ಮ್ಯಾನೇಜರ್ ಬಂಧನ ಆಘಾತಕಾರಿ, ತನಿಖೆಗೆ ಸಹಕರಿಸುವೆ: ಕಾಜಲ್
ಹೈದರಾಬಾದ್, ಜುಲೈ 25: ಡ್ರಗ್ ಕೇಸಿನಲ್ಲಿ ಮ್ಯಾನೇಜರ್ ರೊನ್ಸನ್ ಜೋಸೆಫ್ ಬಂಧನವಾಗಿರುವುದು ನನಗೆ ಆಘಾತ ತಂದಿದೆ ಎಂದು ನಟಿ ಕಾಜಲ್ ಅಗರವಾಲ್ ಹೇಳಿದ್ದಾರೆ. ರೊನ್ಸನ್ ಜೋಸೆಫ್ ಮನೆಯಲ್ಲಿ ಗಾಂಜಾ ಪತ್ತೆಯಾದ ಹಿನ್ನೆಲೆಯಲ್ಲಿ ತೆಲಂಗಾಣ ಪೊಲೀಸರು ನಿನ್ನೆ ಆತನನ್ನು ಬಂಧಿಸಿದ್ದರು.
ನಟಿ ಲಾವಣ್ಯ ತ್ರಿಪಾಠಿ, ರಾಶಿ ಖನ್ನಾ ಸೇರಿದಂತೆ ಹಲವಾರು ಸೆಲೆಬ್ರಿಟಿಗಳ ಮ್ಯಾನೇಜರ್ ಆಗಿದ್ದ ರೋನ್ಸನ್, ಟಾಲಿವುಡ್ ನಲ್ಲಿ ಚಿರಪರಿಚಿತ. ಆದರೆ, ಇಂಥ ಕೃತ್ಯದಲ್ಲಿ ಭಾಗಿಯಾಗಿರುವ ವ್ಯಕ್ತಿಗಳ ಜತೆ ನಾನಾಗಲಿ ನನ್ನ ಕುಟುಂಬವಾಗಲಿ ಸಂಪರ್ಕ ಹೊಂದುವುದಿಲ್ಲ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ತಂಡಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ನಟಿ ಕಾಜಲ್ ಅಗರವಾಲ್ ಹೇಳಿದ್ದಾರೆ.

ಜುಲೈ 19 ರಿಂದ 27ರ ತನಕ ವಿಚಾರಣೆ ಜಾರಿಯಲ್ಲಿರಲಿದೆ. ವಿಚಾರಣೆಗೆ ಹಾಜರಾದಾಗ ಮಾತ್ರ ಯಾರಿಗೆ ನೋಟಿಸ್ ನೀಡಲಾಗಿದೆ ಎಂಬ ಸತ್ಯ ತಿಳಿಯಲಿದೆ ಮತ್ತು ವಿಚಾರಣೆಯನ್ನು ಸಂಪೂರ್ಣವಾಗಿ ವಿಡಿಯೋ ರೆಕಾರ್ಡ್ ಮಾಡಿಕೊಳ್ಳಲಾಗುತ್ತಿದೆ. ಈ ನಡುವೆ ನೋಟಿಸ್ ನೀಡಿದ್ದಕ್ಕೆ ಗರಂ ಆಗಿ ತನಿಖಾ ತಂಡದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದ ನಟಿ ಚಾರ್ಮಿ ಕೌರ್ ಗೆ ಹಿನ್ನಡೆಯಾಗಿದೆ. ಚಾರ್ಮಿ ಅವರ ಅರ್ಜಿಯನ್ನು ಹೈಕೋರ್ಟ್ ತಳ್ಳಿ ಹಾಕಿದೆ.
ಈ ಡ್ರಗ್ಸ್ ದಂಧೆಯ ಪ್ರಮುಖ ಆರೋಪಿ ಕಲ್ವಿನ್ ಮ್ಯಾಸ್ಕರೆನ್ಹಸ್ ನೀಡಿರುವ ಮಾಹಿತಿಯಂತೆ ಚಿತ್ರರಂಗದ ಅನೇಕ ಮಂದಿ ಈತನ ಗ್ರಾಹಕರಾಗಿದ್ದಾರೆ. ಈತನ ಬಳಿ ಹಲವಾರು ಸಿಮ್ ಕಾರ್ಡ್ ಗಳಿದ್ದು, 1,500ಕ್ಕೂ ಅಧಿಕ ನಂಬರ್ ಗಳಿವೆ. ಇವುಗಳಲ್ಲಿ ಹಲವಾರು ಸೆಲೆಬ್ರಿಟಿಗಳ ಸಂಪರ್ಕ ಸಂಖ್ಯೆಗಳಿವೆ. ತೆಲುಗು ನಟ ಪಲ್ಲಪೊಲ್ಲು ನವದೀಪ್, ತರುಣ್ ಕುಮಾರ್, ಪಿ ಸುಬ್ಬರಾಜು, ನಟಿ ಚಾರ್ಮಿ ಕೌರ್ ಹಾಗೂ ಮುಮೈತ್ ಖಾನ್ ಸೇರಿದಂತೆ ಹಲವರಿಗೆ ನೋಟಿಸ್ ಜಾರಿಯಾಗಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications