ಜಗನ್ ಪರ ಚುನಾವಣೆ ತಂತ್ರ ಹೆಣೆಯಲು ಪ್ರಶಾಂತ್ ಕಿಶೋರ್ ದಕ್ಷಿಣಕ್ಕೆ
ಹೈದರಾಬಾದ್, ಜುಲೈ 6: ಪ್ರಶಾಂತ್ ಕಿಶೋರ್- ಈ ಹೆಸರು ಬಹಳ ಖ್ಯಾತಿಗೆ ಬಂದಿದೆ. ಅದರಲ್ಲೂ ಚುನಾವಣಾ ರಣತಂತ್ರ ರೂಪಿಸುವುದರಲ್ಲಿ ಈತ ಮಹಾನ್ ಚಾಣಾಕ್ಷ ಎಂಬುದು ಜಗಜ್ಜಾಹೀರು. ಇದೀಗ ಪ್ರಶಾಂತ್ ದಕ್ಷಿಣಕ್ಕೆ ಬಂದಿದ್ದಾರೆ. ಆಂಧ್ರದ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜಗನ್ ಮೋಹನ್ ರೆಡ್ಡಿ ಪರವಾಗಿ ಕೆಲಸ ಮಾಡಲಿದ್ದಾರೆ.
ಅಂದಹಾಗೆ ಆಂಧ್ರ ವಿಧಾನಸಭೆ ಚುನಾವಣೆಗೆ ಇನ್ನೂ ಎರಡು ವರ್ಷಗಳ ಸಮಯವಿದೆ. ಕಳೆದ ಲೋಕಸಭಾ ಚುನಾವಣೆ ವೇಳೆ ನರೇಂದ್ರ ಮೋದಿ ಪರ ರಣತಂತ್ರ ರೂಪಿಸಿದ್ದ ಪ್ರಶಾಂತ್ ಕಿಶೋರ್, ಬಹಳ ಪ್ರಚಾರಕ್ಕೆ ಬಂದರು. ಆ ನಂತರ ಮೋದಿ ಅವರ ರಾಜಕೀಯ ಪ್ರತಿಸ್ಪರ್ಧಿ ಎನಿಸಿದ್ದ ನಿತೀಶ್ ಕುಮಾರ್ ಪರವಾಗಿ ಬಿಹಾರ ಚುನಾವಣೆಗೆ ಕೆಲಸ ಮಾಡಿದರು.

ಅಲ್ಲಿ ನಿತೀಶ್ ಮೂರನೇ ಅವಧಿಗೆ ಮರು ಆಯ್ಕೆಯಾದರು. ಆ ನಂತರ ಉತ್ತರಪ್ರದೇಶ ಚುನಾವಣೆ ವೇಳೆ ಪ್ರಶಾಂತ್ ಗೆ ಸಚಿವ ಸ್ಥಾನ ಮಾನ ಕೊಟ್ಟು, ಕಾಂಗ್ರೆಸ್ ಜತೆಗೆ ಸೇರಿ ಕೆಲಸ ಮಾಡುವುದಕ್ಕೆ ನೇಮಿಸಿಕೊಳ್ಳಲಾಯಿತು. ಅಲ್ಲಿ ಅಖಿಲೇಶ್ ಜತೆಗೆ ಕಾಂಗ್ರೆಸ್ ಮೈತ್ರಿ ಮಾಡಿಸಲು ಶ್ರಮ ವಹಿಸಿದ್ದು ಇದೇ ಕಿಶೋರ್.
ಆದರೆ, ಪ್ರಧಾನಿ ನರೇಂದ್ರ ಮೋದಿ ಅಬ್ಬರದ ಪ್ರಚಾರದಲ್ಲಿ ಬಿಜೆಪಿ ಗೆಲುವಿನ ಅಲೆಯಲ್ಲಿ ತೇಲಿತು. ಇನ್ನು ಪಂಜಾಬ್ ನಲ್ಲಿ ಕಾಂಗ್ರೆಸ್ ಯಶಸ್ಸಿನ ಹಿಂದೆ ಇದ್ದದ್ದು ಪ್ರಶಾಂತ್ ಕಿಶೋರ್.
ಜಗನ್ ಮೋಹನ್ ರೆಡ್ಡಿ ಬುಧವಾರ ಹೈದರಾಬಾದ್ ನಲ್ಲಿ ತಮ್ಮ ಪಕ್ಷದವರಿಗೆ ಕಿಶೋರ್ ನ ಪರಿಚಯ ಮಾಡಿಸಿದ್ದಾರೆ. ವೈಎಸ್ ಆರ್ ಕಾಂಗ್ರೆಸ್ ಪಕ್ಷದ ಸಂಸ್ಥಾಪಕ ಹಾಗೂ ಅಧ್ಯಕ್ಷ ಆಗಿರುವ ರೆಡ್ಡಿ ತಮ್ಮ ಪಕ್ಷದ ಪರ ಕಾರ್ಯ ನಿರ್ವಹಿಸಲು ಪ್ರಶಾಂತ್ ಕಿಶೋರ್ ನನ್ನು ನೇಮಿಸಿಕೊಂಡಿದ್ದಾರೆ.
ಪ್ರಶಾಂತ್ ಕಿಶೋರ್ ರನ್ನು ನಮ್ಮ ಕನ್ಸಲ್ಟಂಟ್ ಎಂದು ತೆಗೆದುಕೊಂಡಿದ್ದೇವೆ. ಪಕ್ಷದವರಿಗೆ ಪರಿಚಯಿಸಲಾಗಿದೆ ಎಂದು ವೈಎಸ್ ಆರ್ ಕಾಂಗ್ರೆಸ್ ಪಕ್ಷದ ಸಂಸದರಾದ ಪಿ ಮಿಥುನ್ ರೆಡ್ಡಿ ಹೇಳಿದ್ದಾರೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications