ಜಗನ್ ರೆಡ್ಡಿಗೆ ಮತ್ತೆ ಹೊಡೆತ ಇನ್ನಷ್ಟು ಆಸ್ತಿ ಜಪ್ತಿ
ಹೈದರಾಬಾದ್, ಡಿ.16: ಅಕ್ರಮ ಆಸ್ತಿ ಪ್ರಕರಣ ಆರೋಪ ಹೊತ್ತಿರುವ ವೈಎಸ್ಸಾರ್ ಕಾಂಗ್ರೆಸ್ ಮುಖ್ಯಸ್ಥ ಜಗನ್ ಮೋಹನ್ ರೆಡ್ಡಿ ಅವರಿಗೆ ಜಾರಿ ನಿರ್ದೇಶನಾಲಯ ತಂಡ ಮತ್ತೊಮ್ಮೆ ಶಾಕ್ ನೀಡಿದೆ.
ಜಗನ್ ಮೋಹನ್ ರೆಡ್ಡಿ ಅವರಿಗೆ ಸೇರಿರುವ ಸಾಕ್ಷಿ, ಜನನಿ ಇನ್ಫಾಸ್ಟ್ರಕ್ಚರ್ ಸಂಸ್ಥೆ ಹಾಗೂ ಜಗತಿ ಪಬ್ಲಿಕೇಷನ್ಸ್ ಗೆ ಸೇರಿರುವ 47 ಕೋಟಿ ರು ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಜಪ್ತಿ ಮಾಡಿದೆ. ಖಮ್ಮಂ, ವಾರಂಗಲ್, ಕೃಷ್ಣಾ, ಕರೀಂನಗರ, ಮೆಹಬೂಬ್ ನಗರ ಹಾಗೂ ಚಿತ್ತೂರು ಜಿಲ್ಲೆಗಳಲ್ಲಿರುವ ಜಗನ್ ಅವರ ಒಡೆತನದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದುಕೊಂಡಿದೆ.
ಇನ್ಮುಂದೆ ಜಗನ್ ಅವರು ಈ ಆಸ್ತಿ ಮಾರಾಟ ಹಾಗೂ ಬೋಗ್ಯಕ್ಕೆ ಬಿಡುವಂತಿಲ್ಲ. ಅದರೆ, ಅಲ್ಲಿನ ಸಂಸ್ಥೆಗಳಲ್ಲಿರುವ ಉದ್ಯೋಗಿಗಳು ಎಂದಿನಂತೆ ಕಾರ್ಯನಿರ್ವಹಿಸಬಹುದಾಗಿದೆ. [ಜಗನ್ ರೆಡ್ಡಿ ವಿರುದ್ಧ 11ನೇ ಚಾರ್ಜ್ ಶೀಟ್ ಸಲ್ಲಿಕೆ]

ರಾಜಶೇಖರ್ ರೆಡ್ಡಿ ಆರಂಭಿಸಿದ 'ಇಂದು ಕೈಗಾರಿಕಾ ಕಾರಿಡಾರ್' ಯೋಜನೆ ಒಂದು ಬಿಟ್ಟು ಉಳಿದಂತೆ ಜಗನ್ ಕಂಪನಿಗಳಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಯಾವುದೇ ತನಿಖೆ ನಡೆಸುವ ಸಾಧ್ಯತೆ ಕಮ್ಮಿಯಾಗಿದೆ. ಈಗ ಜಾರಿ ನಿರ್ದೇಶನಾಲಯ ಹಾಗೂ ಆದಾಯ ತೆರಿಗೆ ಇಲಾಖೆ ಮಾತ್ರ ತನಿಖೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ ಆದರೆ, ಸಿಬಿಐ ಮತ್ತೊಮ್ಮೆ ಚಾರ್ಜ್ ಶೀಟ್(ನಂ.11) ಹಾಕುವ ಮೂಲಕ ಬಿಸಿ ಮುಟ್ಟಿಸಿದೆ.
ಈಗ 10 ಕಂಪನಿಗಳ ಪೈಕಿ 8 ಕಂಪನಿಗಳು ಜಾರಿ ನಿರ್ದೇಶನಾಲಯ ಹಾಗೂ ಆದಾಯ ತೆರಿಗೆ ಇಲಾಖೆ ತನಿಖೆ ಭೀತಿ ಎದುರಿಸುತ್ತಿವೆ. ಸಂಡೂರು ಪವರ್ ಕಂಪನಿ, ಕಾರ್ಮೆಲ್ ಏಷ್ಯಾ ಹೋಲ್ಡಿಂಗ್ಸ್, ಪಿವಿಪಿ ಬಿಸಿನೆಸ್ ವೆಂಚರ್ಸ್, ಜುಬುಲಿ ಮೀಡಿಯಾ ಕಮ್ಯೂನಿಕೇಷನ್ಸ್, ಕ್ಲಾಸಿಕ್ ರಿಯಾಲ್ಟಿ, ಬ್ರಹ್ಮಣಿ ಇನ್ಫ್ರಾಟೆಕ್, ಆರ್ ಆರ್ ಗ್ಲೋಬಲ್ ಎಂಟರ್ ಪ್ರೈಸಸ್ ಹಾಗೂ ಸರಸ್ವತಿ ಪವರ್ ಮತ್ತು ಇಂಡಸ್ಟ್ರೀಸ್ ಸಂಸ್ಥೆ ವಿರುದ್ಧ ಯಾವುದೇ ಸಾಕ್ಷಿ ಆಧಾರ ಸಿಗದ ಕಾರಣ ಸಿಬಿಐ ತನ್ನ ತನಿಖೆ ಮುಕ್ತಾಯಗೊಳಿಸಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications