ಕಾರು ಅಪಘಾತ: ಹಿಮಾಚಲ ಪ್ರದೇಶ ರಾಜ್ಯಪಾಲರು ಕೂದಲೆಳೆ ಅಂತರದಲ್ಲಿ ಪಾರು

ಹೈದರಾಬಾದ್, ಡಿಸೆಂಬರ್ 14: ಹಿಮಾಚಲಪ್ರದೇಶ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರು ಪ್ರಯಾಣಿಸುತ್ತಿದ್ದ ಕಾರು ಹೈದರಾಬಾದ್ ಬಳಿ ಅಪಘಾತಕ್ಕೀಡಾಗಿದ್ದು, ಕೂದೆಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾರು ಚಾಲಕನು ವಾಹನದ ಮೇಲಿನ ನಿಯಂತ್ರಣವನ್ನು ಕಳೆದುಕೊಂಡ ಪರಿಣಾಮ ಕಾರು ರಸ್ತೆ ಬದಿಯಲ್ಲಿದ್ದ ಮರಕ್ಕೆ ಢಿಕ್ಕಿಯಾಗಿದೆ., ಅದೃಷ್ಟವಶಾತ್ ಯಾರಿಗೆ ಯಾವ ಅಪಾಯವಾಗದೆ ಪಾರಾಗಿದ್ದಾರೆ.

ರಾಜ್ಯ ಸರ್ಕಾರ ಒದಗಿಸಿದ ವಾಹನ ಸುಸ್ಥಿತಿಯಲ್ಲಿರಲಿಲ್ಲ ಎಂದು ನಾಗೇಶ್ ಹೇಳಿದರು. ಹೈದರಾಬಾದ್ ಮೂಲದವರಾದ ರಾಜ್ಯಪಾಲ ಬಂಡಾರು ದತ್ತಾತ್ರೇಯ ನಲ್ಗೊಂಡದಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಅಲ್ಲಿಗೆ ತೆರಳುತ್ತಿದ್ದರು.

HP Governor Dattatreya Escapes Unhurt In Telangana Road Accident

ಹೈದರಾಬಾದ್-ವಿಜಯವಾಡ ಹೆದ್ದಾರಿಯ ಚೌತುಪ್ಪಲ್ ಮಂಡಲದ ಕೈತಪುರಂ ಬಳಿ ಅಪಘಾತ ಸಂಭವಿಸಿದೆ. ಈ ವೇಳೆ ಹಿಮಾಚಲ ಪ್ರದೇಶ ರಾಜ್ಯಪಾಲರು ಹೈದರಾಬಾದ್ ನಿಂದ ನಲ್ಗೊಂಡಕ್ಕೆ ತೆರಳುತ್ತಿದ್ದರು.

ಅಪಘಾತದಿಂದ ಕಾರು ಜಖಂ ಆಗಿದ್ದು ಆ ಘಟನಾ ನಂತರ ರಾಜ್ಯಪಾಲರು ಮತ್ತೊಂದು ವಾಹನದಲ್ಲಿ ನಲ್ಗೊಂಡಕ್ಕೆ ತೆರಳಿದ್ದಾರೆ ಎಂದು ರಾಜ್ಯಪಾಲರ ಸಹಾಯಕ ಕೈಲಾಶ್ ನಾಗೇಶ್ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+