ಹುತಾತ್ಮ ಯೋಧನ ಪತ್ನಿಗೆ ಕೊಟ್ಟು ಮಾತು ಉಳಿಸಿಕೊಂಡ ತೆಲಂಗಾಣ ಸರ್ಕಾರ
ಹೈದರಾಬಾದ್, ಜುಲೈ 23: ಗಾಲ್ವಾನ್ ಕಣಿವೆ ಗಡಿ ಪ್ರದೇಶದಲ್ಲಿ ನಡೆದ ಚೀನಾ ಮತ್ತು ಭಾರತ ಸೈನಿಕರ ಘರ್ಷಣೆಯಲ್ಲಿ ಹುತಾತ್ಮರಾದ ಕರ್ನಲ್ ಸಂತೋಷ್ ಬಾಬು ಅವರ ಪತ್ನಿಗೆ ತೆಲಂಗಾಣ ಸರ್ಕಾರ ಉದ್ಯೋಗ ನೀಡಿದೆ.
Recommended Video
ಕರ್ನಲ್ ಸಂತೋಷ್ ಬಾಬು ಅವರ ಪತ್ನಿಯನ್ನು ತೆಲಂಗಾಣದ ಉಪ ಜಿಲ್ಲಾಧಿಕಾರಿಯಾಗಿ (Deputy collector) ನೇಮಕ ಮಾಡಿ ಬುಧವಾರ ಸರ್ಕಾರ ಆದೇಶಿಸಿದೆ. ನೇಮಕಾತಿ ಪತ್ರ ಸಹ ಯೋಧನ ಪತ್ನಿಗೆ ಹಸ್ತಾಂತರಿಸಲಾಗಿದೆ ಎಂದು ತಿಳಿದು ಬಂದಿದೆ.
ಈ ಕುರಿತು ಅಧಿಕೃತ ಪ್ರಕಟಣೆ ಬಿಡುಗಡೆ ಮಾಡಿರುವ ಸರ್ಕಾರ, 'ಇಂಡೋ-ಚೀನಾ ಗಡಿಯಲ್ಲಿ ನಡೆದ ಘರ್ಷಣೆಯಲ್ಲಿ ಹುತಾತ್ಮರಾದ ಕರ್ನಲ್ ಸಂತೋಷ್ ಬಾಬು ಅವರ ಪತ್ನಿ ಎಂ.ಎಸ್.ಸಂತೋಶಿ ಅವರನ್ನು ಜಿಲ್ಲಾ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಗೌರವಾನ್ವಿತ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಬುಧವಾರ ಪ್ರಗತಿ ಭವನದಲ್ಲಿ ನೇಮಕ ಪತ್ರವನ್ನು ಎಂ.ಎಸ್.ಸಂತೋಶಿ ಅವರಿಗೆ ಹಸ್ತಾಂತರಿಸಿದರು' ಎಂದು ತಿಳಿಸಿದೆ.

ಸಂತೋಶಿ ಅವರನ್ನು ಹೈದರಾಬಾದ್ ಅಥವಾ ಅದರ ಸುತ್ತಮುತ್ತಲಿನ ಪ್ರದೇಶದಲ್ಲಿ ಪೋಸ್ಟ್ ಮಾಡುವಂತೆ ಸಿಎಂ ಕೆಸಿಆರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸಂತೋಶಿ ಅವರು ಸರಿಯಾದ ತರಬೇತಿ ಪಡೆದು ತನ್ನ ಉದ್ಯೋಗದಲ್ಲಿ ನೆಲೆಸುವವರೆಗೂ ಅವರಿಗೆ ಸೂಕ್ತ ಸಹಾಯ ಮಾಡುವಂತೆ ತಮ್ಮ ಕಾರ್ಯದರ್ಶಿ ಸ್ಮಿತಾ ಸಭರ್ವಾಲ್ಗೆ ತಿಳಿಸಿದ್ದಾರೆ ಎಂದು ತಿಳಿದಿದೆ.
ಜಿಲ್ಲಾಧಿಕಾರಿ ಉದ್ಯೋಗದ ಜೊತೆಗೆ ಹೈದರಾಬಾದ್ ನಗರದಲ್ಲಿ 711 ಚದರ ಅಡಿ ವಿಸ್ತೀರ್ಣದ ನಿವೇಶನ ನೀಡಿದೆ. ಈ ಸಂಬಂಧ ಜಿಲ್ಲಾಧಿಕಾರಿ ದಾಖಲೆ ಪತ್ರಗಳನ್ನು ಸಹ ಸಂತೋಶಿ ಅವರಿಗೆ ಹಸ್ತಾಂತರಿಸಿದ್ದಾರೆ ಎಂದು ಸರ್ಕಾರ ಅಧಿಕೃತವಾಗಿ ತಿಳಿಸಿದೆ.

ಕರ್ನಲ್ ಸಂತೋಷ್ ಬಾಬು ಅವರ ಹುತಾತ್ಮರಾದ ಸಂದರ್ಭದಲ್ಲಿ ಅವರ ಮನೆಗೆ ಭೇಟಿ ನೀಡಿದ್ದು ಸಿಎಂ ಚಂದ್ರಶೇಖರ್ ರಾವ್ ಅವರು 5 ಕೋಟಿ ಪರಿಹಾರ ಘೋಷಿಸಿದ್ದರು. ಸರ್ಕಾರಿ ಉದ್ಯೋಗ ಮತ್ತು ನಿವೇಶನ ನೀಡುವುದಾಗಿ ಹೇಳಿದ್ದರು. ಅಂದು ಸಿಎಂ ಕೊಟ್ಟ ಮಾತಿನಂತೆ ಈಗ ಎಲ್ಲವೂ ಒದಗಿಸಲಾಗಿದೆ.
ಅಂದ್ಹಾಗೆ, ಜೂನ್ 15 ರಂದು ಲಡಾಖ್ನ ಗಾಲ್ವಾನ್ ಕಣಿವೆ ಪ್ರದೇಶದಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡೆದ ಘರ್ಷಣೆಯಲ್ಲಿ ಕರ್ನಲ್ ಸಂತೋಷ್ ಬಾಬು ಸೇರಿದಂತೆ 20 ಜನ ಯೋಧರು ಹುತಾತ್ಮರಾಗಿದ್ದರು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications