ಜಿಎಚ್ಎಂಸಿ ಚುನಾವಣೆ; ಪ್ರಚಾರ ಮಾಡಿದವರು ಐಸೋಲೇಷನ್ಗೆ!
ಹೈದರಾಬಾದ್, ಡಿಸೆಂಬರ್ 04 : ಗ್ರೇಟರ್ ಹೈದರಾಬಾದ್ ಮಹಾನಗರ ಪಾಲಿಕೆ (ಜಿಎಚ್ಎಂಸಿ) ಚುನಾವಣೆಯ ಪ್ರಚಾರದಲ್ಲಿ ತೊಡಗಿದ್ದ ನಾಯಕರು, ಕಾರ್ಯಕರ್ತರು ಒಂದು ವಾರಗಳ ಕಾಲ ಐಸೋಲೇಷನ್ನಲ್ಲಿ ಇರುವಂತೆ ಆರೋಗ್ಯ ಇಲಾಖೆ ಸಲಹೆ ನೀಡಿದೆ.
ಜಿಎಚ್ಎಂಸಿಯ 150 ವಾರ್ಡ್ಗಳಿಗೆ ನಡೆದ ಚುನಾವಣೆಯ ಮತ ಎಣಿಕೆಯು ಶುಕ್ರವಾರ ನಡೆಯುತ್ತಿದೆ. ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿದವರು ಐಸೋಲೇಷನ್ನಲ್ಲಿ ಇರುವಂತೆ ಸಲಹೆ ನೀಡಲಾಗಿದೆ.
ಆರೋಗ್ಯ ಇಲಾಖೆಯ ನಿರ್ದೇಶಕ ಡಾ. ಶ್ರೀನಿವಾಸ ರಾವ್, "ಪಕ್ಷಗಳ ನಾಯಕರು, ಕಾರ್ಯಕರ್ತರು ಒಂದು ವಾರಗಳ ಕಾಲ ಐಸೋಲೇಷನ್ನಲ್ಲಿ ಇರಬೇಕು. ಕೋವಿಡ್ ಲಕ್ಷಣಗಳು ಕಂಡುಬಂದರೆ ತಕ್ಷಣ ಪರೀಕ್ಷೆ ಮಾಡಿಸಿಕೊಳ್ಳಬೇಕು" ಎಂದು ಹೇಳಿದ್ದಾರೆ.

ಡಿಸೆಂಬರ್ 3ರಂದು ತೆಲಂಗಾಣ ರಾಜ್ಯದಲ್ಲಿ 631 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ, ಇಬ್ಬರು ಮೃತಪಟ್ಟಿದ್ದಾರೆ. ಮಾರ್ಚ್ 2ರ ಬಳಿಕ ರಾಜ್ಯದಲ್ಲಿ 272,123 ಹೊಸ ಪ್ರಕರಣಗಳು ರಾಜ್ಯದಲ್ಲಿ ಪತ್ತೆಯಾಗಿವೆ. ರಾಜ್ಯದಲ್ಲಿ ಗುಣಮುಖಗೊಳ್ಳುವವರ ಪ್ರಮಾಣ ಶೇ 96.21ರಷ್ಟಿದೆ.
ತೆಲಂಗಾಣ ರಾಜ್ಯದಲ್ಲಿ 8,826 ಸಕ್ರಿಯ ಪ್ರಕರಣಗಳಿವೆ. 6,817 ಜನರು ಮನೆಯಲ್ಲಿಯೇ ಐಸೋಲೇಷನ್ನಲ್ಲಿದ್ದಾರೆ. ಜಿಎಚ್ಎಂಸಿ ಚುನಾವಣೆ ಪ್ರಚಾರಕ್ಕಾಗಿ ಸಾವಿರಾರು ಜನರು ಸೇರಿದ್ದರು. ಆದ್ದರಿಂದ, ರಾಜ್ಯದಲ್ಲಿ 2ನೇ ಹಂತದ ಕೋವಿಡ್ ಅಲೆ ಆರಂಭವಾಗಲಿದೆ ಎಂಬ ಆತಂಕ ಉಂಟಾಗಿದೆ.
ಉಷ್ಣಾಂಶದಲ್ಲಿನ ಕುಸಿತ, ಸಾವಿರಾರು ಜನರು ಗುಂಪು ಗೂಡಿದ್ದು, ಹಬ್ಬಗಳು, ಮದುವೆ ಸಮಾರಂಭಗಳಿಂದಾಗಿ ರಾಜ್ಯದಲ್ಲಿ ಹೊಸ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗಬಹುದು ಎಂದು ಅಂದಾಜಿಸಲಾಗಿದೆ. ಆದ್ದರಿಂದ, ಚುನಾವಣೆ ಪ್ರಚಾರದಲ್ಲಿ ಇದ್ದವರಿಗೆ ಐಸೋಲೇಷನ್ಗೆ ಸಲಹೆ ಕೊಡಲಾಗಿದೆ.
ಜಿಎಚ್ಎಂಸಿ ಚುನಾವಣೆಯ ಪ್ರಚಾರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ, ಹಲವಾರು ಸಂಸದರು ಆಗಮಿಸಿದ್ದರು.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications