ಆಂಧ್ರ: ಜಗನ್ ಆರೋಗ್ಯ ಸ್ಥಿರ, ರೋಗಿಗಳ ಸ್ಥಿತಿ ಹರೋಹರ
ಹೈದರಾಬಾದ್, ಅ 8: ಅಖಂಡ ಆಂಧ್ರಪ್ರದೇಶ ವಿಭಜನೆಯ ವಿರುದ್ದ ಕಳೆದ ನಾಲ್ಕು ದಿನಗಳಿಂದ ಉಪವಾಸ ಸತ್ಯಾಗ್ರಹದಲ್ಲಿ ಕುಳಿತಿರುವ YSR ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಜಗನ್ಮೋಹನ್ ರೆಡ್ಡಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಹೇಳಿದ್ದಾರೆ. ಆದರೆ ಸೀಮಾಂಧ್ರ ಪ್ರದೇಶದ ಆಸ್ಪತ್ರೆಯಲ್ಲಿನ ರೋಗಿಗಳನ್ನು ಕೇಳುವವರೇ ಇಲ್ಲದಂತಾಗಿದೆ.
ಇನ್ನು ನವದೆಹಲಿಯ ಆಂಧ್ರ ಭವನದಲ್ಲಿ ಆಮರಣಾಂತ ಉಪವಾಸದಲ್ಲಿ ಕೂತಿರುವ ತೆಲುಗುದೇಶಂ ಮುಖ್ಯಸ್ಥ ಚಂದ್ರಬಾಬು ನಾಯ್ಡು ಈ ಕೂಡಲೇ ಆಂಧ್ರಭವನ ಖಾಲಿ ಮಾಡಬೇಕೆಂದು ನೋಟೀಸ್ ಜಾರಿ ಮಾಡಲಾಗಿದೆ. ಆದರೆ ಯಾವುದೇ ಕಾರಣಕ್ಕೂ ಇಲ್ಲಿಂದ ಕದಲುವುದಿಲ್ಲ ಎಂದು ನಾಯ್ಡು ತಿರುಗೇಟು ನೀಡಿದ್ದಾರೆ.
ಸುಮಾರು ಮೂವತ್ತು ಸಾವಿರಕ್ಕೂ ಹೆಚ್ಚು ಉದ್ಯೋಗಿಗಳು ಆಂಧ್ರ ವಿಭಜನೆಯ ವಿರುದ್ದ ಹೋರಾಟಕ್ಕಿಳಿರುವುದರಿಂದ ಸೀಮಾಂಧ್ರ ಪ್ರದೇಶದಲ್ಲಿ ತೀವ್ರ ವಿದ್ಯುತ್ ಅಭಾವ ಎದುರಾಗಿದೆ. ಪ್ರಮುಖವಾಗಿ ಆಸ್ಪತ್ರೆಗಳಿಗೆ ವಿದ್ಯುತ್ ಸರಬರಾಜು ಇಲ್ಲದಿರುವುದರಿಂದ ರೋಗಿಗಳು ಪರದಾಡುತ್ತಿದ್ದಾರೆ.
ಈ ಭಾಗದ ಹೆಚ್ಚಿನ ಕಾರ್ಖಾನೆಗಳು ಸದ್ಯ ಜನರೇಟರ್ ಮೂಲಕ ಕಾರ್ಯ ನಿರ್ವಹಿಸುತ್ತಿವೆ. ಆದರೆ ವಿದ್ಯುತ್ ಅಭಾವ ಜಲಮಂಡಳಿ, ರೈಲು, ಪೆಟ್ರೋಲ್ ಬಂಕುಗಳ ಮೇಲೂ ತಟ್ಟಿದೆ. ಮೂಲ ಕಾಂಗ್ರೆಸ್ ಪಕ್ಷದ ಸಚಿವರು, ಸಂಸದರು ಮತ್ತು ಶಾಸಕರ ನಿವಾಸಗಳ ಮುಂದೆ ಭಾರೀ ಪ್ರತಿಭಟನೆ ಮುಂದುವರಿದಿದೆ.
ರಾಜಮಂಡ್ರಿ, ನೆಲ್ಲೂರು, ತಿರುಪತಿ, ವಿಶಾಖಪಟ್ಟಣಂ, ಕಾಕಿನಾಡ ಮುಂತಾದೆಡೆ ರಾಜಕೀಯ ನಾಯಕರ ಶವಯಾತ್ರೆ, ಪ್ರತಿಕೃತಿ ದಹನ ಹೀಗೆ ವಿವಿಧ ರೀತಿಯಲ್ಲಿ ಪ್ರತಿಭಟನೆಗಳು ನಡೆಯುತ್ತಿದೆ.

ವಿದ್ಯುತ್ ಅಭಾವ
ನೌಕರರ ಮುಷ್ಕರದಿಂದ ರೈಲು ಸಂಚಾರ ವ್ಯತ್ಯಯಗೊಂಡಿದೆ. ಹೀಗಾಗಿ ರೈಲ್ವೆ ಇಲಾಖೆ ಬೇರೆ ವಿಧಿಯಿಲ್ಲದೇ ಹಲವು ರೈಲು ಸಂಚಾರವನ್ನು ರದ್ದುಗೊಳಿಸಿದೆ. ಇದರಿಂದಾಗಿ ಪ್ರಯಾಣಿಕರು ಇನ್ನಷ್ಟು ಪರದಾಡುವಂತಾಗಿದೆ.

ಜಗನ್
ಹೈದರಾಬಾದಿನ ಲೋಟಸ್ ಪಾಂಡ್ ನಲ್ಲಿ ಉಪವಾಸ ಸತ್ಯಾಗ್ರಹ ಕೂತಿರುವ ವೈ ಎಸ್ ಜಗನ್ಮೋಹನ್ ರೆಡ್ಡಿಗೆ ಉತ್ತಮ ಬೆಂಬಲ ವ್ಯಕ್ತವಾಗಿದೆ. ಉಪವಾಸ ಸತ್ಯಾಗ್ರಹ ಕೈಬಿಟ್ಟು ತೀವ್ರ ಪ್ರತಿಭಟನೆ ನಡೆಸಿ ಎಂದು ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಜಗನ್ ಅವರನ್ನು ವಿನಂತಿಸಿ ಕೊಂಡಿದ್ದಾರೆ.

ಜನಜೀವನ ಅಸ್ತವ್ಯಸ್ಥ
ಜಗನ್ ಆರೋಗ್ಯ ನೋಡಿಕೊಳ್ಳುತ್ತಿರುವ ವೈದ್ಯರು ಅವರ ಆರೋಗ್ಯ ಸ್ಥಿರವಾಗಿದೆ ಎಂದಿದ್ದಾರೆ. ಇದರಿಂದ ಕಾರ್ಯಕರ್ತರು ನಿರಾಳರಾಗಿದ್ದಾರೆ, ಆದರೆ ಪರದಾಡುತ್ತಿರುವ ಜನಸಾಮಾನ್ಯರ ಬವಣೆ ಕೇಳುವವರಾರು?

ಆಸ್ಪತ್ರೆಗಳು
ಸೀಮಾಂಧ್ರ ಭಾಗದ ಹೆಚ್ಚಿನ ಆಸ್ಪತ್ರೆಗಳಿಗೆ ಪ್ರತಿಭಟನೆಯ ಕಾವು ಸರಿಯಾಗಿ ತಟ್ಟುತ್ತಿದೆ. ವಿದ್ಯುತ್ ಇಲ್ಲದಿರುವುದರಿಂದ ಹೆಚ್ಚಿನ ತಪಾಸಣೆ ನಡೆಸಲಾಗುತ್ತಿಲ್ಲ.

ಸಿಖ್ಖರ ಪ್ರತಿಭಟನೆ
ಸೀಮಾಂಧ್ರ ಭಾಗದ ವಿಜಯನಗರಂನ ಗುರುದ್ವಾರಕ್ಕೆ ಪ್ರತಿಭಟನಾಕಾರರಿಂದ ಹಾನಿಯಾಗಿರುವುದನ್ನು ಪ್ರತಿಭಟಿಸಿ ಸಿಖ್ ಸಮುದಾಯದವರು ಗನ್ ಪಾರ್ಕ್ ನಲ್ಲಿ ಮೇಣದ ಬತ್ತಿ (candle light rally) ಹಿಡಿದು ಪ್ರತಿಭಟನೆ ನಡೆಸಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications