GHMC: ಬಿಜೆಪಿ ಪ್ರಣಾಳಿಕೆಯಲ್ಲಿ ಕೊರೊನಾ ಲಸಿಕೆ, ಚಿಕಿತ್ಸೆ
ಹೈದರಾಬಾದ್, ನ. 26: ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಗಾಗಿ ಆಡಳಿತಾರೂಢ ತೆಲಂಗಾಣ ರಾಷ್ಟ್ರಸಮಿತಿ, ಕಾಂಗ್ರೆಸ್ ನಂತರ ಭಾರತೀಯ ಜನತಾ ಪಕ್ಷ ತನ್ನ ಪ್ರಣಾಳಿಕೆಯನ್ನು ಇಂದು ಬಿಡುಗಡೆ ಮಾಡಿದೆ.
150 ಸದಸ್ಯರ ಆಯ್ಕೆಗಾಗಿ ಡಿಸೆಂಬರ್ 01ರಂದು ಬೆಳಗ್ಗೆ 7 ರಿಂದ ಸಂಜೆ 6 ತನಕ ಮತದಾನದ ನಡೆಯಲಿದೆ. ಡಿಸೆಂಬರ್ 4ರಂದು ಮತ ಎಣಿಕೆ ನಡೆಯಲಿದೆ.
ಹಾಲಿ ಪಾಲಿಕೆ ಅವಧಿ ಫೆಬ್ರವರಿ 10, 2021ರಂದು ಕೊನೆಗೊಳ್ಳಲಿದೆ. ಸಾಮಾನ್ಯ ವರ್ಗದ ಮಹಿಳೆಗೆ ಈ ಬಾರಿ ಮೇಯರ್ ಸ್ಥಾನ ಮೀಸಲಾಗಿದೆ. 2016ರಲ್ಲಿ ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್ ಎಸ್) ಪಕ್ಷ 150ರಲ್ಲಿ 99 ಸ್ಥಾನಗಳಿಸಿ ಆಡಳಿತ ವಹಿಸಿಕೊಂಡಿತ್ತು. ಗ್ರೇಟರ್ ಹೈದರಾಬಾದ್ ಮುನ್ಸಿಪಾಲ್ ಕಾರ್ಪೊರೇಷನ್ (GHMC) ವ್ಯಾಪ್ತಿಯಲ್ಲಿ 20 ವಿಧಾನಸಭಾ ಕ್ಷೇತ್ರಗಳು ಬರಲಿದ್ದು, 74 ಲಕ್ಷ ಮತದಾರರಿದ್ದಾರೆ.

ಬಿಜೆಪಿ ಪ್ರಣಾಳಿಕೆ ಮುಖ್ಯಾಂಶಗಳು:
ಕೇಂದ್ರ ಸರ್ಕಾರದ ನಿರ್ದೇಶನದಂತೆ ಕೊರೊನಾ ಲಸಿಕೆ ಹಾಗೂ ಕೊರೊನಾ ಪರೀಕ್ಷೆ ಎಲ್ಲರಿಗೂ ಒದಗಿಸಲಾಗುವುದು.
* ಪ್ರಧಾನ ಮಂತ್ರಿ ಆವಾಸ್ ಯೋಜನಾ (PMAY) ಅಡಿಯಲ್ಲಿ ಬಡವರಿಗೆ 1 ಲಕ್ಷ ಮನೆಗಳನ್ನು ಗ್ರೇಟರ್ ಹೈದರಾಬಾದ್ ಭಾಗದಲ್ಲಿ ನಿರ್ಮಿಸಿ ಕೊಡಲಾಗುವುದು.
* ಮಹಿಳೆಯರಿಗೆ ಮೆಟ್ರೋ ಹಾಗೂ ನಗರ ಸಾರಿಗೆಗಳಲ್ಲಿ ಉಚಿತ ಪ್ರಯಾಣ.
* ಆನ್ ಲೈನ್ ಶಿಕ್ಷಣಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಬಡ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ನೀಡಲಾಗುವುದು, ಸೂಕ್ತವಾದ ವೈಫೈ ಒದಗಿಸಲಾಗುವುದು.
* ಸ್ಲಂ ಹಾಗೂ ಎಸ್ ಸಿ ಕಾಲೋನಿಗಳಲ್ಲಿನ ಆಸ್ತಿ ತೆರಿಗೆ ರದ್ದುಗೊಳಿಸಲಾಗುವುದು.
* ಜನಸಂಖ್ಯೆಗೆ ಅನುಗುಣವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಗ್ರೇಟರ್ ಹೈದರಾಬಾದ್ ಪ್ರದೇಶದಲ್ಲಿ ಸ್ಥಾಪಿಸಲಾಗುವುದು.
* ತೆರೆದ ಚರಂಡಿ ಹಾಗೂ ಕೊಳಚೆ ನೀರು ನಿರ್ವಹಣೆಗಾಗಿ 1000 ಕೋಟಿ ಮೀಸಲು. ಸುಮೇಧ ಕಾಯ್ದೆ ಯಡಿಯಲ್ಲಿ ಭೂಕಬಳಕೆಯನ್ನು ನಿರ್ಮೂಲನೆ ಮಾಡಲಾಗುವುದು.
* ಗ್ರೇಟರ್ ಹೈದರಾಬಾದ್ ಪ್ರದೇಶದಲ್ಲಿ ಪ್ರವಾಹ ಪೀಡಿತರಿಗೆ 25,000 ರು ನೀಡಲಾಗುತ್ತದೆ.
* ತಿಂಗಳಿಗೆ 100 ಯೂನಿಟ್ ಗಿಂತ ಕಡಿಮೆ ವಿದ್ಯುತ್ ಬಳಸುತ್ತಿರುವವರಿಗೆ ಉಚಿತ ವಿದ್ಯುತ್ ಪೂರೈಕೆ.
* 125 ಚದರಡಿಯಲ್ಲಿ ನಿರ್ಮಾಣವಾದ ಮನೆಗಳಿಗೆ ಶುಲ್ಕಗಳಿರುವುದಿಲ್ಲ.
* ಎಲ್ಲಾ ಮನೆಗಳಿಗೂ ನಲ್ಲಿ ಅಳವಡಿಕೆ, ಉಚಿತ ಕುಡಿಯುವ ನೀರು ಪೂರೈಕೆ
* ಮೂಸಿ ನದಿ ಪುನರುತ್ಥಾನ, ಅಭಿವೃದ್ಧಿಗೆ ಯೋಜನೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications