ಹೈದರಾಬಾದ್ನಲ್ಲಿ ನಾಲ್ವರು ಹುಜಿ ಉಗ್ರರ ಬಂಧನ
ಹೈದರಾಬಾದ್, ಆಗಸ್ಟ್ 14 : ಹೈದರಾಬಾದ್ ಪೊಲೀಸರು ನಿಷೇಧಿತ ಹುಜಿ ಉಗ್ರಗಾಮಿ ಸಂಘಟನೆಯ ನಾಲ್ವರು ಸದಸ್ಯರನ್ನು ಶುಕ್ರವಾರ ಬಂಧಿಸಿದ್ದಾರೆ. ಬಂಧಿತರ ಪೈಕಿ ಒಬ್ಬರು ಪಾಕಿಸ್ತಾನದವರು ಎಂದು ತಿಳಿದುಬಂದಿದ್ದು, ತನಿಖೆ ಮುಂದುವರೆದಿದೆ.
ಮಯನ್ಮಾರ್ನಿಂದ ಆಗಮಿಸಿದ್ದ ನಾಲ್ವರನ್ನು ಹೈದರಾಬಾದ್ ಪೊಲೀಸರು ಶುಕ್ರವಾರ ನಗರದಲ್ಲಿ ಬಂಧಿಸಿದ್ದಾರೆ. ಲಷ್ಕರ್ ಎ ತೋಯ್ಬಾ ಸಂಘಟನೆಯ ಸಹೋದರ ಸಂಘಟನೆಯಾದ ಹರ್ಕತ್-ಉಲ್-ಜಿಹಾದ್-ಅಲ್-ಇಸ್ಲಾಮಿ (ಹುಜಿ) ಸಂಘಟನೆ ಬಾಂಗ್ಲಾದೇಶದ್ದಾಗಿದ್ದು, ಅದನ್ನು ನಿಷೇಧಿಸಲಾಗಿದೆ.[ಪತ್ರಕರ್ತರ ಕೊಲೆಗೆ ಸಂಚು ಹಾಕಿದ್ದ ಹುಜಿ ಉಗ್ರ ಸೆರೆ]

ಬಂಧಿತ ನಾಲ್ವರ ಪೈಕಿ ಮಹಮ್ಮದ್ ನಜೀರ್ ಎಂಬುವವನು ಪಾಕಿಸ್ತಾನಕ್ಕೆ ಸೇರಿದವನಾಗಿದ್ದರೆ, ಮತ್ತೊಬ್ಬ ಮಯನ್ಮಾರ್ನವನಾಗಿದ್ದಾನೆ. ಉಳಿದ ಇಬ್ಬರು ಬಾಂಗ್ಲಾದೇಶವರಾಗಿದ್ದಾರೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. [ಅಸ್ಸಾಂನಲ್ಲಿ ಭಯೋತ್ಪಾದಕ ದಾಳಿ ಸಂಚು ವಿಫಲ]
ನಿಷೇಧಿತ ಹುಜಿ ಸಂಘಟನೆಗೆ ಸೇರಿದ ಇವರು ಹೈದರಾಬಾದ್ನಲ್ಲಿ ಅಕ್ರಮವಾಗಿ ವಾಸ ಮಾಡುತ್ತಿದ್ದರೆ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಾಂಗ್ಲಾ ಮತ್ತು ಮಯನ್ಮಾರ್ಗೆ ಸೇರಿದವರು ಹೈದರಾಬಾದ್ನಲ್ಲಿ ವಾಸಮಾಡುತ್ತಿದ್ದರು ಎಂದು ತಿಳಿದುಬಂದಿದ್ದು, ಅವರ ಬಳಿ ಸೂಕ್ತವಾದ ವಿಳಾಸದ ದಾಖಲೆಗಳು ಪತ್ತೆಯಾಗಿಲ್ಲ.
ಸ್ವಾತಂತ್ರ ದಿನಾಚರಣೆ ಹಿನ್ನಲೆಯಲ್ಲಿ ಹೈದರಾಬಾದ್ನಲ್ಲಿ ಕಟ್ಟೆಚ್ಚರ ಘೋಷಣೆ ಮಾಡಲಾಗಿದೆ. ಬಂಧಿತ ಮೊಹಮ್ಮದ್ ನಜೀರ್ನಿಂದ ಮಹತ್ವದ ದಾಖಲೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದ್ದು, ತನಿಖೆ ಮುಂದುವರೆದಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications