ಆಂಧ್ರಪ್ರದೇಶದಲ್ಲಿ ಮೊದಲ ಕೊರೊನಾ ಕೇಸ್ ದೃಢ: ಆರೋಗ್ಯ ಇಲಾಖೆ
ಹೈದರಾಬಾದ್, ಮಾರ್ಚ್ 12: ಕರ್ನಾಟಕ, ಕೇರಳ, ತೆಲಂಗಾಣ, ಮಹಾರಾಷ್ಟ್ರ ಬಳಿಕ ಈಗ ದಕ್ಷಿಣ ಭಾರತದ ಇನ್ನೊಂದು ರಾಜ್ಯದಲ್ಲೂ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಇಟಲಿಯಿಂದ ನೆಲ್ಲೂರಿಗೆ ಬಂದಿದ್ದ ವ್ಯಕ್ತಿಗೆ ಕೊರೊನಾ ಪಾಸಿಟೀವ್ ಎಂದು ಆರೋಗ್ಯ ಇಲಾಖೆ ಖಚಿತಪಡಿಸಿದೆ.
ಮಾರ್ಚ್ 6 ರಂದು ನೆಲ್ಲೂರಿಗೆ ಬಂದಿದ್ದ ವ್ಯಕ್ತಿಯಲ್ಲಿ ಕೆಮ್ಮು ಕಾಣಿಸಿಕೊಂಡ ಹಿನ್ನೆಲೆ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಬಹುಶಃ ಸೋಂಕು ತಗುಲಿರಬಹುದು ಎಂಬ ಅನುಮಾನ ಕಾಡುತ್ತಿತ್ತು. ಇಂದು ಅಧಿಕೃತವಾಗಿ ವೈದ್ಯರು ಕೊರೊನಾ ಪಾಸಿಟೀವ್ ಎಂದು ಘೋಷಿಸಿದ್ದಾರೆ.
ಸದ್ಯಕ್ಕೆ ಸೋಂಕಿತ ವ್ಯಕ್ತಿ ಸಹಜ ಸ್ಥಿತಿಯಲ್ಲಿದ್ದಾನೆ. ಆತನ ಆರೋಗ್ಯದಲ್ಲಿ ಯಾವುದೇ ಬದಲಾವಣೆ ಆಗಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಸದ್ಯಕ್ಕೆ ರೋಗ ಲಕ್ಷಣಗಳಲ್ಲಿ ಚೇತರಿಕೆ ಕಂಡುಬರುತ್ತಿದ್ದು, 14 ದಿನದವರೆಗೂ ಆತನ ಮೇಲೆ ನಿಗಾವಹಿಸಲಾಗುತ್ತೆ. ನಂತರ ಕೊನೆ ದಿನ ಮತ್ತೊಮ್ಮೆ ಪರೀಕ್ಷಿಸಿ ದಿಸ್ಚಾರ್ಜ್ ಮಾಡಲಾಗುತ್ತೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಇನ್ನು ಆ ವ್ಯಕ್ತಿಯ ಜೊತೆ ಸಂಪರ್ಕದಲ್ಲಿದ್ದ ಎಲ್ಲರನ್ನು ತಪಾಸಣೆಗೆ ಒಳಪಡಿಸಲಾಗಿದ್ದು, ಅವರ ಮೇಲೂ ನಿಗಾ ಇಡಲಾಗಿದೆ ಎಂದು ಹೇಳಿದ್ದಾರೆ. ಇಟಲಿಯಿಂದ ದೆಹಲಿಗೆ ಬಂದಿದ್ದ ವ್ಯಕ್ತಿ, ಬಳಿಕ ದೆಹಲಿಯಿಂದ ಚೆನ್ನೈಗೆ ವಿಮಾನದಲ್ಲಿ ಪ್ರಯಾಣ ಮಾಡಿದ್ದರು. ಆಮೇಲೆ ಚೆನ್ನೈನಿಂದ ನೆಲ್ಲೂರಿಗೆ ಬಂದಿದ್ದರು ಎಂದು ತಿಳಿದುಬಂದಿದೆ.
ಸದ್ಯ, ಇಟಲಿಯಿಂದ ಬರುವ ಜನರ ಮೇಲೆ ಹೆಚ್ಚು ನಿಗಾ ವಹಿಸಲಾಗುತ್ತಿದೆ. ಚೀನಾದಲ್ಲಿ ಕೊರೊನಾ ವೈರಸ್ ನಿಯಂತ್ರಣ ಕಾಣುತ್ತಿದೆ. ಆದರೆ ಇಟಲಿಯಲ್ಲಿ ಕೊರೊನಾ ಹರಡುವಿಕೆ ಹೆಚ್ಚಾಗತ್ತಲೇ ಇದೆ. ಇದುವರೆಗೂ ಇಟಲಿಯಲ್ಲಿ 827 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications