು
ಹೈದರಾಬಾದ್, ಆಗಸ್ಟ್ 13: ಕೊರೊನಾ ಸೋಂಕಿತನ ಮೃತದೇಹವನ್ನು ನಾಯಿಗಳು ಕಚ್ಚಿ ತಿಂದಿರುವ ಘಟನೆ ರಾಜೀವ್ ಗಾಂಧಿ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಬಳಿ ಇರುವ ನಿರಾಶ್ರಿತರ ಕೇಂದ್ರದಲ್ಲಿ ನಡೆದಿದೆ.
Recommended Video
ಮೃತನನ್ನು ಪ್ರಕಾಶಂ ಜಿಲ್ಲೆಯ ಜರುಗುಮಲ್ಲಿ ಮಂಡಲದ ಬಿಟ್ರಗುಂಟ ಗ್ರಾಮದ ನಿವಾಸಿ ಕಾಂತ ರಾವ್ ಎಂದು ಗುರುತಿಸಲಾಗಿದೆ.ಮೃತ ವ್ಯಕ್ತಿಯ ಮುಖಕ್ಕೆ ನಾಯಿ ಕಚ್ಚಿ ಗಾಯ ಮಾಡಿದೆ ಹಾಗೂ ಶವದ ಕಿವಿ ಭಾಗ ಕಾಣೆಯಾಗಿದೆ. ಬೀದಿ ನಾಯಿಗಳು ಮೃತದೇಹದ ಕಿವಿಯನ್ನು ತಿನ್ನುತ್ತಿರುವುದನ್ನು ಆಸ್ಪತ್ರೆಯ ಭದ್ರತಾ ಸಿಬ್ಬಂದಿ ನೋಡಿದ್ದರು.

ಈತ ಕರೊನಾ ಸೋಂಕಿತನಾಗಿರುವ ಶಂಕೆಯನ್ನು ಅಲ್ಲಿಯ ಜನರು ವ್ಯಕ್ತಪಡಿಸಿದ್ದಾರೆ. ನಿರಾಶ್ರಿತರು ಹಾಗೂ ಬಡವರಿಗಾಗಿ ಇಲ್ಲಿ ಶೆಡ್ಗಳನ್ನು ನಿರ್ಮಿಸಲಾಗಿದ್ದು, ಅಲ್ಲಿ ಈ ವ್ಯಕ್ತಿ ವಾಸವಾಗಿದ್ದ. ಕರೊನಾ ಸೋಂಕಿನಿಂದ ಈತ ಮೃತಪಟ್ಟಿರುವುದಾಗಿ ಸ್ಥಳೀಯರು ಹೇಳುತ್ತಿದ್ದಾರೆ. ಅದರೆ ಈ ಬಗ್ಗೆ ಇನ್ನಷ್ಟೇ ವರದಿ ಹೊರಬೀಳಬೇಕಿದೆ.
This is heartbreaking! A patient’s dead body has been lying uncared at the Ongole GGH for 2 days. Dogs have mauled & eaten the body sending jitters into co-patients. This is a serious violation of human dignity & huge mgmt failure of AP Gov. I am at loss of words to condemn this! pic.twitter.com/CVdBw8umLj
— N Chandrababu Naidu #StayHomeSaveLives (@ncbn) August 11, 2020
ಈ ಘಟನೆಗೆ ರಿಮ್ಸ್ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಕಾಂತ ರಾವ್ ಅವರ ಸಂಬಂಧಿಕರು ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಆದರೆ ಈ ವ್ಯಕ್ತಿ ಇದಕ್ಕೂ ಮುಂಚೆ ಆಸ್ಪತ್ರೆಗೆ ದಾಖಲಾಗಿರಲಿಲ್ಲ ಎಂದು ವೈದ್ಯರು ಹೇಳುತ್ತಿದ್ದಾರೆ.
ಆತನಿಗೆ ಆಗಸ್ಟ್ 5 ರಂದು ಕೊರೊನಾ ಪಾಸಿಟಿವ್ ಎಂದು ವರದಿ ಬಂದಿತ್ತು. ಆತನನ್ನು ಗೃಹಬಂಧನದಲ್ಲಿರಿಸಲು ಮನವಿ ಮಾಡಲಾಗಿತ್ತು. ಆದರೆ ಆತನ ಮಾತಿಗೆ ಯಾರೂ ಲಕ್ಷ್ಯ ಕೊಟ್ಟಿರಲಿಲ್ಲ ಎಂದು ದೂರಲಾಗಿದೆ.
ಆಸ್ಪತ್ರೆಯ ಒಳರೋಗಿ ಅಥವಾ ಹೊರರೋಗಿ ಎನ್ನುವುದಕ್ಕೆ ಯಾವುದೇ ದಾಖಲೆಗಳಿಲ್ಲ ಎಂದು ಆಸ್ಪತ್ರೆ ಅಧಿಕಾರಿಗಳು ಹೇಳಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications