ಚಂದ್ರಶೇಖರರಾವ್ ಭೇಟಿಯಾದ ಎಚ್.ಡಿ.ದೇವೇಗೌಡ
ಹೈದರಾಬಾದ್, ಜುಲೈ 01 : ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರರಾವ್ ಅವರನ್ನು ಭೇಟಿಯಾಗಿದ್ದಾರೆ. ದೇವೇಗೌಡ, ಕೆಸಿಆರ್ ಭೇಟಿ ರಾಷ್ಟ್ರ ರಾಜಕಾರಣದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.
ವಿವಾಹ ಸಮಾರಂಭಕ್ಕಾಗಿ ಎಚ್.ಡಿ.ದೇವೇಗೌಡರು ಭಾನುವಾರ ಹೈದರಾಬಾದ್ಗೆ ತೆರಳಿದ್ದರು. ಆಗ ಅವರು ಕೆ.ಚಂದ್ರಶೇಖರರಾವ್ ಅವರ ನಿವಾಸಕ್ಕೆ ಭೇಟಿ ನೀಡಿದರು. ಉಭಯ ನಾಯಕರು ಕೆಲವು ಹೊತ್ತು ರಾಜಕಾರಣದ ಬಗ್ಗೆ ಚರ್ಚೆ ನಡೆಸಿದ್ದಾರೆ.
ದೇಶದಲ್ಲಿ ತೃತೀಯ ರಂಗವನ್ನು ಬಲಪಡಿಸುವ ಉದ್ದೇಶದಿಂದ ಎಚ್.ಡಿ.ದೇವೇಗೌಡರು ಪ್ರಾದೇಶಿಕ ಪಕ್ಷಗಳ ನಾಯಕರ ಜೊತೆ ಮಾತುಕತೆ ನಡೆಸುತ್ತಿದ್ದಾರೆ. ಇದರ ಭಾಗವಾಗಿಯೇ ಇಂದು ಕೆಸಿಆರ್ ಅವರನ್ನು ಭೇಟಿ ಮಾಡಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.
ಇಬ್ಬರೂ ಹೈದರಾಬಾದ್ನಲ್ಲಿಯೇ ಇದ್ದ ಕಾರಣ ಭೇಟಿಯಾಗಿ, ಮಾತುಕತೆ ನಡೆಸಿದರು. ಈ ಭೇಟಿಗೆ ವಿಶೇಷ ಅರ್ಥವನ್ನು ಕಲ್ಪಿಸಬೇಕಾಗಿಲ್ಲ ಎಂದು ಜೆಡಿಎಸ್ ಪಕ್ಷದ ನಾಯಕರು ಹೇಳಿದ್ದಾರೆ. ಆದರೆ, ಉಭಯ ನಾಯಕರು ರಾಜಕೀಯ ವಿಷಯವನ್ನು ಮಾತನಾಡಿಲ್ಲ ಎಂಬುದು ತಳ್ಳಿಹಾಕುವಂತಿಲ್ಲ. ಭೇಟಿಯ ಚಿತ್ರಗಳು ಇಲ್ಲಿವೆ ನೋಡಿ

ಎಚ್ಡಿಡಿ, ಕೆಸಿಎಆರ್ ಭೇಟಿ
ಹೈದರಾಬಾದ್ನಲ್ಲಿ ಭಾನುವಾರ ಎಚ್.ಡಿ.ದೇವೇಗೌಡ ಮತ್ತು ಕೆ.ಚಂದ್ರಶೇಖರರಾವ್ ಭೇಟಿಯಾದರು. ರಾಷ್ಟ್ರ ರಾಜಕಾರಣದಲ್ಲಿ ಈ ಭೇಟಿ ಭಾರೀ ಕುತೂಹಲಕ್ಕೆ ಕಾರಣವಾಗಿದೆ. 2019ರ ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಮಹಾಘಟಬಂದನ್ ಕುರಿತು ಮಾತುಕತೆ ನಡೆಸಲು ಉಭಯ ನಾಯಕರು ಭೇಟಿಯಾಗಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

ಕೆಸಿಆರ್ ಬಂದಿದ್ದರು
ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ಕೆ.ಚಂದ್ರಶೇಖರರಾವ್ ಇದಕ್ಕೆ ಬೆಂಬಲ ನೀಡಿದ್ದರು. ಎಚ್.ಡಿ.ದೇವೇಗೌಡರ ನಿವಾಸಕ್ಕೆ ಆಗಮಿಸಿ ಶುಭ ಕೋರಿದ್ದರು. ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ದರು.

ಪರಸ್ಪರ ಶುಭಾಶಯವ ವಿನಿಮಯ
ವಿವಾಹ ಸಮಾರಂಭದಲ್ಲಿ ಪಾಲ್ಗೊಳ್ಳಲು ಎಚ್.ಡಿ.ದೇವೇಗೌಡರು ಭಾನುವಾರ ಹೈದರಾಬಾದ್ಗೆ ತೆರಳಿದ್ದರು. ಆಗ ಅವರು ಕೆ.ಚಂದ್ರಶೇಖರರಾವ್ ಅವರ ನಿವಾಸಕ್ಕೆ ಭೇಟಿ ನೀಡಿದರು. ಉಭಯ ನಾಯಕರು ಕೆಲವು ಹೊತ್ತು ಚರ್ಚೆ ನಡೆಸಿದ್ದಾರೆ. ಇಬ್ಬರು ನಾಯಕರು ಒಟ್ಟಿಗೆ ಇದ್ದುದ್ದರಿಂದ ಪರಸ್ಪರ ಭೇಟಿಯಾದರು. ಈ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ ಎಂದು ಜೆಡಿಎಸ್ ಮೂಲಗಳು ಹೇಳಿವೆ.

ಲೋಕಸಭೆ ಚುನಾವಣೆ
2019ರ ಲೋಕಸಭೆ ಚುನಾವಣೆ ಬಗ್ಗೆ ದೆಹಲಿಯಲ್ಲಿ ಕಳೆದ ವಾರ ಮಾತನಾಡಿದ್ದ ಎಚ್.ಡಿ.ದೇವೇಗೌಡರು, ಕೆ.ಚಂದ್ರಶೇಖರರಾವ್ ಅವರು ಲೋಕಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಹೋರಾಟ ಮಾಡಲಿದ್ದಾರೆ ಎಂದು ಹೇಳಿದ್ದರು. ಈ ಹೇಳಿಕೆ ನೀಡಿದ ನಾಲ್ಕುದಿನದಲ್ಲಿ ಉಭಯ ನಾಯಕರು ಭೇಟಿಯಾಗಿದ್ದಾರೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications