"ಮುಂದಿನ ವಾರದೊಳಗೆ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಸ್ಥಾಪನೆ"
ಹೈದರಾಬಾದ್, ಜುಲೈ 17: "ಮುಂದಿನ ವಾರದಲ್ಲಿ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಸ್ಥಾಪನೆಯಾಗಲಿದೆ" ಎಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ರಾಜ್ಯ ಉಸ್ತುವಾರಿ ಪಿ ಮುರಳೀಧರ ರಾವ್ ಹೇಳಿದ್ದಾರೆ.
ಎಚ್. ಡಿ ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವು ಗುರುವಾರ(ಜುಲೈ 18)ದಂದು ವಿಶ್ವಾಸಮತ ಕಳೆದುಕೊಳ್ಳುವ ಭರವಸೆಯನ್ನು ಮುರಳೀಧರರಾವ್ ವ್ಯಕ್ತಪಡಿಸಿದರು.
'ನಾವು ನಮ್ಮ ಜವಾಬ್ದಾರಿಯಂದ ಹಿಂದೆ ಸರಿಯುವುದಿಲ್ಲ. ಮೈತ್ರಿ ಸರ್ಕಾರ ಈಗ ಅಲ್ಪಮತಕ್ಕೆ ಕುಸಿದಿದೆ, ಸರ್ಕಾರ ರಚನೆ ಅವಕಾಶವನ್ನು ಬಳಸುತ್ತೇವೆ' ಎಂದು ಹೇಳಿದರು.

"ಶಾಸಕರ ಸರಣಿ ರಾಜೀನಾಮೆಯಿಂದಾಗಿ ಅಸ್ಥಿರ ಪರಿಸ್ಥಿತಿ ಎದುರಿಸುತ್ತಿರುವ ಕರ್ನಾಟಕ ರಾಜಕೀಯದಲ್ಲಿಂದು ಸುಪ್ರೀಂಕೋರ್ಟ್ ನೀಡಿದ ಮಧ್ಯಂತರ ತೀರ್ಪು ಮಹತ್ವದ ಪಾತ್ರವಹಿಸುವ ನಿರೀಕ್ಷೆಯಿದೆ. ರೆಬೆಎಲ್ ಶಾಸಕರ ರಾಜೀನಾಮೆ ಅಂಗೀಕರಿಸುವುದು ಸ್ಪೀಕರ್ ವಿವೇಚನೆಗೆ ಬಿಟ್ಟಿದ್ದು, ಈ ಬಗ್ಗೆ ನಮ್ಮ ತಕರಾರೇನಿಲ್ಲ' ಎಂದರು.
ರೆಬೆಲ್ ಶಾಸಕರ ರಾಜೀನಾಮೆ ವಿಳಂಬ ಕುರಿತಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ಸ್ವಾಗತಿಸಿರುವ ಮುರಳೀಧರ ರಾವ್, "ವಿಪ್ ಜಾರಿಗೊಳಿಸಿ, ಶಾಸಕರ ಮೇಲೆ ಒತ್ತಡ ಹೇರುವಂತಿಲ್ಲ ಎಂದು ಸುಪ್ರೀಂಕೋರ್ಟ್ ಸ್ಪಷ್ಟವಾಗಿ ಸೂಚಿಸಿದೆ. ಈ ಮೂಲಕ 15 ಶಾಸಕರಿಗೆ ಭದ್ರತೆಯನ್ನು ನೀಡಿದ್ದು, ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ಪಾಲ್ಗೊಳ್ಳುವುದು ಅವರ ಇಚ್ಛೆ, ಆದರೆ, ನನ್ನ ಅಭಿಪ್ರಾಯದ ಪ್ರಕಾರ, ಶಾಸಕರ ಅನರ್ಹತೆ ಸಾಧ್ಯವಿಲ್ಲ', ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಸ್ಪೀಕರ್ ಗಳಿಗೆ ಹೊಸದಿಕ್ಕನ್ನು ತೋರಿಸಲಿದೆ' ಎಂದು ಅಭಿಪ್ರಾಯಪಟ್ಟರು.
ಸ್ಪೀಕರ್ ಕಾರ್ಯವ್ಯಾಪ್ತಿ ಸೀಮಿತವಾಗಿದೆಯೇ? ಸದನಕ್ಕೆ ಹಾಜರಾಗುವಂತೆ ಪಕ್ಷಗಳು ನೀಡುವ ವಿಪ್ ಉಲ್ಲಂಘಿಸುವ ಶಾಸಕರ ಮೇಲೆ ಆಯಾ ಪಕ್ಷಗಳೇ ಕ್ರಮ ಜರುಗಿಸಬೇಕೆ? ಶಾಸಕರ ಅನರ್ಹತೆಗೆ ವಿಪ್ ಉಲ್ಲಂಘನೆಯನ್ನು ಪರಿಗಣಿಸಲು ಬರುವುದಿಲ್ಲವೇ? ಎಂಬೆಲ್ಲ ಪ್ರಶ್ನೆಗಳು ಎದ್ದಿವೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications