ಹೈದರಾಬಾದ್ ಗ್ಯಾಂಗ್ ರೇಪ್ ಪ್ರಕರಣ: ಎಐಎಂಐಎಂ ಶಾಸಕನ ಪುತ್ರ ಭಾಗಿ
ಹೈದರಾಬಾದ್ ಜೂನ್ 07: ಕಳೆದ ವಾರ ಹೈದರಾಬಾದ್ನ ಜುಬಿಲಿ ಹಿಲ್ಸ್ನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಎಐಎಂಐಎಂ ಶಾಸಕರೊಬ್ಬರ ಪುತ್ರನೂ ಭಾಗಿಯಾಗಿದ್ದಾನೆ ಎಂದು ತೆಲಂಗಾಣ ಪೊಲೀಸರು ಮಂಗಳವಾರ ಬಹಿರಂಗಪಡಿಸಿದ್ದಾರೆ. ಈತ ಅಪ್ರಾಪ್ತ ಎಂದು ಹೇಳಲಾಗುತ್ತಿರುವ ಆರನೇ ಆರೋಪಿಯಾಗಿದ್ದು, ಆತನನ್ನೂ ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣದ ಎಲ್ಲಾ ಆರೋಪಿಗಳು ಈಗ ಪೊಲೀಸರ ವಶದಲ್ಲಿದ್ದಾರೆ.
ಮಂಗಳವಾರದಂದು ಹೈದರಾಬಾದ್ ಪೊಲೀಸ್ ಕಮಿಷನರ್ ಸಿ.ವಿ.ಆನಂದ್ ಈ ಬಗ್ಗೆ ಮಾತನಾಡಿ, ''ಎಲ್ಲಾ 6 ಆರೋಪಿಗಳು ನಮ್ಮ ವಶದಲ್ಲಿದ್ದಾರೆ. ಈ ಪೈಕಿ 5 ಮಂದಿ ಅಪ್ರಾಪ್ತರು'' ಎಂದು ತಿಳಿಸಿದ್ದಾರೆ. ಸಾದುದ್ದೀನ್ ಮಲಿಕ್ ಪ್ರಮುಖ ಆರೋಪಿಯಾಗಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಇವರಲ್ಲಿ 4 ಆರೋಪಿಗಳು ರಾಜಕೀಯ ಕುಟುಂಬಗಳಿಗೆ ಸಂಬಂಧಿಸಿದವರು ಎಂದು ಸಿವಿ ಆನಂದ್ ಹೇಳಿದ್ದಾರೆ. ಸಾಮೂಹಿಕ ಅತ್ಯಾಚಾರ ನಡೆಸಿದ ಕಾರನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೇ 28 ರಂದು, ಹೈದರಾಬಾದ್ನ ಐಷಾರಾಮಿ ಜುಬಿಲಿ ಹಿಲ್ಸ್ ಪ್ರದೇಶದಲ್ಲಿ ಪಾರ್ಟಿಯಿಂದ ಮನೆಗೆ ಹಿಂದಿರುಗುತ್ತಿದ್ದಾಗ 17 ವರ್ಷದ ಹುಡುಗಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಲಾಗಿತ್ತು. ಕಾರಿನೊಳಗೆ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಘಟನೆ ಕುರಿತು ಸಂತ್ರಸ್ತೆಯ ತಂದೆ ಪೊಲೀಸರಿಗೆ ದೂರು ನೀಡಿದ್ದರು. ಈ ಘಟನೆಯ ನಂತರ ಇಡೀ ಹೈದರಾಬಾದ್ನಲ್ಲಿ ಆಕ್ರೋಶದ ಅಲೆ ಎದ್ದಿದೆ. ಸಂತ್ರಸ್ತೆಗೆ ನ್ಯಾಯ ಕೊಡಿಸಲು ಜನರು ಬೀದಿಗಿಳಿದಿದ್ದಾರೆ. ರಾಜಕೀಯ ವಾಗ್ವಾದಗಳು ಶುರುವಾಗಿವೆ.
ತೆಲಂಗಾಣ ರಾಜ್ಯದ ರಾಜಧಾನಿ ಹೈದರಾಬಾದ್ ನಗರದ ಜ್ಯೂಬಿಲಿ ಹಿಲ್ಸ್ನಲ್ಲಿ ನಡೆದ 17 ವರ್ಷ ವಯಸ್ಸಿನ ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ಗುರುತನ್ನು ಬಹಿರಂಗ ಮಾಡಿದ ಆರೋಪದ ಮೇಲೆ ಬಿಜೆಪಿ ಶಾಸಕ ರಘುನಂದನ್ ರಾವ್ ವಿರುದ್ಧ ಹೈದರಾಬಾದ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಭಾರತೀಯ ದಂಡ ಸಂಹಿತೆ 228A ಅಡಿಯಲ್ಲಿ ಶಾಸಕ ರಘುನಂದನ್ ರಾವ್ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಕಾನೂನಿನ ಅನ್ವಯ ಅತ್ಯಾಚಾರಕ್ಕೆ ಗುರಿಯಾದ ಸಂತ್ರಸ್ತೆಯ ಗುರುತನ್ನು ಬಹಿರಂಗ ಮಾಡಬಾರದು. ಆದ್ರೆ ಶಾಸಕ ರಘುನಂದನ್ ರಾವ್ ಅವರು ಅಪ್ರಾಪ್ತ ಸಂತ್ರಸ್ತೆಯ ಫೋಟೋ ಹಾಗೂ ವಿಡಿಯೋವನ್ನು ರಿಲೀಸ್ ಮಾಡಿದ್ದರು ಎಂದು ಆರೋಪಿಸಲಾಗಿದೆ.
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications