ಮಹಾಘಟಬಂಧನಕ್ಕೆ ಜಗನ್ ರೆಡ್ಡಿ, ಕೆಸಿಆರ್: ಮಾತುಕತೆಗೆ ಕಮಲ್ ನಾಥ್
ಹೈದರಾಬಾದ್, ಮೇ 17: ಫಲಿತಾಂಶಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ ಕಾಂಗ್ರೆಸ್ ಮಹಾಘಟಬಂಧನದ ಸಿದ್ಧತೆಯಲ್ಲಿ ಭರ್ಜರಿಯಾಗಿ ತೊಡಗಿಕೊಂಡಿದೆ.
ಯುಪಿಎ ಬೆಂಬಲಿಸುವ ಪಕ್ಷಗಳಲೊಂದಿಗೆ ಎನ್ ಡಿಎ ಜೊತೆ ಗುರುತಿಸಿಕೊಳ್ಳದೆ ತಟಸ್ಥವಾಗಿರುವ ಪಕ್ಷಗಳನ್ನೂ ತನ್ನ ತೆಕ್ಕೆಗೆ ಸೇರಿಸಿಕೊಳ್ಳುವ ಯತ್ನದಲ್ಲಿರುವ ಕಾಂಗ್ರೆಸ್, ಆಂಧ್ರಪ್ರದೇಶದಲ್ಲಿ ವೈ ಎಸ್ ಜಗನ್ಮೋಹನ್ ರೆಡ್ಡಿ ನೇತೃತ್ವದ ವೈಎಸ್ ಆರ್ ಕಾಂಗ್ರೆಸ್ ಮತ್ತು ತೆಲಂಗಾಣದಲ್ಲಿ ಕೆ.ಚಂದ್ರಶೇಖರ್ ರಾವ್ ನೇತೃತ್ವದ ಟಿಆರ್ ಎಸ್ ಅನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲು ಕಾಂಗ್ರೆಸ್ ನಿರ್ಧರಿಸಿದೆ. ಅದರ ಫಲವಾಗಿ ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್ ನಾಥ್ ಅವರನ್ನು ಮಾತುಕತೆಗೆ ಕಳಿಸಲು ಕಾಂಗ್ರೆಸ್ ತೀರ್ಮಾನಿಸಿದೆ.
ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ
ಜಗನ್, ಕೆಸಿಆರ್ ಜೊತೆಗೆ ಒಡಿಶಾ ಮುಖ್ಯಮಂತ್ರಿ, ಬಿಜು ಜನತಾ ದಳದ ನವೀನ್ ಪಟ್ನಾಯಕ್ ಅವರೊಂದಿಗೂ ಚರ್ಚೆ ನಡೆಸಲು ಕಾಂಗ್ರೆಸ್ ಚಿಂತಿಸಿದೆ. ಪ್ರಾದೇಶಿಕ ಪಕ್ಷಗಳ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿ ಅವನ್ನು ತಮ್ಮತ್ತ ಸೆಳೆದುಕೊಳ್ಳಲು ಕಾಂಗ್ರೆಸ್ ಪ್ರಯತ್ನಿಸುತ್ತಿದ್ದು, ಬಿಜೆಪಿಗೆ ಇದೊಂದು ಆಘಾತವೆನ್ನಿಸಿದೆ.

ಮೇ 23 ರಂದು ಮಹತ್ವದ ಸಭೆ
ಮೇ 23, ಅಂದರೆ ಲೋಕಸಭೆ ಚುನಾವಣೆಯ ಫಲಿತಾಂಶದ ದಿನದಂದು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಎನ್ ಡಿಎಯೇತರ ಪಕ್ಷಗಳ ಸಭೆ ಕರೆದಿದ್ದು, ಈ ಸಭೆಯಲ್ಲಿ ಡಿಎಂಕೆ, ಟಿಡಿಪಿ, ಎಸ್ಪಿ, ಬಿಎಸ್ಪಿ, ಜೆಡಿಎಸ್, ಎನ್ ಸಿಪಿ ಮುಂತಾದ ಪಕ್ಷಗಳ ಘಟಾನುಘಟಿ ಮುಖಂಡರು ಭಾಗವಹಿಸಲಿದ್ದಾರೆ.

ಕೆಸಿಆರ್, ಜಗನ್ ರೆಡ್ಡಿಗೆ ಸೋನಿಯಾ ಆಮಂತ್ರಣ
ಈಗಾಗಲೇ ಈ ಸಭೆಗೆ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಮತ್ತು ವೈಎಸ್ ಆರ್ ಕಾಂಗ್ರೆಸ್ ನ ಜಗನ್ ಮೋಹನ್ ರೆಡ್ಡಿ ಅವರಿಗೂ ಸೋನಿಯಾ ಗಾಂಧಿ ಅವರು ಆಮಂತ್ರಣ ನೀಡಿದ್ದಾರೆ ಎನ್ನಲಾಗಿದೆ. ಆದರೆ ಸಭೆಯಲ್ಲಿ ಭಾಗವಹಿಸಲು ಮತ್ತು, ಮಹಾಮೈತ್ರಿಕೂಟಕ್ಕೆ ಬೆಂಬಲ ನೀಡಲು ಜಗನ್ ರೆಡ್ಡಿ ಅವರದು ಒಂದೇ ಒಂದು ಕಂಡಿಶನ್ ಇದೆ. ಕೆಸಿಆರ್ ತೃತೀಯ ರಂಗದ ಕನಸನ್ನು ಬಿಟ್ಟಿಲ್ಲ. ಆದ್ದರಿಂದ ಈ ಇಬ್ಬರ ಮನವೊಲಿಕೆ ಕಾಂಗ್ರೆಸ್ಸಿಗೆ ಅತ್ಯಂತ ಮಹತ್ವದ್ದೆನ್ನಿಸಿದೆ.

ಜಗನ್ ಕಂಡಿಶನ್ ಏನು?
"ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ಯಾವುದೇ ಪಕ್ಷಕ್ಕಾದರೂ ನಾನು ಬೆಂಬಲ ನೀಡುತ್ತೇನೆ. ಅದು ಎನ್ ಡಿಎ ಇರಲಿ, ಮಹಾಮೈತ್ರಿಕೂಟವಿರಲಿ" ಎಂದು ಈಗಾಗಲೇ ಜಗನ್ಮೋಹನ್ ರೆಡ್ಡಿ ತಮ್ಮ ಶರತ್ತನ್ನು ಹೇಳಿದ್ದಾರೆ. ಆದರೆ ಆಂಧ್ರಪ್ರದೇಶದಲ್ಲಿ ಈ ಬಾರು ಜಗನ್ಮೋಹನ್ ರೆಡ್ಡಿ ಅವರ ವೈ ಎಸ್ ಆರ್ ಕಾಂಗ್ರೆಸ್ ಪಕ್ಷವೇ ವಿಧಾನಸಭೆ ಚುನಾವಣೆ ಮತ್ತು ಲೋಕಸಭೆ ಚುನಾವಣೆಯಲ್ಲೂ ಹೆಚ್ಚಿನ ಸ್ಥಾನ ಗಳಿಸುವ ಸಾಧ್ಯತೆ ಇರುವುದರಿಂದ ಈ ಪಕ್ಷವನ್ನು ಕಡೆಗಣಿಸಲು ಕಾಂಗ್ರೆಸ್ ಸಿದ್ಧವಿಲ್ಲ.

ದ್ವಂದ್ವದಲ್ಲಿ ಪ್ರಾದೇಶಿಕ ಪಕ್ಷಗಳು
ಮಹಾ ಮೈತ್ರಕೂಟಕ್ಕೆ ಬೆಂಬಲ ನೀಡಲು ಎಲ್ಲಾ ಪ್ರಾದೇಶಿಕ ಪಕ್ಷಗಳೂ ಮುಂದೆಬರುವುದು ಅಸಾಧ್ಯ. ಕಾರಣ ರಾಜ್ಯದಲ್ಲಿ ಪರಸ್ಪರ ವಿರೋಧ ಪಕ್ಷಗಳಾಗಿ, ಕೇಂದ್ರದಲ್ಲಿ ಒಂದೇ ಮೈತ್ರಿಕೂಟದಲ್ಲಿ ಕಾಣಿಸಿಕೊಳ್ಳುವುದು ಮುಖಂಡರಿಗೆ ಸಹ್ಯವಾಗುವುದು ಕಷ್ಟ. ಉದಾಹರಣೆಗೆ ಆಂಧ್ರಪ್ರದೇಶ ಮತ್ತು ತೆಲಂಗಾಣ. ಆಂಧ್ರದಲ್ಲಿ ವೈಎಸ್ ಆರ್ ಕಾಂಗ್ರೆಸ್ ಮತ್ತು ತೆಲಂಗಾಣದಲ್ಲಿ ಟಿಆರ್ ಎಸ್ ಗೆ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಬದ್ಧ ವೈರಿ. ಆದರೆ ಮಹಾಮೈತ್ರಿಕೂಟದಲ್ಲಿ ಅವರೊಂದಿಗೇ ಕೈಜೋಡಿಸುವುದು ಹೇಗೆ? ವಿಧಾನಸಭೆಯಲ್ಲಿ ವಿಪಕ್ಷಗಳಾಗಿ ಸೆಣೆಸುವುದು, ಲೋಕಸಭೆಯಲ್ಲಿ ಕೈಹಿಡಿದುಕೊಂದು ಓಡಾಡುವುದು ಸರಿಯೆ ಎಂಬುದು ಅವರ ಪ್ರಶ್ನೆ.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications