GHMC: ಬಿಜೆಪಿ ಪ್ರಣಾಳಿಕೆಯಲ್ಲಿ ಕೊರೊನಾ ಲಸಿಕೆ, ಚಿಕಿತ್ಸೆ
ಹೈದರಾಬಾದ್, ನ. 26: ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಗಾಗಿ ಆಡಳಿತಾರೂಢ ತೆಲಂಗಾಣ ರಾಷ್ಟ್ರಸಮಿತಿ, ಕಾಂಗ್ರೆಸ್ ನಂತರ ಭಾರತೀಯ ಜನತಾ ಪಕ್ಷ ತನ್ನ ಪ್ರಣಾಳಿಕೆಯನ್ನು ಇಂದು ಬಿಡುಗಡೆ ಮಾಡಿದೆ.
150 ಸದಸ್ಯರ ಆಯ್ಕೆಗಾಗಿ ಡಿಸೆಂಬರ್ 01ರಂದು ಬೆಳಗ್ಗೆ 7 ರಿಂದ ಸಂಜೆ 6 ತನಕ ಮತದಾನದ ನಡೆಯಲಿದೆ. ಡಿಸೆಂಬರ್ 4ರಂದು ಮತ ಎಣಿಕೆ ನಡೆಯಲಿದೆ.
ಹಾಲಿ ಪಾಲಿಕೆ ಅವಧಿ ಫೆಬ್ರವರಿ 10, 2021ರಂದು ಕೊನೆಗೊಳ್ಳಲಿದೆ. ಸಾಮಾನ್ಯ ವರ್ಗದ ಮಹಿಳೆಗೆ ಈ ಬಾರಿ ಮೇಯರ್ ಸ್ಥಾನ ಮೀಸಲಾಗಿದೆ. 2016ರಲ್ಲಿ ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್ ಎಸ್) ಪಕ್ಷ 150ರಲ್ಲಿ 99 ಸ್ಥಾನಗಳಿಸಿ ಆಡಳಿತ ವಹಿಸಿಕೊಂಡಿತ್ತು. ಗ್ರೇಟರ್ ಹೈದರಾಬಾದ್ ಮುನ್ಸಿಪಾಲ್ ಕಾರ್ಪೊರೇಷನ್ (GHMC) ವ್ಯಾಪ್ತಿಯಲ್ಲಿ 20 ವಿಧಾನಸಭಾ ಕ್ಷೇತ್ರಗಳು ಬರಲಿದ್ದು, 74 ಲಕ್ಷ ಮತದಾರರಿದ್ದಾರೆ.

ಬಿಜೆಪಿ ಪ್ರಣಾಳಿಕೆ ಮುಖ್ಯಾಂಶಗಳು:
ಕೇಂದ್ರ ಸರ್ಕಾರದ ನಿರ್ದೇಶನದಂತೆ ಕೊರೊನಾ ಲಸಿಕೆ ಹಾಗೂ ಕೊರೊನಾ ಪರೀಕ್ಷೆ ಎಲ್ಲರಿಗೂ ಒದಗಿಸಲಾಗುವುದು.
* ಪ್ರಧಾನ ಮಂತ್ರಿ ಆವಾಸ್ ಯೋಜನಾ (PMAY) ಅಡಿಯಲ್ಲಿ ಬಡವರಿಗೆ 1 ಲಕ್ಷ ಮನೆಗಳನ್ನು ಗ್ರೇಟರ್ ಹೈದರಾಬಾದ್ ಭಾಗದಲ್ಲಿ ನಿರ್ಮಿಸಿ ಕೊಡಲಾಗುವುದು.
* ಮಹಿಳೆಯರಿಗೆ ಮೆಟ್ರೋ ಹಾಗೂ ನಗರ ಸಾರಿಗೆಗಳಲ್ಲಿ ಉಚಿತ ಪ್ರಯಾಣ.
* ಆನ್ ಲೈನ್ ಶಿಕ್ಷಣಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಬಡ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ನೀಡಲಾಗುವುದು, ಸೂಕ್ತವಾದ ವೈಫೈ ಒದಗಿಸಲಾಗುವುದು.
* ಸ್ಲಂ ಹಾಗೂ ಎಸ್ ಸಿ ಕಾಲೋನಿಗಳಲ್ಲಿನ ಆಸ್ತಿ ತೆರಿಗೆ ರದ್ದುಗೊಳಿಸಲಾಗುವುದು.
* ಜನಸಂಖ್ಯೆಗೆ ಅನುಗುಣವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಗ್ರೇಟರ್ ಹೈದರಾಬಾದ್ ಪ್ರದೇಶದಲ್ಲಿ ಸ್ಥಾಪಿಸಲಾಗುವುದು.
* ತೆರೆದ ಚರಂಡಿ ಹಾಗೂ ಕೊಳಚೆ ನೀರು ನಿರ್ವಹಣೆಗಾಗಿ 1000 ಕೋಟಿ ಮೀಸಲು. ಸುಮೇಧ ಕಾಯ್ದೆ ಯಡಿಯಲ್ಲಿ ಭೂಕಬಳಕೆಯನ್ನು ನಿರ್ಮೂಲನೆ ಮಾಡಲಾಗುವುದು.
* ಗ್ರೇಟರ್ ಹೈದರಾಬಾದ್ ಪ್ರದೇಶದಲ್ಲಿ ಪ್ರವಾಹ ಪೀಡಿತರಿಗೆ 25,000 ರು ನೀಡಲಾಗುತ್ತದೆ.
* ತಿಂಗಳಿಗೆ 100 ಯೂನಿಟ್ ಗಿಂತ ಕಡಿಮೆ ವಿದ್ಯುತ್ ಬಳಸುತ್ತಿರುವವರಿಗೆ ಉಚಿತ ವಿದ್ಯುತ್ ಪೂರೈಕೆ.
* 125 ಚದರಡಿಯಲ್ಲಿ ನಿರ್ಮಾಣವಾದ ಮನೆಗಳಿಗೆ ಶುಲ್ಕಗಳಿರುವುದಿಲ್ಲ.
* ಎಲ್ಲಾ ಮನೆಗಳಿಗೂ ನಲ್ಲಿ ಅಳವಡಿಕೆ, ಉಚಿತ ಕುಡಿಯುವ ನೀರು ಪೂರೈಕೆ
* ಮೂಸಿ ನದಿ ಪುನರುತ್ಥಾನ, ಅಭಿವೃದ್ಧಿಗೆ ಯೋಜನೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ












Click it and Unblock the Notifications