ಹೈದರಾಬಾದ್ ನಲ್ಲಿ ಭಾರೀ ಅಗ್ನಿ ಅವಘಡ; ಏಳು ಮಂದಿ ಅಸ್ಪತ್ರೆಗೆ
ಹೈದರಾಬಾದ್, ಜನವರಿ 31: ಇಲ್ಲಿನ ನಾಮ್ ಪಲ್ಲಿ ವಸ್ತು ಪ್ರದರ್ಶನ ಮೈದಾನದಲ್ಲಿ ಬುಧವಾರ ಸಂಜೆ ಬಾರೀ ಅಗ್ನಿ ಅವಘಡ ಸಂಭವಿಸಿದ್ದು, ಏಳು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿ ಶಾಮಕದಳದ ಹದಿಮೂರು ವಾಹನಗಳು ಬೆಂಕಿ ನಂದಿಸಲು ಯತ್ನಿಸುತ್ತಿವೆ.
ರಸ್ತೆ ಅಪಘಾತ: ಎನ್ಟಿಆರ್ ಮಗ ನಂದಮೂರಿ ಹರಿಕೃಷ್ಣ ಸಾವು
ಭಯಗೊಂಡ ಜನರು ಒಟ್ಟಿಗೆ ಸುರಕ್ಷಿತ ಸ್ಥಳಕ್ಕೆ ಓಡಲು ಯತ್ನಿಸಿದ್ದರಿಂದ ಸಣ್ಣ ಪ್ರಮಾಣದ ಕಾಲ್ತುಳಿತ ಕೂಡ ಆಗಿದೆ. ಅಖಿಲ ಭಾರತ ಕೈಗಾರಿಕಾ ಪ್ರದರ್ಶನ ನಡೆಯುತ್ತಿದ್ದ ವೇಳೆ ಒಂದು ಮಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆ ನಂತರ ನೂರಾರು ಮಳಿಗೆಗಳಿಗೆ ಭಾರೀ ಪ್ರಮಾಣದಲ್ಲಿ ಬೆಂಕಿ ವ್ಯಾಪಿಸಿದೆ.
ಶಾರ್ಟ್ ಸರ್ಕೀಟ್ ಅಥವಾ ಟ್ರಾನ್ಸ್ ಫಾರ್ಮರ್ ಸಿಡಿದು ಈ ರೀತಿ ಅಗ್ನಿ ಅವಘಡ ಸಂಭವಿರಬಹುದು ಎನ್ನಲಾಗುತ್ತಿದೆ. ಹೈದರಾಬಾದ್ ನಲ್ಲಿ ಕಾಂಗ್ರೆಸ್ ನ ರಾಜ್ಯ ಕಚೇರಿ ಇರುವ ಎದುರಿಗೇ ನಾಮ್ ಪಲ್ಲಿ ವಸ್ತು ಪ್ರದರ್ಶನ ಮೈದಾನ ಇದೆ. ಇಲ್ಲಿಗೆ ಅಪಾರ ಪ್ರಮಾಣದಲ್ಲಿ ಜನರು ಬರುತ್ತಾರೆ. ಅದರಲ್ಲೂ ರಜಾ ದಿನಗಳಲ್ಲಿ ಇಲ್ಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬರುತ್ತಾರೆ.