ತೆಲುಗು ಖ್ಯಾತ ಹಾಸ್ಯನಟ ವೇಣುಮಾಧವ್ ತೀವ್ರ ಅಸ್ವಸ್ಥ
ಹೈದಬಾರಾಬ್, ಸೆಪ್ಟೆಂಬರ್ 25: ತೆಲುಗು ಚಿತ್ರರಂಗದ ಖ್ಯಾತ ಹಾಸ್ಯನಟ ವೇಣುಮಾಧವ್ ಅವರು ತೀವ್ರ ಅಸ್ವಸ್ಥರಾಗಿದ್ದು, ಜೀವ ರಕ್ಷಕ ಯಂತ್ರಗಳ ಸಹಾಯದಿಂದ ಉಸಿರಾಡುವ ಸ್ಥಿತಿ ತಲುಪಿದ್ದಾರೆ.
ವೇಣುಮಾಧವ್ ಅವರಿಗೆ ಯಕೃತ್ತಿನ ಸಮಸ್ಯೆಯಾಗಿ ಕಳೆದ ವಾರವೇ ಸಿಕಿಂದ್ರಾಬಾದ್ನ ಕಾರ್ಪೊರೇಟ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಯ ನಂತರ ಇದೇ ಭಾನುವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದರು.
ಆದರೆ ನಂತರ ಅವರ ಆರೋಗ್ಯದಲ್ಲಿ ತೀವ್ರ ಏರು-ಪೇರಾದ ಕಾರಣ ಅವರನ್ನು ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜೀವ ರಕ್ಷಕ ಯಂತ್ರಗಳನ್ನು ವೇಣುಮಾಧವ್ ಅವರಿಗೆ ಅಳವಡಿಸಲಾಗಿದೆ.

ವೇಣುಮಾಧವ್ ಅವರ ಯಕೃತ್ತು ತೀವ್ರ ಹಾನಿಗೆ ಒಳಗಾಗಿದ್ದು, ಯಕೃತ್ ಕಸಿ ಮಾಡುವ ಅವಶ್ಯಕತೆ ಇತ್ತು. ಪ್ರಸ್ತುತ ವೇಣುಮಾಧವನ್ ಸ್ಥಿತಿ ತೀವ್ರ ಚಿಂತಾಜನಕವಾಗಿದೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ.
ವೇಣುಮಾಧವ್ ಅವರು ತೆಲುಗು ಚಿತ್ರರಂಗದ ಖ್ಯಾತ ಹಾಸ್ಯನಟರಾಗಿದ್ದು, ಸುಮಾರು 170 ಸಿನಿಮಾಗಳಿಗಿಂತಲೂ ಹೆಚ್ಚಿನ ಸಿನಿಮಾದಲ್ಲಿ ನಟಿಸಿದ್ದಾರೆ. 1996 ರಲ್ಲಿ ಸಿನಿರಂಗ ಪ್ರವೇಶಿಸಿದ ಅವರು 2016 ರಲ್ಲಿ ಕೊನೆಯದಾಗಿ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಸತತವಾಗಿ ಆನೋರಾಗ್ಯ ಕಾಡಿದ ಕಾರಣ ಅವರು ಚಿತ್ರಗಳನ್ನು ನಟಿಸುವುದು ನಿಲ್ಲಿಸಿದ್ದರು.
ರಾಜಕೀಯದ ಬಗ್ಗೆಯೂ ಆಸಕ್ತಿ ಹೊಂದಿರುವ ಅವರು ಕಳೆದ ಡಿಸೆಂಬರ್ನಲ್ಲಿ ತೆಲಂಗಾಣದ ಕೋಡದ್ ವಿಧಾನಸಭೆ ಕ್ಷೇತ್ರದಿಂದ ನಾಮಪತ್ರವನ್ನೂ ಸಲ್ಲಿಸಿದ್ದರು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ









Click it and Unblock the Notifications