ಪಾತಕಿ ಅಬು ಸಲೇಂಗೆ 7 ವರ್ಷ ಕಠಿಣ ಶಿಕ್ಷೆ
ಹೈದರಾಬಾದ್, ನ, 28: ನಕಲಿ ಪಾಸ್ ಫೋರ್ಟ್ ಬಳಕೆ ಆರೋಪದಡಿಯಲ್ಲಿ ಭೂಗತ ಪಾತಕಿ ಅಬು ಸಲೇಂಗೆ ಇಲ್ಲಿನ ವಿಶೇಷ ಸಿಬಿಐ ನ್ಯಾಯಾಲಯ ಗುರುವಾರ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ನ್ಯಾಯಮೂರ್ತಿ ಎಂ.ವಿ.ರಮಣನಾಯ್ಡು ಅವರು ತಮ್ಮ ತೀರ್ಪಿನಲ್ಲಿ ಅಪರಾಧಿಯು ಹಲವು ನಕಲಿ ದಾಖಲೆಗಳನ್ನು ಸೃಷ್ಟಿಸಿ ವಂಚನೆ ಮಾಡಿರುವುದು ಸಾಬೀತಾಗಿದೆ ಎಂದಿದ್ದಾರೆ.
2001ರಲ್ಲಿ ಕೆಲ ಸರ್ಕಾರಿ ಅಧಿಕಾರಿಗಳ ಸಹಾಯದೊಂದಿಗೆ ನಕಲಿ ಜನ್ಮ ದಿನಾಂಕ, ನಕಲಿ ವಿಳಾಸ ಹಾಗೂ ತಂದೆ ಹೆಸರನ್ನು ಬದಲಿಸಿ ಅಬು ಸಲೇಂ ಪಾಸ್ ಫೋರ್ಟ್ ಪಡೆದಿದ್ದ. ನಂತರ ಆತ ದುಬೈಗೆ ಪರಾರಿಯಾಗಿ ಭಾರತದಲ್ಲೂ ತನ್ನ ಅಪರಾಧ ಚಟುವಟಿಕೆಗಳನ್ನು ನಡೆಸುತ್ತಿದ್ದ.

ನಂತರ 2009 ರಲ್ಲಿ ಆತ ಸಿಕ್ಕಿಬಿದ್ದ ನಂತರ ಘಟನೆಗೆ ಸಂಬಂಧಿಸಿದಂತೆ ಒಟ್ಟು 10 ಮಂದಿಯ ವಿರುದ್ಧ ಎಫ್ ಐಆರ್ ದಾಖಲಿಸಲಾಗಿತ್ತು. ಕಳೆದ ನ.18 ರಂದು ಅಬು ಸಲೇಂ ಅಪರಾಧಿ ಎಂದು ನ್ಯಾಯಾಲಯ ತೀರ್ಪು ನೀಡಿ ಗುರುವಾರ(ನ.28) ಶಿಕ್ಷೆ ಪ್ರಮಾಣವನ್ನು ಘೋಷಿಸಿದೆ.
ಇಂದಿನ ತೀರ್ಪಿನ ಅನ್ವಯ ಪೋರ್ಜರಿ, ವಂಚನೆ ಮತ್ತಿತರ ಅಪರಾಧಗಳಿಗೆ ಐಪಿಸಿ ಕಾಯ್ದೆಯಡಿ 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದ್ದಾರೆ. ಅಬು ಸಲೀಂ ವಿರುದ್ಧ ಈಗಾಗಲೇ ಹಲವು ಗಂಭೀರ ಪ್ರಕರಣಗಳ ವಿಚಾರಣೆ ನಡೆಯುತ್ತಿದ್ದು, ಇಂದು ಅದರಲ್ಲಿ ಒಂದಾದ ನಕಲಿ ಪಾಸ್ ಫೋರ್ಟ್ ಸೃಷ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತ್ರ ತೀರ್ಪು ಹೊರ ಬಿದ್ದಿದೆ. ಈ ಪ್ರಕರಣದಲ್ಲಿ ಇನ್ನೂ ಐವರು ತಲೆ ಮರೆಸಿಕೊಂಡಿದ್ದಾರೆ.
ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿರುವ ಸಲೇಂ 2002ರಲ್ಲಿ ಪ್ರೇಯಸಿ ಮೋನಿಕಾ ಬೇಡಿ ಜತೆ ಲಿಸ್ಬನ್ನಲ್ಲಿ ಸೆರೆಸಿಕ್ಕಿದ್ದ. ಮೂರು ವರ್ಷಗಳ ನಂತರ ಮುಂಬೈ ಸರಣಿ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಭಾರತಕ್ಕೆ ಪೋರ್ಚುಗಲ್ ದೇಶದಿಂದ ಹಸ್ತಾಂತರಗೊಂಡಿದ್ದ.
ಹಸ್ತಾಂತರದ ವೇಳೆ ಭಾರತ, ಅಬು ಸಲೇಂಗೆ ಮರಣದಂಡನೆ ಅಥವಾ 25 ವರ್ಷಕ್ಕಿಂತ ಹೆಚ್ಚಿನ ಸೆರೆವಾಸ ಶಿಕ್ಷೆ ವಿಧಿಸುವುದಿಲ್ಲ ಎಂದು ಪೋರ್ಚುಗಲ್ ಗೆ ಭರವಸೆ ನೀಡಲಾಗಿತ್ತು. ಆದರೆ, ನಂತರ ಇಂಥ ಶಿಕ್ಷೆ ವ್ಯಾಪ್ತಿಯಲ್ಲಿ ಬರುವ ಆರೋಪಗಳನ್ನು ಆತನ ವಿರುದ್ಧ ಹೊರಿಸಲಾಗಿದೆ. ಭಾರತದಲ್ಲಿ ತನ್ನ ಮೇಲಿನ ಆರೋಪಗಳ ವಿಚಾರಣೆ ರದ್ದುಗೊಳಿಸುವಂತೆ ಅಬು ಸಲೇಂ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿರುವುದನ್ನು ಇಲ್ಲಿ ಸ್ಮರಿಸಬಹುದು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications