GHMC Polls: ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಬಿಜೆಪಿ
ಹೈದರಾಬಾದ್, ಡಿಸೆಂಬರ್ 24: ಗ್ರೇಟರ್ ಹೈದರಾಬಾದ್ ಮಹಾನಗರ ಪಾಲಿಕೆ (ಜಿಎಚ್ಎಂಸಿ) ಚುನಾವಣೆಯಲ್ಲಿ ಆರಂಭದಲ್ಲಿ ಮುನ್ನಡೆ ಸಾಧಿಸಿ ಅಚ್ಚರಿ ಮೂಡಿಸಿದ್ದ ಬಿಜೆಪಿ, ಆಡಳಿತಾರೂಢ ಟಿಆರ್ಎಸ್ ಎದುರು ಮತ್ತೆ ಮಂಡಿಯೂರಿಗೆ. ಮಹಾನಗರ ಪಾಲಿಕೆಯಲ್ಲಿ ಮತ್ತೆ ಅಧಿಕಾರ ಹಿಡಿಯುವತ್ತ ಟಿಆರ್ಎಸ್ ಸಾಗಿದೆ.
ಆರಂಭದಲ್ಲಿ ಗೆಲುವಿನ ಸಂಭ್ರಮಾಚರಣೆ ಮಾಡಿದ್ದ ಬಿಜೆಪಿ, ಮಧ್ಯಾಹ್ನದ ಬಳಿಕ ಫಲಿತಾಂಶದ ಚಿತ್ರಣ ಬದಲಾದ ಹಿನ್ನೆಲೆಯಲ್ಲಿ ಮಂಕಾಯಿತು. ಆದರೆ ತೆಲಂಗಾಣ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಮತ್ತು ಸಂಸದ ಬಂಡಿ ಸಂಜಯ್ ಅವರು ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂಬ ಅನುಮಾನ ವ್ಯಕ್ತಪಡಿಸಿದ್ದಾರೆ.
ಜಿಎಚ್ಎಂಸಿ ಚುನಾವಣೆಗೆ ಡಿ. 1ರಂದು ಮತದಾನ ನಡೆದಾಗ ಸಂಜೆ 4 ಗಂಟೆಯವರೆಗೂ ಶೇ 30ರಷ್ಟಿದ್ದ ಮತದಾನದ ಪ್ರಮಾಣ ಸಂಜೆ 6 ಗಂಟೆ ವೇಳೆಗೆ ಶೇ 46.55ರಷ್ಟಾಗಿತ್ತು. ಎರಡೇ ಗಂಟೆಯಲ್ಲಿ ಇಷ್ಟು ಹೆಚ್ಚಳವಾಗಲು ಹೇಗೆ ಸಾಧ್ಯ ಎಂದು ಬಂಡಿ ಸಂಜಯ್ ಪ್ರಶ್ನಿಸಿದ್ದಾರೆ.

'ಮತದಾನದ ಕೊನೆಯ ಗಂಟೆಯಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಶೇಕಡಾವಾರು ಮತದಾನವಾಗಿರುವುದು ಹೇಗೆ ಎಂಬುದರ ಬಗ್ಗೆ ಪರಿಣಾಮಕಾರಿ ನ್ಯಾಯಾಂಗ ತನಿಖೆಯಾಗಬೇಕು. ಹಾಗೆಯೇ ಶೇ 90ಕ್ಕೂ ಹೆಚ್ಚು ಸ್ಥಳಗಳಲ್ಲಿ ನಡೆದ ಮತದಾನದ ವಿವರಗಳನ್ನು ಬಹಿರಂಗಪಡಿಸಬೇಕು' ಎಂದು ಅವರು ಆಗ್ರಹಿಸಿದ್ದಾರೆ.
ಈ ಚುನಾವಣೆಯಲ್ಲಿ ಟಿಆರ್ಎಸ್ ಅಧಿಕಾರಕ್ಕೆ ಬಂದರೂ, ಬಿಜೆಪಿ ತನ್ನ ಗುರಿಯನ್ನು ಈಡೇರಿಸಿಕೊಂಡಂತೆ ಆಗಿದೆ. 20-30 ಸ್ಥಾನಗಳಲ್ಲಿ ಗೆಲ್ಲುವುದು ಬಿಜೆಪಿಯ ಮುಖ್ಯ ಗುರಿಯಾಗಿತ್ತು. ಇದು ಮುಂದಿನ ವಿಧಾನಸಭೆ ಚುನಾವಣೆಗೆ ತಳಹದಿಯಾಗಲಿದೆ ಎಂದು ಬಿಜೆಪಿ ನಿರೀಕ್ಷಿಸಿದೆ.
ಇದಕ್ಕೂ ಮುನ್ನ ಮತಪತ್ರಗಳಲ್ಲಿ ಯಾವುದೇ ರೀತಿಯ ಶಾಯಿಯ ಗುರುತು ಇದ್ದರೂ ಆ ಮತವನ್ನು ಪರಿಗಣಿಸುವಂತೆ ರಾಜ್ಯ ಚುನಾವಣಾ ಆಯೋಗ ಗುರುವಾರ ತಡರಾತ್ರಿ ಸುತ್ತೋಲೆ ಹೊರಡಿಸಿತ್ತು. ಕೂಡಲೇ ಹೈಕೋರ್ಟ್ ಮೆಟ್ಟಿಲೇರಿದ್ದ ಬಿಜೆಪಿ, ಈ ಆದೇಶವನ್ನು ರದ್ದುಪಡಿಸುವಲ್ಲಿ ಯಶಸ್ವಿಯಾಗಿತ್ತು. ಪೂರ್ತಿ ಸ್ವಸ್ತಿಕ ಚಿಹ್ನೆ ಮೂಡದ ಮತಗಳನ್ನು ತಿರಸ್ಕರಿಸಬೇಕು ಎಂದು ಬಿಜೆಪಿ ಆಗ್ರಹಿಸಿತ್ತು. ಚುನಾವಣೆಯಲ್ಲಿ ಟಿಆರ್ಎಸ್ ಮತಪತ್ರಗಳನ್ನು ದುರ್ಬಳಕೆ ಮಾಡಿಕೊಂಡಿದೆ. ಹೀಗಾಗಿ ಶಾಯಿಯ ಗುರುತು ಇದ್ದ ಮಾತ್ರಕ್ಕೆ ಮತಗಳನ್ನ ಪರಿಗಣಿಸುವಂತಿಲ್ಲ ಎಂದು ಅದು ಆರೋಪಿಸಿತ್ತು.
-
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ









Click it and Unblock the Notifications