ತೆಲಂಗಾಣದಲ್ಲಿ ಬಿಸಿಲಿಗೆ 30ಬಲಿ, ಆಂಧ್ರದಲ್ಲೂ ಜೀವ ಹಾನಿ
ಮೆಹಬೂಬ್ ನಗರ, ನಿಜಾಮಾಬಾದ್ ನಲ್ಲಿ 44 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದರೆ, ಅದಿಲಾಬಾದ್ ನಲ್ಲಿ 44.5 ಡಿಗ್ರಿ ಉಷ್ಣಾಂಶ ದಾಖಲಾಗಿದೆ. ಅಧಿಕೃತ ವರದಿಗಳ ಪ್ರಕಾರ ಆಂಧ್ರ ಹಾಗೂ ತೆಲಂಗಾಣದಲ್ಲಿ ಬಿಸಿಲಿಗೆ 12 ಜನ ಅಸುನೀಗಿದ್ದಾರೆ.
ಹೈದರಾಬಾದ್, ಏಪ್ರಿಲ್ 20: ತೆಲಂಗಾಣ ಮತ್ತು ಆಂಧ್ರ ಪ್ರದೇಶದಲ್ಲಿ ಬಿಸಲಿನ ರುದ್ರ ನರ್ತನ ಮುಂದುವರಿದಿದೆ. ಉಭಯ ರಾಜ್ಯಗಳ ಬಹುತೇಕ ಜಿಲ್ಲೆಗಳಲ್ಲಿ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್ ದಾಟಿದ್ದು ತೆಲಂಗಾಣದಲ್ಲಿ 30 ಜನ ಸಾವನ್ನಪ್ಪಿರುವ ವರದಿಯಾಗಿದೆ.
ಮೆಹಬೂಬ್ ನಗರ, ನಿಜಾಮಾಬಾದ್ ನಲ್ಲಿ 44 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದರೆ, ಅದಿಲಾಬಾದ್ ನಲ್ಲಿ 44.5 ಡಿಗ್ರಿ ಉಷ್ಣಾಂಶ ದಾಖಲಾಗಿದೆ.[ಸುಡುವ ಬೇಸಿಗೆಯಲ್ಲಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ]

ಅನಧಿಕೃತ ಮೂಲಗಳ ಪ್ರಕಾರ ತೆಲಂಗಾಣದಲ್ಲಿ ಬೇಸಿಗೆಯ ಬಿಸಿಯಿಂದ 30 ಜನ ಸಾವನ್ನಪ್ಪಿದ್ದಾರೆ. ಆದರೆ ಬಿಸಿಲಿನಿಂದ ಸಾವಿಗೀಡಾದವರ ಬಗ್ಗೆ ಮಾಹಿತಿ ಕಲೆ ಹಾಕಲು ಸರಕಾರ ನೇಮಿಸಿದ ಸಮಿತಿ ತನಿಖೆ ನಡೆಸಿದಾಗ 15 ಜನ ಸಾವನ್ನಪ್ಪಿದ್ದು ಬೆಳಕಿಗೆ ಬಂದಿದ್ದರೆ, ಇದರಲ್ಲಿ ಕೇವಲ7 ಜನ ಮಾತ್ರ ಬಿಸಿಲಿನಿಂದ ಸತ್ತಿದ್ದಾರೆ ಎಂದು ಸಮಿತಿ ಹೇಳಿದೆ.
ಅಧಿಕೃತ ವರದಿಗಳ ಪ್ರಕಾರ ಆಂಧ್ರದಲ್ಲಿ 5 ಜನ ಸಾವನ್ನಪ್ಪಿದ್ದು ಒಟ್ಟು ಎರಡೂ ರಾಜ್ಯಗಳಲ್ಲಿ 12 ಜನ ಅಸುನೀಗಿದ್ದಾರೆ.[ಮುಂಗಾರು ಮುನ್ಸೂಚನೆ, ಹವಾಮಾನ ಇಲಾಖೆಯಿಂದ ಸಿಹಿ ಸುದ್ದಿ]
ಇನ್ನು ತೆಲಂಗಾಣ ಮತ್ತು ಆಂಧ್ರ ಪ್ರದೇಶ ಸರಕಾರಗಳು ಜನರಿಗೆ ಮನೆಯೊಳಗೇ ಇರುವಂತೆ ಮನವಿ ಮಾಡಿಕೊಂಡಿವೆ. ಮತ್ತು ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಮನವಿಯಲ್ಲಿ ತಿಳಿಸಿವೆ. ಅದರಲ್ಲೂ ಕೃಷಿ ಮತ್ತು ನಿರ್ಮಾಣ ಕಾಮಗಾರಿಗಳಲ್ಲಿ ತೊಡಗಿಸಿಕೊಂಡವರು ಹೆಚ್ಚು ತೊಂದರೆ ಅನುಭವಿಸುತ್ತಿದ್ದು ಇವರನ್ನು ಬೆಳಿಗ್ಗೆ ಮಾತ್ರ ಕೆಲಸ ಮಾಡುವಂತೆ ಕೇಳಿಕೊಳ್ಳಲಾಗಿದೆ.
ಗರಿಷ್ಠ 48 ಡಿಗ್ರಿ ಸೆಲ್ಸಿಯಸ್ ವರೆಗೆ ಉಷ್ಣಾಂಶ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ












Click it and Unblock the Notifications