ಇಡೀ ದಕ್ಷಿಣ ಭಾರತ ಕೇಸರೀಕರಣವಾಗಲಿದೆ: ತೇಜಸ್ವಿ ಸೂರ್ಯ
ಹೈದರಾಬಾದ್, ನವೆಂಬರ್ 24: ಮುಂದಿನ ತಿಂಗಳು ನಡೆಯಲಿರುವ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆಯು ಮುಂಬರುವ ತೆಲಂಗಾಣ ವಿಧಾನಸಭೆ ಚುನಾವಣೆಗೆ ಮೆಟ್ಟಿಲಾಗಲಿದೆ ಎಂದು ಬಿಜೆಪಿ ಸಂಸದ ಮತ್ತು ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಹೇಳಿದ್ದಾರೆ.
'ನಾವು ಈ ಚುನಾವಣೆಯಲ್ಲಿ ಗೆಲ್ಲಲಿದ್ದೇವೆ. ನಾವು ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲಿದ್ದೇವೆ. ನಾವು ತಮಿಳುನಾಡಿನಲ್ಲಿಯೂ ಗೆಲ್ಲಲಿದ್ದೇವೆ. ನಾವು ಕೇರಳವನ್ನು ಸಹ ಜಯಿಸಲಿದ್ದೇವೆ. ಇಡೀ ದಕ್ಷಿಣ ಭಾರತ ಕೇಸರೀಕರಣಗೊಳ್ಳಲಿದೆ' ಎಂದಿದ್ದಾರೆ.
ಗ್ರೇಟರ್ ಹೈದರಾಬಾದ್ ಮುನಿಸಿಪಲ್ ಕಾರ್ಪೊರೇಷನ್ ಚುನಾವಣೆಗೂ (ಜಿಎಚ್ಎಂಸಿ) ಮುನ್ನ ಹೈದರಾಬಾದ್ಗೆ ಭೇಟಿ ನೀಡಿರುವ ತೇಜಸ್ವಿ ಸೂರ್ಯ, ಅಲ್ಲಿನ ಕನ್ನಡ ಸಂಘದಲ್ಲಿ ಮಾತನಾಡಿದರು. ಆಂಧ್ರಪ್ರದೇಶ, ಕರ್ನಾಟಕ ಮತ್ತು ತೆಲಂಗಾಣ ರಾಜ್ಯಗಳ ಜನರ ನಡುವೆ ಸಾಂಸ್ಕೃತಿಕ ಬಾಂಧವ್ಯ ಇದೆ ಎಂದು ಹೇಳಿದ್ದಾರೆ.
ಡಿಸೆಂಬರ್ 1ರಂದು ಗ್ರೇಟರ್ ಹೈದರಾಬಾದ್ ಮುನಿಸಿಪಲ್ ಕಾರ್ಪೊರೇಷನ್ಗೆ ಚುನಾವಣೆ ನಡೆಯಲಿದೆ. ಡಿಸೆಂಬರ್ 4ರ ಮತ ಎಣಿಕೆ ಬಳಿಕ ಫಲಿತಾಂಶ ಪ್ರಕಟವಾಗಲಿದೆ. ಮುಂದೆ ಓದಿ.

ಸಾಂಸ್ಕೃತಿಕ, ಭಾಷೆ ಬಾಂಧವ್ಯ
'ಆಂಧ್ರಪ್ರದೇಶ, ತೆಲಂಗಾಣ ಮತ್ತು ಕರ್ನಾಟಕ ರಾಜ್ಯಗಳ ಜನರ ಮಧ್ಯೆ ಸಾಂಸ್ಕೃತಿಕ ಬಾಂಧವ್ಯ ಇದೆ. ನಮ್ಮ ಭಾಷೆ ಕನ್ನಡ ಮತ್ತು ತೆಲುಗು ಒಂದೇ ರೀತಿಯ ವ್ಯಾಕರಣಗಳನ್ನು ಹೊಂದಿದೆ. ಈ ರಾಜ್ಯಗಳ ಜನರು ಒಂದು ಗುಂಪಾಗಿ ದೇಶದ ಸೇವೆ ಮಾಡುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಭಾವಿಸಿದ್ದೇನೆ' ಎಂದಿದ್ದಾರೆ.

ಬಿಜೆಪಿ ಮಾತ್ರ ಪರ್ಯಾಯ
'ಬಿಜೆಪಿಗೆ ಮತ ಹಾಕುವುದು ಎಂದರೆ ವಿಚಾರವೊಂದಕ್ಕೆ ಮತ ಹಾಕಿದಂತೆ. ಪ್ರಜಾಪ್ರಭುತ್ವ ಎನ್ನುವುದು ಜನರ ವ್ಯವಸ್ಥೆ, ಜನರಿಂದ ಜನರಿಗಾಗಿ ಇರುವುದು. ತೆಲಂಗಾಣದಲ್ಲಿ ಅದರ ವ್ಯಾಖ್ಯಾನ ಬದಲಾಗಿದೆ. ಇಲ್ಲಿ ಕುಟುಂಬವು, ಕುಟುಂಬದಿಂದ ಮತ್ತು ಕುಟುಂಬಕ್ಕೋಸ್ಕರ ಇರುವುದು ಪ್ರಜಾಪ್ರಭುತ್ವ. ಇಲ್ಲಿ ಬಿಜೆಪಿ ಮಾತ್ರವೇ ಪರ್ಯಾಯವನ್ನು ನೀಡಬಲ್ಲದು' ಎಂದು ಹೇಳಿದ್ದಾರೆ.

ತೇಜಸ್ವಿ ವಿರುದ್ಧ ಟೀಕಾಪ್ರಹಾರ
ಸೋಮವಾರ ಹೈದರಾಬಾದ್ಗೆ ಭೇಟಿ ನೀಡುವ ಮುನ್ನ ತೇಜಸ್ವಿ ಸೂರ್ಯ, ಹೈದರಾಬಾದ್ ಹೆಸರನ್ನು ಭಾಗ್ಯ ನಗರ ಎಂದು ಕರೆದಿದ್ದು ಜನರ ಆಕ್ರೋಶಕ್ಕೆ ಕಾರಣವಾಗಿತ್ತು. ಸಾಮಾಜಿಕ ಜಾಲತಾಣದಲ್ಲಿ ತೇಜಸ್ವಿ ಸೂರ್ಯ ವಿರುದ್ಧ ಅಶ್ಲೀಲ ನಿಂದನೆಯು ಟ್ರೆಂಡ್ ಆಗಿತ್ತು. ಈ ಸಂದರ್ಭದಲ್ಲಿ ಟಿಆರ್ಎಸ್ ಮುಖ್ಯಸ್ಥ ಚಂದ್ರಶೇಖರ್ ರಾವ್ ಮತ್ತು ಅಸಾದುದ್ದೀನ್ ಓವೈಸಿ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಓವೈಸಿ, ಜಿನ್ನಾ ಅವತಾರ
ಓವೈಸಿ ಯಾವಾಗಲೂ ಪ್ರತ್ಯೇಕವಾದ ಮತ್ತು ಉಗ್ರವಾದದ ಭಾಷೆಯನ್ನು ಮಾತನಾಡುತ್ತಾರೆ. 'ಅಕ್ಬರುದ್ದೀನ್ ಮತ್ತು ಅಸಾದುದ್ದೀನ್ ಓವೈಸಿ ಅಭಿವೃದ್ಧಿಯ ಬಗ್ಗೆ ಮಾತನಾಡುವುದೇ ಹಾಸ್ಯಾಸ್ಪದ. ಅವರು ಹಳೆಯ ಹೈದರಾಬಾದ್ನಲ್ಲಿ ಅಭಿವೃದ್ಧಿಗೆ ಅವಕಾಶ ನೀಡಲಿಲ್ಲ. ಆದರೆ ಅವರು ರೊಹಿಂಗ್ಯಾ ಮುಸ್ಲಿಮರಿಗೆ ಮಾತ್ರ ಅವಕಾಶ ನೀಡಿದರು. ಓವೈಸಿ ಜಿನ್ನಾರ ಅವತಾರದಂತೆ. ಓವೈಸಿಗೆ ಹಾಕುವ ಪ್ರತಿ ಒಂದು ಮತವೂ ಭಾರತದ ವಿರುದ್ಧ ಮತ್ತು ಭಾರತದ ಪ್ರತಿ ನಿಲುವಿನ ವಿರುದ್ಧದ ಮತ' ಎಂದು ತೇಜಸ್ವಿ ಟೀಕಿಸಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications