ಮೋದಿ ಹತ್ಯೆಗೆ ಸ್ಕೆಚ್ ಹಾಕಿದ್ದ ಐದು ಉಗ್ರರ ಹತ್ಯೆ
ಹೈದರಾಬಾದ್, ಏ.7: ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತಿನ ಮುಖ್ಯಮಂತ್ರಿಯಾಗಿದ್ದಾಗ ಅವರ ಹತ್ಯೆಗೆ ಸ್ಕೆಚ್ ಹಾಕಿದ್ದ ಉಗ್ರರನ್ನು ತೆಲಂಗಾಣ ಪೊಲೀಸರು ಕೊಂದು ಹಾಕಿದ್ದಾರೆ.
ಐವರು ಶಂಕಿತ ಉಗ್ರರು ಹರ್ಕತ್-ಉಲ್-ಇಸ್ಲಾಮಿ ಪ್ರಾಯೋಜಿತ ತೆಹ್ರಿಕ್ ಘಲಬಾ ಇ ಇಸ್ಲಾಂ ಸಂಘಟನೆಗೆ ಸೇರಿದವರಾಗಿದ್ದಾರೆ. ಎಲ್ಲಾ ಉಗ್ರರನ್ನು ವಿಚಾರಣೆಗಾಗಿ ಕೋರ್ಟಿಗೆ ಕರೆದೊಯ್ಯುವಾಗ ಈ ಘಟನೆ ನಡೆದಿದೆ.

ಉಗ್ರವಾದಿ ಬಿಲಾಲ್ ನಿಂದ ಪ್ರೇರಿತನಾಗಿದ್ದ ವಿಕಾರುದ್ದೀನ್ ಅಹ್ಮದ್ ಎರಡು ಬಾರಿ ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡಲು ಯತ್ನಿಸಿ ವಿಫಲನಾಗಿದ್ದ. ವಿಕಾರುದ್ದೀನ್ ಸೇರಿ ಐವರು ಉಗ್ರರು ವಾರಂಗಲ್ ನಲ್ಲಿ ಪೊಲೀಸರ ಹಿಡಿತದಿಂದ ತಪ್ಪಿಸಿಕೊಂಡು ಎಸ್ಕೇಪ್ ಆಗಲು ಯತ್ನಿಸುವಾಗ ಎನ್ ಕೌಂಟರ್ ನಡೆದಿದೆ.
ಮೃತ ಉಗ್ರರನ್ನು ವಿಕಾರುದ್ದೀನ್, ಸೈಯದ್ ಅಮ್ಜದ್, ಹನೀಫ್, ಜಾಕೀರ್ ಹಾಗೂ ಇರ್ಫಾನ್ ಎಂದು ಗುರುತಿಸಲಾಗಿದೆ. ಬಾಂಗ್ಲಾದೇಶ ಮೂಲದ ಉಗ್ರ ಸಂಘಟನೆ ತೆಹ್ರಿಕ್ ಘಲಬಾ ಇ ಇಸ್ಲಾಂಗಾಗಿ ಎಲ್ಲರೂ ಕಾರ್ಯ ನಿರ್ವಹಿಸುತ್ತಿದ್ದರು.

ಹೈದರಾಬಾದಿನ ಓಲ್ಡ್ ಮಲಕ್ ಪೇಟೆಯಲ್ಲಿ ನೆಲೆಸಿದ್ದ ವಿಕಾರುದ್ದೀನ್ ಭಾರತದ ಮೋಸ್ಟ್ ವಾಂಟೆಂಡ್ ಕ್ರಿಮಿನಲ್ ಪಟ್ಟಿಯಲ್ಲಿದ್ದ. ಪಾಕಿಸ್ತಾನದ ಐಎಸ್ ಐ ಜೊತೆ ಕೂಡಾ ಸಂಪರ್ಕ ಸಾಧಿಸಿದ್ದ, ಬಾಂಗ್ಲಾ, ಕತಾರ್, ದುಬೈ ಗೆ ಭೇಟಿ ನೀಡಿ ಉಗ್ರ ಚಟುವಟಿಕೆಗಳನ್ನು ನಡೆಸಲು ನೆರವು ಪಡೆದುಕೊಂಡಿದ್ದ.

ಬಾಲಸ್ವಾಮಿ ಎಂಬ ಹೋಂ ಗಾರ್ಡ್ ಕೊಂದಿದ್ದ ವಿಕಾರುದ್ದೀನ್, ಅಂದಿನ ಗುಜರಾತ್ ಸಿಎಂ ನರೇಂದ್ರ ಮೋದಿ ಮೇಲೆ ದಾಳಿ ನಡೆಸಿ ಹತ್ಯೆ ಮಾಡಲು ಯತ್ನಿಸಿ ವಿಫಲನಾಗಿದ್ದ.
-
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ












Click it and Unblock the Notifications