ವಲಯ ಅರಣ್ಯಾಧಿಕಾರಿ ಮೇಲೆ ಟಿಆರ್ ಎಸ್ ಕಾರ್ಯಕರ್ತರ ಮಾರಣಾಂತಿಕ ಹಲ್ಲೆ
ಹೈದರಾಬಾದ್, ಜೂನ್ 30: ಮರ ನೆಡುವ ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಅರಣ್ಯಾಧಿಕಾರಿ ಮೇಲೆ ಭಾನುವಾರ ಬೆಳಗ್ಗೆ ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿಯ ಮುಖಂಡ, ಆತನ ಬೆಂಬಲಿಗರು ಹಾಗೂ ಸ್ಥಳೀಯ ಹಳ್ಳಿಗರು ಹಲ್ಲೆ ನಡೆಸಿದ್ದಾರೆ. ಆಕೆಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ದಾಳಿಯ ನಂತರ ಅಧಿಕಾರಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅರಣ್ಯ ವಲಯ ಅಧಿಕಾರಿ ಅನಿತಾ ಅವರ ಮೇಲೆ ಹಲ್ಲೆ ನಡೆಸಲಾಗಿದ್ದು, ಅವರು ಅಸಹಾಯಕರಾಗಿ ಕಂಡುಬರುತ್ತಾರೆ. ಸಿಟ್ಟಾಗಿರುವ ಗುಂಪು ದೊಡ್ಡ ಮರದ ತುಂಡುಗಳನ್ನು ಹಿಡಿದು, ಆಕೆಯನ್ನು ಸುತ್ತುವರಿದಿರುವುದು ಕಂಡುಬರುತ್ತದೆ. ಅನಿತಾ ನಿಂತಿರುವ ಟ್ರ್ಯಾಕ್ಟರ್ ಅನ್ನು ಸುತ್ತುವರಿದು, ಹಲ್ಲೆ ನಡೆಸಲಾಗಿದೆ.
ಅನಿತಾ ಅವರ ಮೇಲೆ ಹಲ್ಲೆ ನಡೆಸಿರುವವರ ಪೈಕಿ ಸ್ಥಳೀಯ ಜಿಲ್ಲಾಪರಿಷತ್ ಉಪಾಧ್ಯಕ್ಷ ಕೊನೇರು ಕೃಷ್ಣ, ಮತ್ತೊಬ್ಬ ಜನಪ್ರತಿನಿಧಿಯ ಸೋದರ ಕೊನೇರು ಕೋನಪ್ಪ ಇದ್ದರು ಎನ್ನಲಾಗಿದೆ. ಇತರ ಪೊಲೀಸ್ ಅಧಿಕಾರಿಗಳು ಆಕೆಗೆ ರಕ್ಷಣೆ ನೀಡಲು ಯತ್ನಿಸಿದರೂ ಅವರನ್ನೆಲ್ಲ ತಳ್ಳುತ್ತಾ ದಾಳಿ ನಡೆಸಿದ್ದಾರೆ.

ಕೊಮರಂ ಭೀಮ್ ಅಸೀಫಾಬಾದ್ ಜಿಲ್ಲೆಯಲ್ಲಿ ಅನಿತಾ ಮತ್ತು ಅವರ ತಂಡದ ಮೇಲೆ ದಾಳಿ ನಡೆದಿದೆ. ಕಾಡು ಬೆಳೆಸುವ ಉದ್ದೇಶದಿಂದ ಸರಕಾರದ ಜಾಗದಲ್ಲಿ ಗಿಡ ನೆಡಲು ಅರಣ್ಯ ಇಲಾಕೆ ಮುಂದಾಗಿತ್ತು. ಆದರೆ ಸ್ಥಳೀಯರು ಆ ಜಾಗದಲ್ಲಿ ಕಾನೂನುಬಾಹಿರವಾಗಿ ಕೃಷಿ ಮಾಡುತ್ತಿದ್ದರು. ಆ ಸ್ಥಳವನ್ನು ಸರಕಾರ ಮತ್ತೆ ವಶಪಡಿಸಿಕೊಳ್ಳಲು ಅವಕಾಶ ನೀಡಬಾರದೆಂದು ಹೀಗೆ ಮಾಡಿದ್ದಾರೆ.
ವಲಯ ಅರಣ್ಯಾಧಿಕಾರಿ ಅನಿತಾ ಅವರು ಮೂವತ್ತು ಪೊಲೀಸರು, ಮೂವತ್ತು ಅರಣ್ಯ ಸಿಬ್ಬಂದಿ ಜತೆಗೆ ತೆರಳಿದ್ದರು. ನಾವು ಸರಕಾರದ ಆದೇಶವನ್ನು ಮಾತ್ರ ಪಾಲಿಸುತ್ತಿದ್ದೇವೆ ಎಂದು ಹೇಳುತ್ತಿದ್ದರೂ ಅನಿತಾ ಅವರ ಮೇಲಿನ ದಾಳಿ ನಡೆಸುವುದು ನಿಲ್ಲಿಸಿಲ್ಲ.
#WATCH Telangana: A police team & forest guards were attacked allegedly by Telangana Rashtra Samithi workers in Sirpur Kagaznagar block of Komaram Bheem Asifabad district, during a tree plantation drive. (29.06.2019) pic.twitter.com/pZ0H3Qg2Ud
— ANI (@ANI) 30 June 2019
ಈ ಘಟನೆಗೆ ಸಂಬಂಧಿಸಿದಂತೆ ಒಟ್ಟು ಹದಿನಾರು ಮಂದಿಯನ್ನು ಬಂಧಿಸಲಾಗಿದೆ. ಇನ್ನೂ ಹಲವರನ್ನು ಬಂಧಿಸುವ ಸಾಧ್ಯತೆ ಇದೆ. ಈ ಘಟನೆ ನಡೆಯುವ ವೇಳೆ ಏಕೆ ಗುಂಡು ಹಾರಿಸಲಿಲ್ಲ ಎಂಬ ಬಗ್ಗೆ ತನಿಖೆ ನಡೆಯಲಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications