ಹೈದರಾಬಾದ್ ಮೃಗಾಲಯದ ಎಂಟು ಸಿಂಹಗಳಿಗೆ ಕೊರೊನಾ ಸೋಂಕು
ಹೈದರಾಬಾದ್, ಮೇ 4: ಹೈದರಾಬಾದ್ನಲ್ಲಿನ ನೆಹರೂ ಮೃಗಾಲಯದಲ್ಲಿನ ಎಂಟು ಸಿಂಹಗಳಿಗೆ ಕೊರೊನಾ ಸೋಂಕು ತಗುಲಿರುವುದಾಗಿ ತಿಳಿದುಬಂದಿದೆ. ಭಾರತದಲ್ಲಿ ಇದೇ ಮೊದಲ ಬಾರಿ ಪ್ರಾಣಿಗಳಲ್ಲಿ ಕೊರೊನಾ ಸೋಂಕು ತಗುಲಿರುವ ವರದಿಯಾಗಿದೆ.
ಏಪ್ರಿಲ್ 29ರಂದು ಸಿಸಿಎಂಬಿ ಸಂಸ್ಥೆ ಮೃಗಾಲಯದಲ್ಲಿನ ಈ ಎಂಟು ಸಿಂಹಗಳಿಗೆ ಆರ್ಟಿಪಿಸಿಆರ್ ಪರೀಕ್ಷೆ ನಡೆಸಿದ್ದು, ಎಲ್ಲಾ ಸಿಂಹಗಳಿಗೂ ಕೊರೊನಾ ಸೋಂಕು ಇರುವುದಾಗಿ ದೃಢಪಡಿಸಿದೆ.
ಈ ಕುರಿತು ಮೃಗಾಲಯದ ನಿರ್ದೇಶಕ ಡಾ. ಸಿದ್ಧಾನಂದ ಕುಕ್ರೇಟಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ಸಿಂಹಗಳಲ್ಲಿ ಕೊರೊನಾ ಲಕ್ಷಣಗಳು ಕಂಡುಬಂದಿದ್ದವು. ಸಿಸಿಎಂಬಿಯಿಂದ ಆರ್ಟಿಪಿಸಿಆರ್ ಪರೀಕ್ಷೆ ನಡೆಸಲಾಗಿದೆ. ವರದಿ ಕೈ ಸೇರುವ ಮುನ್ನ ಯಾವುದೇ ಹೇಳಿಕೆ ನೀಡಲು ಸಾಧ್ಯವಿಲ್ಲ. ಸದ್ಯಕ್ಕೆ ಸಿಂಹಗಳ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಕಳೆದ ವರ್ಷ ನ್ಯೂಯಾರ್ಕ್ನಲ್ಲಿ ಎಂಟು ಹುಲಿಗಳು ಹಾಗೂ ಸಿಂಹಗಳಿಗೆ ಕೊರೊನಾ ಸೋಂಕು ತಗುಲಿದ ವರದಿಯಾಗಿತ್ತು. ಹಾಂಗ್ಕಾಂಗ್ನಲ್ಲಿ ನಾಯಿ ಹಾಗೂ ಬೆಕ್ಕುಗಳಲ್ಲಿಯೂ ಕೊರೊನಾ ವೈರಸ್ ಪತ್ತೆಯಾಗಿತ್ತು. ಇದೀಗ ಭಾರತದಲ್ಲಿ ಮೊದಲ ಬಾರಿ ಪ್ರಾಣಿಗಳಲ್ಲಿ ಕೊರೊನಾ ಸೋಂಕು ಇರುವುದು ಪತ್ತೆಯಾಗಿದೆ. ಕೊರೊನಾ ವೈರಸ್ ಮನುಷ್ಯರಿಂದ ಪ್ರಾಣಿಗಳಿಗೆ ತಗುಲಿದೆಯೇ ಎಂಬ ಕುರಿತು ಜೆನೋಮ್ ಪರೀಕ್ಷೆಯನ್ನು ಸಿಸಿಎಂಬಿ ನಡೆಸುತ್ತಿದೆ.
ಎರಡು ದಿನಗಳ ಹಿಂದೆ ನೆಹರೂ ಜೈವಿಕ ಉದ್ಯಾನಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಈಚೆಗಷ್ಟೆ ಉದ್ಯಾನದ 25 ಸಿಬ್ಬಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿತ್ತು.
Recommended Video
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications