ಸ್ವಸ್ತಿಕ್ ಗುರುತು ಇದ್ದರೆ ಮಾತ್ರ ಮತ ಲೆಕ್ಕಕ್ಕೆ: ಹೈಕೋರ್ಟ್ ಮಹತ್ವದ ಆದೇಶ
ಹೈದರಾಬಾದ್, ಡಿಸೆಂಬರ್ 4: ಹೈದರಾಬಾದ್ ಮಹಾನಗರ ಪಾಲಿಕೆಯ 150 ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಶುಕ್ರವಾರ ಆರಂಭವಾಗಿದ್ದು, ಅಂಚೆಮತಪತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಈ ಚುನಾವಣೆ ಸಾಕಷ್ಟು ಕುತೂಹಲ ಕೆರಳಿಸಿದೆ. ಅದರ ಮಧ್ಯೆ ಮತ ಎಣಿಕೆಗೆ ಸಂಬಂಧಿಸಿದತೆ ಗೊಂದಲ ಮತ್ತು ವಿವಾದ ಸೃಷ್ಟಿಯಾಗಿದೆ.
ಪಾಲಿಕೆ ಚುನಾವಣೆಯಲ್ಲಿ ವಿದ್ಯುನ್ಮಾನ ಮತ ಯಂತ್ರಗಳನ್ನು ಬಳಸಿರಲಿಲ್ಲ. ಬದಲಾಗಿ ಸಾಂಪ್ರದಾಯಿಕ ಮತ ಪತ್ರಗಳನ್ನೇ ಬಳಸಲಾಗಿತ್ತು. ಮತಚಲಾವಣೆಗೆ ಮತದಾರರು ಹಾಕುವ ಸೀಲ್ನಲ್ಲಿ ಸ್ವಸ್ತಿಕ್ ಚಿಹ್ನೆ ಸಮಪರ್ಕವಾಗಿ ಮೂಡದೆ, ಯಾವುದೇ ಶಾಯಿಯ ಗುರುತು ಕಂಡುಬಂದರೂ ಆ ಮತಪತ್ರವನ್ನು ಪರಿಗಣಿಸುವಂತೆ ತೆಲಂಗಾಣ ರಾಜ್ಯ ಚುನಾವಣಾ ಆಯೋಗ ಗುರುವಾರ ತಡರಾತ್ರಿ ಸುತ್ತೋಲೆ ಹೊರಡಿಸಿತ್ತು.
ಆದರೆ, ಚುನಾವಣಾ ಆಯೋಗದ ಈ ನಿಯಮವನ್ನು ತೆಲಂಗಾಣ ಹೈಕೋರ್ಟ್ ತಿರಸ್ಕರಿಸಿದೆ. ಮತಪತ್ರಗಳಲ್ಲಿ ಸ್ವಸ್ತಿಕ್ ಚಿಹ್ನೆಯ ಇದ್ದರೆ ಮಾತ್ರ ಅದನ್ನು ಎಣಿಕೆಗೆ ಪರಿಗಣಿಸುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಮತಪತ್ರದಲ್ಲಿ ಯಾವುದೇ ಶಾಯಿಯ ಗುರುತು ಇದ್ದರೂ ಅದನ್ನು ಎಣಿಕೆಗೆ ಪರಿಗಣಿಸುವಂತೆ ರಾಜ್ಯ ಚುನಾವಣಾ ಆಯೋಗವು ಗುರುವಾರ ತಡರಾತ್ರಿ ಹೊರಡಿಸಿದ್ದ ಸುತ್ತೋಲೆಯನ್ನು ಪ್ರಶ್ನಿಸಿ ಬಿಜೆಪಿ ಹೈಕೋರ್ಟ್ ಮೊರೆ ಹೋಗಿತ್ತು.

ಬಿಜೆಪಿಯ ಅರ್ಜಿಯನ್ನು ಪರಿಗಣಿಸಿದ ಹೈಕೋರ್ಟ್, ಸ್ವಸ್ತಿಕ್ ಚಿಹ್ನೆ ಸಮಪರ್ಕವಾಗಿ ಬಿದ್ದಿರುವ ಮತಪತ್ರಗಳನ್ನು ಮಾತ್ರವೇ ಎಣಿಕೆಗೆ ಪರಿಗಣಿಸಬೇಕು. ಇತರೆ ಶಾಯಿ ಗುರುತು ಇರುವ ಮತಪತ್ರಗಳ ಕುರಿತಾದ ನಿರ್ಧಾರವನ್ನು ಬಳಿಕ ತೆಗೆದುಕೊಳ್ಳಬೇಕು ಎಂದು ಹೇಳಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications