ಪವನ್ ಕಲ್ಯಾಣ್ ಪಕ್ಷ ಸೇರಿದ ಖಡಕ್ ಅಧಿಕಾರಿ ವಿವಿ ಲಕ್ಷ್ಮಿನಾರಾಯಣ
ಹೈದರಾಬಾದ್, ಮಾರ್ಚ್ 17: ಸಿಬಿಐನ ಮಾಜಿ ಜಂಟಿ ನಿರ್ದೇಶಕ ವಿವಿ ಲಕ್ಷ್ಮಿ ನಾರಾಯಣ ಅವರು ತೆಲುಗಿನ ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರ ಜನ ಸೇನಾ ಪಕ್ಷಕ್ಕೆ ಭಾನುವಾರದಾದಂದು ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಶ್ರೀಕೃಷ್ಣದೇವರಾಯ ವಿಶ್ವ ವಿದ್ಯಾಲಯದ ಮಾಜಿ ಉಪ ಕುಲಪತಿ ರಾಜಗೋಪಾಲ್ ಅವರು ಕೂಡಾ ಪವನ್ ಪಾರ್ಟಿ ಸೇರಿಕೊಂಡಿದ್ದಾರೆ.
ಖಡಕ್ ಅಧಿಕಾರಿ ಎಂದೇ ಹೆಸರಾಗಿದ್ದ ವಿವಿ ಲಕ್ಷ್ಮಿ ನಾರಾಯಣ ಅವರು ವಿವಿಎಲ್, ಗಾಲಿ ಜನಾರ್ದನ ರೆಡ್ಡಿ ಅಂಡ್ ಫ್ಯಾಮಿಲಿ ಒಎಂಸಿ ಅಕ್ರಮ ಗಣಿಗಾರಿಕೆ, ಜಗನ್ ಅಕ್ರಮ ಆಸ್ತಿ ಪ್ರಕರಣ, ಎಮ್ಮಾರ್ ಹಗರಣ, ಅದಕ್ಕೂ ಮೊದಲ ಭಾರತದ ಮಟ್ಟಿಗೆ ಅತಿ ದೊಡ್ಡ ಹಗರಣವಾದ ಸತ್ಯಂ ಕಂಪ್ಯೂಟರ್ಸ್ ಹಗರಣ ಸೇರಿದಂತೆ ಹಲವಾರು ಪ್ರಕರಣಗಳನ್ನು ಯಶಸ್ವಿಯಾಗಿ ತನಿಖೆ ನಡೆಸಿ, ಹಲವು ರಾಜಕಾರಣಿಗಳು ಮತ್ತು ಅಧಿಕಾರಿಗಳಿಗೆ ಸಿಂಹಸ್ವಪ್ನರಾಗಿದ್ದರು.
2018ರ ಏಪ್ರಿಲ್ ತಿಂಗಳಿನಲ್ಲಿ ಇಂಡಿಯನ್ ಪೊಲೀಸ್ ಸರ್ವೀಸ್ (ಐಪಿಎಸ್) ನಿಂದ ಸ್ವಯಂನಿವೃತ್ತಿ ಪಡೆದರು. ಗಾಲಿ ಜನಾರ್ದನ ರೆಡ್ಡಿ ಹಾಗೂ ಜಗನ್ ಮೋಹನ್ ರೆಡ್ಡಿ ಅವರನ್ನು ಬಂಧಿಸಿದ್ದರು.

ನಿವೃತ್ತಿ ಪಡೆದ ಬಳಿಕ ಆರೆಸ್ಸೆಸ್ ನಾಯಕರ ಜತೆಗೆ ಲಕ್ಷ್ಮಿ ನಾರಾಯಣ ಅವರ ಫೋಟೊಗಳು ಕಾಣಿಸಿಕೊಂಡಿದ್ದವು. ತೆಲಂಗಾಣದಲ್ಲಿ ಆರೆಸ್ಸೆಸ್, ಬಿಜೆಪಿ ಬಲಗೊಳಿಸಲು ಕೇಸರಿ ಪಕ್ಷ ಸೇರುತ್ತಾರೆ ಎಂಬ ಸುದ್ದಿ ಹಬ್ಬಿತ್ತು. ಆದರೆ, ಲಕ್ಷ್ಮಿ ನಾರಾಯಣ ಅವರ ಆಪ್ತರು ಸುದ್ದಿಯನ್ನು ಅಲ್ಲಗೆಳೆದಿದ್ದರು. 2018ರ ನವೆಂಬರ್ ನಲ್ಲಿ ಐಪಿಎಸ್ ಮಾಜಿ ಅಧಿಕಾರಿಗಳು ಹಾಗೂ ಸಮಾನ ಮನಸ್ಕರು ಸೇರಿಕೊಂಡು ಜನಧ್ವನಿ ಹೊಸ ಪಕ್ಷ ಸ್ಥಾಪಿಸುತ್ತಾರೆ ಎಂಬ ಸುದ್ದಿ ಹಬ್ಬಿತ್ತು. ಆದರೆ, ಯಾವುದೇ ಪಕ್ಷ ಸ್ಥಾಪನೆಯಾಗಲಿಲ್ಲ.
1990ರ ಮಹಾರಾಷ್ಟ್ರ ಕೇಡರ್ ಗೆ ಸೇರಿದ ಖಡಕ್ ಐಪಿಎಸ್ ಅಧಿಕಾರಿ ಲಕ್ಷ್ಮಿನಾರಾಯಣ.ಮೂಲತಃ ಇಂಜಿನಿಯರ್ ಆದರೂ ಕಾನೂನನ್ನು ಚೆನ್ನಾಗಿ ಅರಿದು ಕುಡಿದಿದ್ದಾರೆ. ವಾರಂಗಲ್ ರೀಜನಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮೆಕಾನಿಕಲ್ ಇಂಜಿನಿಯರಿಂಗ್ ನಲ್ಲಿ ಬಿಇ ಮಾಡಿದ್ದಾರೆ. ಬಿಇ ಮುಗಿಸುತ್ತಿದ್ದಂತೆ ಐಪಿಎಸ್ ಅಧಿಕಾರಿಯಾದರು. ಮಹಾರಾಷ್ಟ್ರದ ನಾಂದೇಡ್ ನಲ್ಲಿ ಎಸ್ ಪಿ ಯಾಗಿ ಸಾಕಷ್ಟು ಹೆಸರು ಗಳಿಸಿದರು. ಅಲ್ಲಿಂದ ಮುಂದೆ ಮಹಾರಾಷ್ಟ್ರ ಎಟಿಎಸ್ ತಂಡ ಸೇರಿದರು. 2006ರ ಜೂನ್ 12ರಂದು ಡಿಐಜಿಯಾಗಿ ಹೈದರಾಬಾದ್ ವಲಯಕ್ಕೆ ವರ್ಗವಾದರು. 2006ರಲ್ಲಿ ಪೊಲೀಸ್ ಪದಕವನ್ನು ಎದೆಗೇರಿಸಿಕೊಂಡರು.
-
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ









Click it and Unblock the Notifications