ಸೈನಿಕನಿಂದಲೇ ಗುಂಡಿನ ದಾಳಿ: 4 ಸಿಆರ್ಪಿಎಫ್ ಯೋಧರು ಸಾವು
ಛತ್ತೀಸ್ಗಢ ನವೆಂಬರ್ 8: ಛತ್ತೀಸ್ಗಢದ ಸುಕ್ಮಾ ಜಿಲ್ಲೆಯಲ್ಲಿ ಯೋಧನೊಬ್ಬ ಸಹ ಸೈನಿಕರ ಮೇಲೆ ಗುಂಡಿನ ದಾಳಿ ನಡೆಸಿದ ಪರಿಣಾಮ ನಾಲ್ವರು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಯೋಧರು ಸಾವನ್ನಪ್ಪಿದ್ದು, ಏಳು ಜನ ಗಾಯಗೊಂಡಿದ್ದಾರೆ.
ದೀಪಾವಳಿ ರಜೆ ವಿಚಾರವಾಗಿ ಇಬ್ಬರು ಯೋಧರ ನಡುವೆ ನಡೆದ ಕಿತ್ತಾಟ ಹಾಗೂ ಗುಂಡಿನ ಚಕಮಕಿಯಲ್ಲಿ ನಾಲ್ವರು ಯೋಧರು ಸಾವನ್ನಪ್ಪಿರುವ ಘಟನೆ ತೆಲಂಗಾಣ-ಛತ್ತೀಸ್ಗಢ ಗಡಿ ಭಾಗದಲ್ಲಿ ಸೋಮವಾರ ನಡೆದಿದೆ. ಛತ್ತೀಸ್ಗಢದ ಸುಕ್ಮಾ ಜಿಲ್ಲೆಯ ಲಿಂಗಂಪಲ್ಲಿ ಬೇಸ್ ಕ್ಯಾಂಪ್ನಲ್ಲಿ ದೀಪಾವಳಿ ರಜೆ ವಿಚಾರವಾಗಿ ಯೋಧರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಇಬ್ಬರೂ ಹೊಡೆದಾಡಿಕೊಂಡಿದ್ದಾರೆ. ಬಳಿಕ ಜಗಳ ತಾರಕಕ್ಕೇರಿದ್ದು, ಪರಸ್ಪರ ಗನ್ಗಳಿಂದ ಗುಂಡು ಹಾರಿಸಿದ್ದಾರೆ. ಮತ್ತಿಬ್ಬರು ಯೋಧರೂ ಕೂಡ ಘಟನೆಯಲ್ಲಿ ಸಾವನ್ನಪ್ಪಿದ್ದು, ಏಳು ಜನ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.
ಸೋದರ ಹತ್ಯೆಯ ಪ್ರಕರಣದಲ್ಲಿ, ಜಿಲ್ಲೆಯ ಮರೈಗುಡ ಪೊಲೀಸ್ ಠಾಣೆ ವ್ಯಾಪ್ತಿಯ ಲಿಂಗನಪಲ್ಲಿ ಗ್ರಾಮದ ಸಿಆರ್ಪಿಎಫ್ 50ನೇ ಬೆಟಾಲಿಯನ್ನ ಶಿಬಿರದಲ್ಲಿ ಬೆಳಗಿನ ಜಾವ 3.45ರ ಸುಮಾರಿಗೆ ರೀತೇಶ್ ರಂಜನ್ ಎಂದು ಗುರುತಿಸಲಾದ ಸೈನಿಕನೊಬ್ಬ ಜವಾನ್ ಎಂಬ ಸಹ ಸೈನಿಕರ ಮೇಲೆ ಗುಂಡು ಹಾರಿಸಿದ್ದಾನೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಜವಾನನು ತನ್ನ ಸೇವಾ ಆಯುಧವಾದ ಎಕೆ -47 ರೈಫಲ್ನಿಂದ ತನ್ನ ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿದ್ದಾನೆ ಎಂದು ಪೊಲೀಸ್ ಮಹಾನಿರೀಕ್ಷಕ (ಬಸ್ತರ್ ಶ್ರೇಣಿ) ಸುಂದರರಾಜ್ ಪಿ ತಿಳಿಸಿದ್ದಾರೆ.
ಘಟನೆಯಲ್ಲಿ ಏಳು ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣ ಚಿಕಿತ್ಸೆಗಾಗಿ ಭದ್ರಾಚಲಂ ಏರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಅವರಲ್ಲಿ ನಾಲ್ವರು ಗಾಯಗೊಂಡು ಸಾವನ್ನಪ್ಪಿದ್ದಾರೆ. ಮೃತರನ್ನು ಕಾನ್ಸ್ಟೆಬಲ್ಗಳಾದ ರಾಜಮಣಿ ಕುಮಾರ್ ಯಾದವ್, ರಾಜೀಬ್ ಮೊಂಡಲ್, ಧಂಜಿ ಮತ್ತು ಧರ್ಮೇಂದ್ರ ಕುಮಾರ್ ಎಂದು ಗುರುತಿಸಲಾಗಿದೆ. ಗಾಯಗೊಂಡ ಇಬ್ಬರು ಸಿಆರ್ಪಿಎಫ್ ಸಿಬ್ಬಂದಿಯನ್ನು ಚಿಕಿತ್ಸೆಗಾಗಿ ರಾಯ್ಪುರಕ್ಕೆ ವಿಮಾನದಲ್ಲಿ ರವಾನಿಸಲಾಗುತ್ತಿದೆ ಎಂದು ವರದಿಯಾಗಿದೆ.
ಗುಂಡಿನ ದಾಳಿಯ ಹಿಂದಿನ ಉದ್ದೇಶ ನಿಖರವಾಗಿ ಇನ್ನೂ ಪತ್ತೆಯಾಗಿಲ್ಲ ಮತ್ತು ಘಟನೆಯ ಕುರಿತು ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ರೀತೇಶ್ ರಂಜನ್ ಅವರನ್ನು ಕೂಡಲೇ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಘಟನೆಯ ನಂತರ, ಸಿಆರ್ಪಿಎಫ್ ಈ ಬಗ್ಗೆ ತನಿಖೆ ನಡೆಸಲು ನ್ಯಾಯಾಲಯಕ್ಕೆ ಆದೇಶಿಸಿದೆ.
ಛತ್ತೀಸ್ಗಢದಲ್ಲಿ ಇಂಥಹ ಘಟನೆ ಇದೇ ಮೊದಲಲ್ಲ. ಕಳೆದ ಎರಡು ವರ್ಷದ ಹಿಂದೆ ಇಂಥದ್ದೇ ಘಟನೆ ನಡೆದಿತ್ತು. ನಾರಾಯಣಪುರ ಜಿಲ್ಲೆಯಲ್ಲಿ ಇಂಡೋ ಬಾರ್ಡರ್ ಟಿಬೆಟಿಯನ್ ಪೊಲೀಸ್ (ಐಟಿಬಿಪಿ) ಸಿಬ್ಬಂದಿ ನಡುವೆ ನಡೆದು ಆರು ಮಂದಿ ಸಾವಿಗೆ ಕಾರಣವಾಗಿತ್ತು. ಇಲ್ಲಿನ ಕಡೇನರ್ ಗ್ರಾಮದಲ್ಲಿರುವ 45ನೇ ಐಟಿಬಿಪಿ ತುಕಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಪೇದೆ ತನ್ನ ಸೇವಾ ಬಂದೂಕಿನಿಂದ ಸಹೋದ್ಯೋಗಿಗಳ ಮೇಲೆ ಮನಸೋಯಿಚ್ಛೆ ಗುಂಡಿನ ಮಳೆಗರೆದಿದ್ದು, ನಂತರ ತಾನೂ ಗುಂಡು ಹಾರಿಸಿಕೊಂಡು ಮೃತಪಟ್ಟಿದ್ದರು. ಗುಂಡಿನ ದಾಳಿಗೂ ಮುನ್ನ ಸಿಬ್ಬಂದಿ ನಡುವೆ ರಜೆಗೆ ಸಂಬಂಧಿಸಿದಂತೆ ಜಗಳ ನಡೆದಿತ್ತು ಎಂದು ತಿಳಿದುಬಂದಿದೆ. ಗುಂಡೇಟಿನಿಂದ ಸ್ಥಳದಲ್ಲೇ ನಾಲ್ವರು ಯೋಧರು ಮೃತಪಟ್ಟರೆ, ಗಾಯಗೊಂಡ ಇತರೆ ಮೂವರಲ್ಲಿಒಬ್ಬ ಪೇದೆ ನಂತರ ಕೊನೆಯುಸಿರೆಳೆದಿದ್ದರು. ಇಬ್ಬರು ಗಾಯಾಳು ಯೋಧರನ್ನು ಏರ್ಲಿಫ್ಟ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
Recommended Video
ಆರೋಪಿ ಮಸೂದುಲ್ ರೆಹ್ಮಾನ್ ತಾನೇ ಗುಂಡು ಹಾರಿಸಿಕೊಂಡು ಮೃತಪಟ್ಟಿದ್ದು, ಇತರ ಸಹೋದ್ಯೋಗಿಗಳು ಪ್ರತಿಯಾಗಿ ಅವರ ಮೇಲೆ ದಾಳಿ ನಡೆಸಿಲ್ಲ ಎಂದು ಐಟಿಬಿಪಿ ವಕ್ತಾರರಾಗಿದ್ದ ವಿವೇಕ್ ಕುಮಾರ್ ಪಾಂಡೆ ಸ್ಪಷ್ಟಪಡಿಸಿದ್ದಾರೆ. ಮೃತರನ್ನು ಮುಖ್ಯ ಪೇದೆಗಳಾದ ಮಹೇಂದ್ರ ಸಿಂಗ್ ಮತ್ತು ದಲ್ಜಿತ್ ಸಿಂಗ್, ಪೇದೆಗಳಾದ ಸುರ್ಜಿತ್ ಸರ್ಕಾರ, ಬಿಸ್ವರೂಪ್ ಮೆಹ್ತೊ ಮತ್ತು ಬಿಜೀಷ್ ಎಂದು ಗುರುತಿಸಲಾಗಿದೆ.