ಎಮ್ಮಾರ್ ಕೇಸ್: ರಾಮ್ ಚರಣ್ ಆಸ್ತಿಗೆ ಬಂತು ಕುತ್ತು?
ಹೈದರಾಬಾದ್, ಸೆ.16: ವಿವಾದಿತ ಎಮ್ಮಾರ್ ಟೌನ್ ಶಿಪ್ ನಲ್ಲಿ ನಿವೇಶನ ಖರೀದಿ ಹಗರಣದಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವ ಚಿರಂಜೀವಿ ಅವರ ಪುತ್ರ ರಾಮ್ ಚರಣ್ ತೇಜ ಅವರ ಹೆಸರು ಕೇಳಿ ಬಂದಿದ್ದು, ಜಾರಿ ನಿರ್ದೇಶನಾಲಯ ಅವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಿದೆ ಎಂಬ ಸುದ್ದಿ ಹಬ್ಬಿದೆ.
ಎಮ್ಮಾರ್-APIIC ಟೌನ್ ಶಿಫ್ ಫಲಾನುಭವಿಗಳ ಹೆಸರು ನೋಡಿದರೆ ಅಖಂಡ ಆಂಧ್ರದ ಭಾರಿ ಕುಳಗಳ ಹೆಸರುಗಳು ಹೊರ ಬೀಳುತ್ತದೆ. ಈ ಪ್ರಕರಣ ಯಾವ ಪ್ರಮಾಣದ ಅಕ್ರಮಗಳ ಸಂತೆ ಎಂಬುದು ಗೊತ್ತಾಗುತ್ತದೆ. [ವಿವಿಐಪಿ ಹೆಸರುಳ್ಳ ಪಟ್ಟಿ ಇಲ್ಲಿದೆ ನೋಡಿ]
ಸೀಮಾಂಧ್ರ ಮಾಧ್ಯಮಗಳ ವರದಿ ಪ್ರಕಾರ ಜಾರಿ ನಿರ್ದೇಶನಾಲಯ(ED) ಶೀಘ್ರದಲ್ಲೇ ರಾಮ್ ಚರಣ್ ತೇಜ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಿದೆ. ಬಹುಕೋಟಿ ಎಮ್ಮಾರ್ APIIC ಟೌನ್ ಶಿಫ್ ಹಗರಣದ ಫಲಾನುಭವಿಗಳ ಮೇಲೆ ಮನೆಗಳ ದಾಳಿ ನಡೆಯುವ ಸಂಭವವಿದೆ ಎನ್ನಲಾಗಿದೆ.

ಈ ಸುದ್ದಿಗೆ ಪೂರಕವಾಗಿ ಕಳೆದ ವಾರ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹೈದರಾಬಾದಿನ ಬೌಲ್ಡರ್ ಹಿಲ್ಸ್, ಮಾಣಿಕೊಂಡಾದಲ್ಲಿ 19 ನಿವೇಶನಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಇದರಲ್ಲಿ ರಾಮ್ ಚರಣ್ ತೇಜ ಹಾಗೂ ಮಾಜಿ ಕ್ರಿಕೆಟರ್ ವಿ ಚಾಮುಂಡೇಶ್ವರನಾಥ್ ಅವರ ನಿವೇಶನಗಳಿವೆ ಎಂದು ವರದಿಯಾಗಿದೆ.
ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಲೆಕ್ಕಾಚಾರದಂತೆ ಮನಿಲಾಂಡ್ರಿಗ್ ನಿಯಂತ್ರಣ ಕಾಯ್ದೆ ಪ್ರಕಾರ ವಶಕ್ಕೆ ತೆಗೆದುಕೊಂಡ ಆಸ್ತಿ ಮೌಲ್ಯ ಸುಮಾರು 72 ಕೋಟಿ ರು ದಾಟುತ್ತದೆಯಂತೆ. ಇದು ಬರೀ ಅಂದಾಜು ಮೊತ್ತವಾಗಿದ್ದು, ಆಸ್ತೊ ಮೌಲ್ಯ ಇನ್ನೂ ಅಧಿಕವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಹೈದರಾಬಾದಿನ ಬೌಂಡರ್ ಹಿಲ್ಸ್ ನಲ್ಲಿರುವ Emaar Hills Township (EHTPL) ಮೇಲೆ ಜಾರಿ ನಿರ್ದೇಶನಾಲಯದ ಜಂಟಿ ನಿರ್ದೇಶಕ ಎನ್ ಶ್ರೀಧರ್ ಅವರು ದಾಳಿ ನಡೆಸಿ ಆಸ್ತಿ ವಶಪಡಿಸಿಕೊಂಡಿದ್ದಾರೆ. ದೆಹಲಿಯಲ್ಲೂ EHTPLಗೆ ಸೇರಿರುವ ಆಸ್ತಿ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
2005-2009ರ ನಡುವಿನ ಅವಧಿಯಲ್ಲಿ ಈ ಅಕ್ರಮ ನಡೆದಿತ್ತು. ದುಬೈನ ಎಮ್ಮಾರ್ ನಿರ್ಮಾಣ ಸಂಸ್ಥೆ ಟೌನ್ ಶಿಪ್ ಅಭಿವೃದ್ಧಿಪಡಿಸಿತ್ತು. ಹೈದರಾಬಾದಿನ ಗಚಿಬೌಲಿ ಪ್ರದೇಶದಲ್ಲಿ ಕೈಗಾರಿಕಾ ಮೂಲ ಸೌಕರ್ಯ ಅಭಿವೃದ್ಧಿ ನಿಗಮವು (APPIC) ರೈತರಿಂದ 535 ಎಕರೆ ಕಿತ್ತುಕೊಂಡು ಈ ಟೌನ್ ಶಿಪ್ ನಿರ್ಮಾಣವಾಗಿತ್ತು.
ಆಂಧ್ರ ಹೈಕೋರ್ಟ್ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿತ್ತು. ಕುತೂಹಲದ ಸಂಗತಿಯೆಂದರೆ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಕೆಲ ಶಾಸಕರು ಮತ್ತು ಟಿಡಿಪಿ ಶಾಸಕರು ಪ್ರಕರಣವನ್ನು ಸಿಬಿಐಗೆ ಒಪ್ಪಿಸುವಂತೆ ಕೋರ್ಟ್ ಮೊರೆ ಹೋಗಿದ್ದರು.
ಈಗಿನ ವೈಎಸ್ಆರ್ ಕಾಂಗ್ರೆಸ್ ನ ಅಧಿನಾಯಕ ಜಗನ್ ಮೋಹನ್ ರೆಡ್ಡಿ ಸಹ ಈ ಅಕ್ರಮದಲ್ಲಿ ಪರೋಕ್ಷವಾಗಿ ಭಾಗಿರುವ ದಾಖಲೆಗಳು ಸಿಕ್ಕಿತ್ತು. ಈಗ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ ತನಿಖೆ ಮುಂದುವರೆದಿದ್ದು ಮತ್ತೊಮ್ಮೆ ಗಣ್ಯಾತಿಗಣ್ಯರ ಮನೆ ಬಾಗಿಲನ್ನು ತನಿಖೆ ಅಧಿಕಾರಿಗಳು ತಟ್ಟುತ್ತಿದ್ದಾರೆ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications