ಡ್ರಗ್ಸ್ ಕೇಸ್: ವಿಚಾರಣೆಗೆ ಹಾಜರಾದ ನಟಿ ಚಾರ್ಮಿ ಕೌರ್
ಹೈದರಾಬಾದ್, ಜುಲೈ 26: ತೆಲಂಗಾಣ ಅಬಕಾರಿ ಇಲಾಖೆಯ ವಿಶೇಷ ತನಿಖಾ ತಂಡದ(SIT) ಎದುರು ಬಹುಭಾಷಾ ನಟಿ ಚಾರ್ಮಿ ಕೌರ್ ಅವರು ಬುಧವಾರದಂದು ವಿಚಾರಣೆಗೆ ಹಾಜರಾಗಿದ್ದಾರೆ.
ಚಾರ್ಮಿ ಅವರು, ವಿಶೇಷ ತನಿಖಾ ತಂಡದ ವಿಚಾರಣೆಗೆ ಹಾಜರಾಗಿರುವ ತೆಲುಗು ಚಿತ್ರರಂಗದ ಏಳನೆ ವ್ಯಕ್ತಿಯಾಗಿದ್ದಾರೆ. ಡ್ರಗ್ ಪ್ರಕರಣಕ್ಕೆ ಸಂಬಂಧಿಸಿ ತೆಲುಗು ಚಿತ್ರರಂಗದ ನಿರ್ದೇಶಕರು ಹಾಗೂ ನಟಿಯರು ಸೇರಿದಂತೆ ಒಟ್ಟು 12 ಮಂದಿಗೆ ಸಮನ್ಸ್ ಜಾರಿ ಮಾಡಲಾಗಿದೆ.

ಚಾರ್ಮಿಗೆ ರಿಯಾಯಿತಿ: ತನ್ನ ವಕೀಲರ ಸಮ್ಮುಖದಲ್ಲಿ ವಿಚಾರಣೆ ನಡೆಸುವಂತೆ ಕೋರಿ ಚಾರ್ಮಿ ಅವರು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಈ ಅರ್ಜಿಯನ್ನು ಹೈದರಾಬಾದ್ ಹೈಕೋರ್ಟ್ ಮಂಗಳವಾರ ನಿರಾಕರಿಸಿತ್ತು.
ಆದರೆ, ಇತರೆ ಬೇಡಿಕೆಗಳಾದ ಬೆಳಗ್ಗೆ 10ರಿಂದ ಸಂಜೆ 5ರ ಅವಧಿಯಲ್ಲಿ ವಿಚಾರಣೆ, ಮಹಿಳಾ ಅಧಿಕಾರಿಯ ಸಮ್ಮುಖದಲ್ಲಿ ವಿಚಾರಣೆಗೆ ಹೈಕೋರ್ಟ್ ಸಮ್ಮತಿಸಿದೆ. ಜತೆಗೆ ಕೌರ್ ಸಮ್ಮತಿಯಿಲ್ಲದೆ ಆಕೆಯ ರಕ್ತ, ಕೂದಲು ಹಾಗೂ ಉಗುರಿನ ಸ್ಯಾಂಪಲ್ನ್ನು ಸಂಗ್ರಹಿಸಬಾರದು ಎಂದು ಹೈಕೋರ್ಟ್ ಸೂಚಿಸಿದೆ.
ಈ ಡ್ರಗ್ಸ್ ದಂಧೆಯ ಪ್ರಮುಖ ಆರೋಪಿ ಕಲ್ವಿನ್ ಮ್ಯಾಸ್ಕರೆನ್ಹಸ್ ನೀಡಿರುವ ಮಾಹಿತಿಯಂತೆ ಚಿತ್ರರಂಗದ ಅನೇಕ ಮಂದಿ ಈತನ ಗ್ರಾಹಕರಾಗಿದ್ದಾರೆ.

ಈತನ ಬಳಿ ಹಲವಾರು ಸಿಮ್ ಕಾರ್ಡ್ ಗಳಿದ್ದು, 1,500ಕ್ಕೂ ಅಧಿಕ ನಂಬರ್ ಗಳಿವೆ. ಇವುಗಳಲ್ಲಿ ಹಲವಾರು ಸೆಲೆಬ್ರಿಟಿಗಳ ಸಂಪರ್ಕ ಸಂಖ್ಯೆಗಳಿವೆ. ತೆಲುಗು ನಟ ಪಲ್ಲಪೊಲ್ಲು ನವದೀಪ್, ತರುಣ್ ಕುಮಾರ್, ಪಿ ಸುಬ್ಬರಾಜು, ನಟಿ ಚಾರ್ಮಿ ಕೌರ್ ಹಾಗೂ ಮುಮೈತ್ ಖಾನ್ ಸೇರಿದಂತೆ ಹಲವರಿಗೆ ನೋಟಿಸ್ ಜಾರಿಯಾಗಿದೆ.
ಈತನಕ ನಿರ್ದೇಶಕ ಧರ್ಮರಾವ್, ಚಿತ್ರ ನಿರ್ಮಾಪಕ ಪುರಿ ಜಗನ್ನಾಥ್, ಸಿನೆಮಾಟೊಗ್ರಾಫರ್ ಶ್ಯಾಮ್ ಕೆ. ನಾಯ್ಡು ಹಾಗೂ ನಟರಾದ ಸುಬ್ಬಾ ರಾಜು, ತರುಣ್ಕುಮಾರ್ ಹಾಗೂ ಪಿ.ನವ್ದೀಪ್ರನ್ನು ವಿಚಾರಣೆ ನಡೆಸಲಾಗಿದೆ. 2002ರಲ್ಲಿ ತೆಲುಗು ಚಿತ್ರರಂಗಕ್ಕೆ ಕಾಲಿಟ್ಟಿರುವ ಚಾರ್ಮಿ ಕನ್ನಡ, ತಮಿಳು ಹಾಗೂ ಮಲಯಾಳಂ ಚಿತ್ರಗಳಲ್ಲಿ ನಟಿಸಿದ್ದಾರೆ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications