ಜಗನ್ ರೆಡ್ಡಿಗೆ ಮತ್ತೆ ಹೊಡೆತ ಇನ್ನಷ್ಟು ಆಸ್ತಿ ಜಪ್ತಿ
ಹೈದರಾಬಾದ್, ಡಿ.16: ಅಕ್ರಮ ಆಸ್ತಿ ಪ್ರಕರಣ ಆರೋಪ ಹೊತ್ತಿರುವ ವೈಎಸ್ಸಾರ್ ಕಾಂಗ್ರೆಸ್ ಮುಖ್ಯಸ್ಥ ಜಗನ್ ಮೋಹನ್ ರೆಡ್ಡಿ ಅವರಿಗೆ ಜಾರಿ ನಿರ್ದೇಶನಾಲಯ ತಂಡ ಮತ್ತೊಮ್ಮೆ ಶಾಕ್ ನೀಡಿದೆ.
ಜಗನ್ ಮೋಹನ್ ರೆಡ್ಡಿ ಅವರಿಗೆ ಸೇರಿರುವ ಸಾಕ್ಷಿ, ಜನನಿ ಇನ್ಫಾಸ್ಟ್ರಕ್ಚರ್ ಸಂಸ್ಥೆ ಹಾಗೂ ಜಗತಿ ಪಬ್ಲಿಕೇಷನ್ಸ್ ಗೆ ಸೇರಿರುವ 47 ಕೋಟಿ ರು ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಜಪ್ತಿ ಮಾಡಿದೆ. ಖಮ್ಮಂ, ವಾರಂಗಲ್, ಕೃಷ್ಣಾ, ಕರೀಂನಗರ, ಮೆಹಬೂಬ್ ನಗರ ಹಾಗೂ ಚಿತ್ತೂರು ಜಿಲ್ಲೆಗಳಲ್ಲಿರುವ ಜಗನ್ ಅವರ ಒಡೆತನದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದುಕೊಂಡಿದೆ.
ಇನ್ಮುಂದೆ ಜಗನ್ ಅವರು ಈ ಆಸ್ತಿ ಮಾರಾಟ ಹಾಗೂ ಬೋಗ್ಯಕ್ಕೆ ಬಿಡುವಂತಿಲ್ಲ. ಅದರೆ, ಅಲ್ಲಿನ ಸಂಸ್ಥೆಗಳಲ್ಲಿರುವ ಉದ್ಯೋಗಿಗಳು ಎಂದಿನಂತೆ ಕಾರ್ಯನಿರ್ವಹಿಸಬಹುದಾಗಿದೆ. [ಜಗನ್ ರೆಡ್ಡಿ ವಿರುದ್ಧ 11ನೇ ಚಾರ್ಜ್ ಶೀಟ್ ಸಲ್ಲಿಕೆ]

ರಾಜಶೇಖರ್ ರೆಡ್ಡಿ ಆರಂಭಿಸಿದ 'ಇಂದು ಕೈಗಾರಿಕಾ ಕಾರಿಡಾರ್' ಯೋಜನೆ ಒಂದು ಬಿಟ್ಟು ಉಳಿದಂತೆ ಜಗನ್ ಕಂಪನಿಗಳಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಯಾವುದೇ ತನಿಖೆ ನಡೆಸುವ ಸಾಧ್ಯತೆ ಕಮ್ಮಿಯಾಗಿದೆ. ಈಗ ಜಾರಿ ನಿರ್ದೇಶನಾಲಯ ಹಾಗೂ ಆದಾಯ ತೆರಿಗೆ ಇಲಾಖೆ ಮಾತ್ರ ತನಿಖೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ ಆದರೆ, ಸಿಬಿಐ ಮತ್ತೊಮ್ಮೆ ಚಾರ್ಜ್ ಶೀಟ್(ನಂ.11) ಹಾಕುವ ಮೂಲಕ ಬಿಸಿ ಮುಟ್ಟಿಸಿದೆ.
ಈಗ 10 ಕಂಪನಿಗಳ ಪೈಕಿ 8 ಕಂಪನಿಗಳು ಜಾರಿ ನಿರ್ದೇಶನಾಲಯ ಹಾಗೂ ಆದಾಯ ತೆರಿಗೆ ಇಲಾಖೆ ತನಿಖೆ ಭೀತಿ ಎದುರಿಸುತ್ತಿವೆ. ಸಂಡೂರು ಪವರ್ ಕಂಪನಿ, ಕಾರ್ಮೆಲ್ ಏಷ್ಯಾ ಹೋಲ್ಡಿಂಗ್ಸ್, ಪಿವಿಪಿ ಬಿಸಿನೆಸ್ ವೆಂಚರ್ಸ್, ಜುಬುಲಿ ಮೀಡಿಯಾ ಕಮ್ಯೂನಿಕೇಷನ್ಸ್, ಕ್ಲಾಸಿಕ್ ರಿಯಾಲ್ಟಿ, ಬ್ರಹ್ಮಣಿ ಇನ್ಫ್ರಾಟೆಕ್, ಆರ್ ಆರ್ ಗ್ಲೋಬಲ್ ಎಂಟರ್ ಪ್ರೈಸಸ್ ಹಾಗೂ ಸರಸ್ವತಿ ಪವರ್ ಮತ್ತು ಇಂಡಸ್ಟ್ರೀಸ್ ಸಂಸ್ಥೆ ವಿರುದ್ಧ ಯಾವುದೇ ಸಾಕ್ಷಿ ಆಧಾರ ಸಿಗದ ಕಾರಣ ಸಿಬಿಐ ತನ್ನ ತನಿಖೆ ಮುಕ್ತಾಯಗೊಳಿಸಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications