ಜಿಇಎಸ್ 2017: ಮೋದಿ ಜತೆ ವೇದಿಕೆ ಹಂಚಿಕೊಳ್ಳಲಿರುವ ಟ್ರಂಪ್ ಪುತ್ರಿ
Recommended Video

ಹೈದರಾಬಾದ್, ನವೆಂಬರ್ 28: ಮುತ್ತಿನ ನಗರಿ ಹೈದರಾಬಾದಿನಲ್ಲಿ ಇಂದು ಜಾಗತಿಕ ಉದ್ಯಮಶೀಲತೆ ಶೃಂಗಸಭೆ (ಜಿಇಎಸ್) ಗೆ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುತ್ರಿ ಮತ್ತು ಸಲಹೆಗಾರ್ತಿ ಇವಾಂಕಾ ಟ್ರಂಪ್ ಮೂರು ದಿನ ಕಾರ್ಯಕ್ರರ್ಮದಲ್ಲಿ ತಮ್ಮ ದೇಶದ ನಿಯೋಗವನ್ನು ಪ್ರತಿನಿಧಿಸಲಿದ್ದಾರೆ.
ಗ್ಯಾಲರಿ : ಮುತ್ತಿನನಗರಿಯಲ್ಲಿ ಟ್ರಂಪ್ ಪುತ್ರಿ ಇವಾಂಕಾ
ಶೃಂಗಸಭೆಯ ಆತಿಥ್ಯ ವಹಿಸಿರುವ ಹೈದರಾಬಾದಿನಲ್ಲಿ ಪೊಲೀಸರ ಸರ್ಪಗಾವಲು ಹಾಕಲಾಗಿದೆ. 18 ಸಾವಿರಕ್ಕೂ ಅಧಿಕ ಭದ್ರತಾ ಸಿಬ್ಬಂದಿಗಳು ಸುರಕ್ಷತೆ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ವಿವಿಧ ದೇಶಗಳ ಉದ್ಯಮಿಗಳು, ವಿವಿಧ ಕ್ಷೇತ್ರಗಳ ಖ್ಯಾತನಾಮರು ಈ ಸಮಾವೇಶದಲ್ಲಿ ಭಾಗವಹಿಸುತ್ತಿದ್ದಾರೆ.

127ಕ್ಕೂ ಅಧಿಕ ದೇಶಗಳಿಂದ 1200 ಯುವ ಉದ್ಯಮಿಗಳು ಈ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮ ಸುಗಮವಾಗಿ ನೆರವೇರಲು ಅಗತ್ಯವಾದ ಎಲ್ಲ ಕ್ರಮಗಳನ್ನು ತೆಲಂಗಾಣ ಸರ್ಕಾರ ಕೈಗೊಂಡಿದೆ.
ಇಂಧನ, ಮೂಲಸೌಕರ್ಯಾಭಿವೃದ್ದಿ, ಆರೋಗ್ಯ ಆರೈಕೆ, ಜೀವ ವಿಜ್ಞಾನ, ಆರ್ಥಿಕ ತಂತ್ರಜ್ಞಾನ, ಡಿಜಿಟಲ್ ಆರ್ಥಿಕತೆ ಹಾಗೂ ಮಾಧ್ಯಮ ಮತ್ತು ಮನರಂಜನೆ ವಲಯಗಳ ಮೇಲೆ ಕೇಂದ್ರೀಕೃತವಾಗಿರುವ ಈ ಸಮಾವೇಶದಲ್ಲಿ ಹಲವು ಮಹತ್ವದ ಒಡಂಬಡಿಕೆಗಳಿಗೆ ಸಹಿ ಹಾಕುವ ನಿರೀಕ್ಷೆ ಇದೆ.

ಇವಾಂಕಾ ಟ್ರಂಪ್ ಅವರಿಗೆ ಭರ್ಜರಿ ಆತಿಥ್ಯ ನೀಡಲು ಸರ್ಕಾರ ಸಿದ್ಧವಾಗಿದೆ. ಪ್ರಧಾನಿ ಮೋದಿ ಅವರು ಫಲಕ್ನಾಮ ಪ್ಯಾಲೇಸ್ ನಲ್ಲಿ ಅತಿದೊಡ್ಡ ಔತಣಕೂಟ ಏರ್ಪಡಿಸಿದ್ದಾರೆ. ಈ ನಡುವೆ ಮೋದಿ ಅವರು ಇಂದು ಮಧ್ಯಾಹ್ನ ಹೈದರಾಬಾದ್ ಮೆಟ್ರೋ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ. ಇವಾಂಕಾ ಅವರು ಪತಿ ಜತೆಗೆ ಚಾರ್ಮಿನಾರ್ ಗೆ ಭೇಟಿ ನೀಡಲಿದ್ದಾರೆ.
-
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
Rashmika Mandanna: ಪುಟ್ಟ ಅಭಿಮಾನಿಗೆ ಮನೆಯಲ್ಲೇ ಭರ್ಜರಿ ಔತಣ: ಕೊಟ್ಟ ಮಾತಿನಂತೆ ನಡೆದುಕೊಂಡ ರಶ್ಮಿಕಾ-ವಿಜಯ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply












Click it and Unblock the Notifications