ಜಿಎಚ್ಎಂಸಿ ಚುನಾವಣೆ; ಮತದಾನ ಪ್ರಮಾಣದ ಮೇಲೆ ಅನುಮಾನ!
ಹೈದರಾಬಾದ್, ಡಿಸೆಂಬರ್ 04: ಗ್ರೇಟರ್ ಹೈದರಾಬಾದ್ ಮಹಾನಗರ ಪಾಲಿಕೆ (ಜಿಎಚ್ಎಂಸಿ) ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. 150 ಸ್ಥಾನಗಳಿಗೆ ಮಂಗಳವಾರ ನಡೆದ ಚುನಾವಣೆಯಲ್ಲಿ ಶೇ 46.55ರಷ್ಟು ಮತದಾನವಾಗಿತ್ತು. ಆದರೆ, ಮತದಾನದ ಪ್ರಮಾಣದ ಬಗ್ಗೆಯೇ ಅನುಮಾನ ವ್ಯಕ್ತಪಡಿಸಲಾಗಿದೆ.
ಜಿಎಚ್ಎಂಸಿ ಚುನಾವಣೆಯ ಮತ ಎಣಿಕೆ ಶುಕ್ರವಾರ ನಡೆಯುತ್ತಿದೆ. 150 ವಾರ್ಡ್ಗಳಿಗೆ ನಡೆದ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ ಮಾಡಲಾಗಿತ್ತು. ಆದ್ದರಿಂದ, ಚುನಾವಣಾ ಫಲಿತಾಂಶದ ಘೋಷಣೆ ಸಂಜೆ ಆಗಬಹುದು ಎಂದು ನಿರೀಕ್ಷೆ ಮಾಡಲಾಗಿದೆ.
ಮಂಗಳವಾರ ಜಿಎಚ್ಎಂಸಿ ಚುನಾವಣೆ ಮತದಾನ ನಡೆದಿತ್ತು. ಬುಧವಾರ ರಾಜ್ಯ ಚುನಾವಣಾ ಆಯೋಗ ಶೇ 46.55ರಷ್ಟು ಮತದಾನ ನಡೆದಿದೆ ಎಂದು ಘೋಷಣೆ ಮಾಡಿತ್ತು. 2007ರಲ್ಲಿ ಜಿಎಚ್ಎಂಸಿ ರಚನೆಯಾದ ಬಳಿಕ ನಡೆದ ಅತ್ಯಧಿಕ ಪ್ರಮಾಣದ ಮತದಾನವಿದಾಗಿದೆ.
ಬಿಜೆಪಿ ಮತ್ತು ಕಾಂಗ್ರೆಸ್ ಮತದಾನದ ಪ್ರಮಾಣದ ಬಗ್ಗೆ ಅನುಮಾನ ವ್ಯಕ್ತಪಡಿಸಿವೆ. ಸಂಜೆ 5 ಗಂಟೆ ಬಳಿಕ ಮತಗಟ್ಟೆ ಮುಂದೆ ಹೆಚ್ಚು ಜನರು ಇರಲಿಲ್ಲ. ವೃದ್ಧರು, ಕೋವಿಡ್ ಸೋಂಕಿತರಿಗೆ ಮತದಾನ ಮಾಡಲು ಅವಕಾಶ ನೀಡಲಾಗಿತ್ತು. ಆದರೆ, ಮತದಾನದ ಪ್ರಮಾಣ ಒಂದು ಗಂಟೆಯಲ್ಲಿ ಹೆಚ್ಚಾದ ಬಗ್ಗೆ ಅನುಮಾನವಿದೆ.

ಒಂದೇ ಗಂಟೆಯಲ್ಲಿ ಅತ್ಯಧಿಕ ಮತದಾನ
ಜಿಎಚ್ಎಂಸಿ ಚುನಾವಣೆಯಲ್ಲಿ ಸಂಜೆ 5 ಗಂಟೆಯ ತನಕ ಶೇ 37ರಷ್ಟು ಮತದಾನವಾಗಿತ್ತು. ಸಂಜೆ 6 ಗಂಟೆಯ ತನಕ ಮತದಾನ ಮಾಡಲು ಅವಕಾಶವಿತ್ತು. ಕೊನೆಯ ಒಂದು ಗಂಟೆಯಲ್ಲಿ ಹೆಚ್ಚು ಮತದಾನವಾಗಿದ್ದು, ಅಂತಿಮವಾಗಿ ಶೇ 46.55ರಷ್ಟು ಮತದಾನ ನಡೆದಿದೆ. ಕೊನೆಯ ಒಂದು ಗಂಟೆಯಲ್ಲಿ ಅತ್ಯಧಿಕ ಮತದಾನವಾದ ಬಗ್ಗೆ ಅನುಮಾನ ವ್ಯಕ್ತಪಡಿಸಲಾಗುತ್ತಿದೆ.

ತಳ್ಳಿಹಾಕಿದ ಟಿಆರ್ಎಸ್
ಬಿಜೆಪಿ ಮತ್ತು ಕಾಂಗ್ರೆಸ್ ಮತದಾನದ ಪ್ರಮಾಣದ ಬಗ್ಗೆ ಎತ್ತಿದ ಪ್ರಶ್ನೆಯನ್ನು ಟಿಆರ್ಎಸ್ ತಳ್ಳಿ ಹಾಕಿದೆ. 5 ಗಂಟೆಯ ತನಕ ಶೇ 37ರಷ್ಟು ಮತದಾನ ನಡೆದಿದೆ ಅಧಿಕಾರಿಗಳು ಹೇಳಿದ್ದಾರೆ. ಪಕ್ಷಗಳು ಅದನ್ನು ನಂಬುತ್ತವೆ ಎಂದಾದರೆ ಶೇ 46.55ರಷ್ಟು ಮತದಾನವಾಗಿದ್ದನ್ನು ನಂಬಲೇಬೇಕು ಎಂದು ಹೇಳಿದೆ.

ಮತದಾನದ ಪ್ರಮಾಣದ ವಿವರ
ಇದುವರೆಗೂ ನಡೆದ ಜಿಎಚ್ಎಂಸಿ ಚುನಾವಣೆಯಲ್ಲಿ ಶೇ 46.55ರಷ್ಟು ಮತದಾನವೇ ಅಧಿಕ ಎಂದು ಚುನಾವಣಾ ಆಯೋಗವೇ ಹೇಳಿದೆ. 2016ರಲ್ಲಿ ಶೇ 45.29, 2009ರಲ್ಲಿ ಶೇ 42.04ರಷ್ಟು ಮತದಾನವಾಗಿತ್ತು. ಹಿಂದಿನ ಚುನಾವಣೆಯಲ್ಲಿ ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಬಳಕೆ ಮಾಡಲಾಗಿತ್ತು. ಈ ಬಾರಿ ಬ್ಯಾಲೆಟ್ ಮೂಲಕ ಚುನಾವಣೆ ನಡೆದಿದೆ.

ಅಕ್ರಮ ನಡೆಯುವ ಸಾಧ್ಯತೆ ಕಡಿಮೆ
ಪ್ರತಿ ಮತಗಟ್ಟೆಯಲ್ಲಿ ಕ್ಯಾಮರಾ ಇತ್ತು. ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಇದ್ದರು. ಪೊಲೀಸರು ಸೇರಿದಂತೆ ಭದ್ರತಾ ಸಿಬ್ಬಂದಿ ಇದ್ದರು. ಮತದಾನದ ಪ್ರಮಾಣ ಹೆಚ್ಚು ಮಾಡಲು ಅಕ್ರಮ ನಡೆದಿರುವ ಸಾಧ್ಯತೆ ಕಡಿಮೆ ಇದೆ ಎಂದು ಹಲವು ರಾಜಕೀಯ ಪಕ್ಷಗಳು ಹೇಳಿವೆ.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ












Click it and Unblock the Notifications