ಸಂಕಷ್ಟ ನಿವಾರಣೆಗಾಗಿ ತಿಮ್ಮಪ್ಪನಿಗೆ ಡಿವಿಎಸ್ ಮೊರೆ
ತಿರುಮಲ, ಅ.5: ಕೇಂದ್ರ ರೈಲ್ವೆ ಸಚಿವ ಡಿವಿ ಸದಾನಂದ ಗೌಡ ಅವರು ಸಂಸಾರ ಸಮೇತರಾಗಿ ಭಾನುವಾರ ಬೆಳಗ್ಗೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದುಕೊಂಡಿದ್ದಾರೆ. ಪುತ್ರ ಕಾರ್ತಿಕ್ ಗೌಡ ಅವರಿಗೆ ಬಂದಿರುವ ಸಂಕಷ್ಟಗಳನ್ನು ಪರಿಹರಿಸುವಂತೆ ಏಳುಬೆಟ್ಟದ ಒಡೆಯ ವೆಂಕಟೇಶ್ವರ ದೇವರಲ್ಲಿ ಭಕ್ತಿಯಿಂದ ಕೇಳಿಕೊಂಡಿದ್ದಾರೆ.
ಡಿವಿ ಸದಾನಂದ ಗೌಡ, ಕಾರ್ತಿಕ್ ಗೌಡ ಹಾಗೂ ಡಾಟಿ ಸದಾನಂದ ಗೌಡ ಅವರನ್ನು ತಿರುಮಲ ತಿರುಪತಿ ದೇವಸ್ಥಾನಂನ ಜಂಟಿ ಕಾರ್ಯಕಾರಿ ಅಧಿಕಾರಿ ಕೆಎಸ್ ಶ್ರೀನಿವಾಸ್ ರಾಜು ಅವರು ಆತ್ಮೀಯವಾಗಿ ಬರ ಮಾಡಿಕೊಂಡರು. ಸದಾನಂದ ಗೌಡ ಅವರ ಕುಟುಂಬದ ಜೊತೆಗೆ ಆಂಧ್ರಪ್ರದೇಶದ ಮುಜರಾಯಿ ಇಲಾಖೆ ಸಚಿವ ಮಾಣಿಕ್ಯಾಲ ರಾವ್ ಅವರು ಕೂಡಾ ಉಪಸ್ಥಿತರಿದ್ದರು.
ನಟಿ ಮೈತ್ರಿಯಾ ಪ್ರಕರಣದ ನಂತರ ಇದೇ ಮೊದಲ ಬಾರಿಗೆ ಸದಾನಂದ ಗೌಡ ಅವರ ಕುಟುಂಬ ತಿರುಪತಿಗೆ ಭೇಟಿ ನೀಡಿ ಸಮಸ್ಯೆಗಳ ನಿವಾರಣೆಗಾಗಿ ಭಕ್ತಿಯಿಂದ ಪ್ರಾರ್ಥನೆ ಸಲ್ಲಿಸಿದರು. [ಕಾರ್ತಿಕ್ ಗೌಡಗೆ ನಿರೀಕ್ಷಣಾ ಜಾಮೀನು ಮಂಜೂರು]
ರಂಗಾನಾಯಕುಲ ಮಂಟಪದಲ್ಲಿ ವೇದ ಘೋಷಗಳೊಂದಿಗೆ ಇಬ್ಬರು ಗಣ್ಯರಿಗೆ ವೇದ ಪಂಡಿತರು ಆಶೀರ್ವಚನ ನೀಡಿದರು. ಶ್ರೀವಾರಿ ವಸ್ತ್ರವನ್ನು ನೀಡಿ ಸದಾನಂದ ಗೌಡ ಅವರನ್ನು ಗೌರವಿಸಲಾಯಿತು.
ಈ ಸಂದರ್ಭದಲ್ಲಿ ದೇಗುಲದ ಆಡಳಿತ ಮಂಡಳಿಯ ಆರ್ ಸೆಲ್ವಂ, ವೆಂಕಟಯ್ಯ, ದಾಮೋದರ್, ರಾಮರಾವ್ ಮುಂತಾದವರು ಹಾಜರಿದ್ದರು. ಸದಾನಂದ ಗೌಡ ಹಾಗೂ ಅವರ ಕುಟುಂಬದ ತಿರುಪತಿ ದೇಗುಲ ಭೇಟಿ ಚಿತ್ರಗಳು ನಿಮ್ಮ ಮುಂದೆ

ಆಂಧ್ರದ ಸಚಿವರಿಗೆ ದೇವರ ಪ್ರಸಾದ
ಆಂಧ್ರದ ಸಚಿವರಿಗೆ ದೇವರ ಪ್ರಸಾದ ಹಾಗೂ ಶ್ರೀವಾರಿ ವಸ್ತ್ರವನ್ನು ನೀಡಿ ಗೌರವಿಸಲಾಯಿತು

ಸದಾನಂದ ಗೌಡರಿಗೆ ದೇವರ ಪ್ರಸಾದ ನೀಡಿಕೆ
ಶ್ರೀವಾರಿ ವಸ್ತ್ರವನ್ನು ನೀಡಿ ಸದಾನಂದ ಗೌಡ ಅವರನ್ನು ಗೌರವಿಸಲಾಯಿತು. ಜೊತೆಯಲ್ಲಿ ಪತ್ನಿ ಡಾಟಿ ಹಾಗೂ ಪುತ್ರ ಕಾರ್ತಿಕ್ ಉಪಸ್ಥಿತರಿದ್ದರು.

ವೆಂಕಟೇಶ್ವರ ದೇವರ ಚಿತ್ರ ನೀಡಲಾಯಿತು
ಕೇಂದ್ರ ಸಚಿವ ಸದಾನಂದ ಗೌಡರಿಗೆ ದೇಗುಲ ಭೇಟಿ ಸ್ಮರಣಾರ್ಥ ವೆಂಕಟೇಶ್ವರ ದೇವರ ಚಿತ್ರ ನೀಡಲಾಯಿತು

ದೇಗುಲದ ಹೊರ ಭಾಗದಲ್ಲಿ ಗಣ್ಯರು
ದೇಗುಲದ ಹೊರ ಭಾಗದಲ್ಲಿ ಸದಾನಂದ ಗೌಡರ ಜೊತೆ ಗಣ್ಯರು ಹಾಗೂ ಟಿಟಿಡಿ ಸದಸ್ಯರು

ರಾಜಗೋಪುರಕ್ಕೆ ನಮಿಸಿದ ಡಿವಿಎಸ್
ತಿರುಮಲ ತಿರುಪತಿ ದೇಗುಲ ರಾಜಗೋಪುರಕ್ಕೆ ನಮಿಸಿದ ಡಿವಿ ಸದಾನಂದ ಗೌಡ.

ದೇಗುಲದ ಮುಂಭಾಗದಲ್ಲಿ ಸದಾನಂದ ಗೌಡ
ದೇಗುಲದ ಮುಂಭಾಗದಲ್ಲಿ ಸದಾನಂದ ಗೌಡ ಹಾಗೂ ಅವರ ಕುಟುಂಬ
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications