ಸಾಮೂಹಿಕ ವಜಾ, ಟೆಕ್ ಮಹೀಂದ್ರಕ್ಕೆ ಹೈದರಾಬಾದ್ ಹೈ ಕೋರ್ಟ್ ನೋಟಿಸ್
ಹೈದರಾಬಾದ್, ಜುಲೈ 11: ಸಾಮೂಹಿಕವಾಗಿ ಕೆಲಸದಿಂದ ತೆಗೆಯುತ್ತಿರುವ ವಿಚಾರವಾಗಿ ಹೈದರಾಬಾದ್ ಹೈ ಕೋರ್ಟ್ ಮಂಗಳವಾರ ಐಟಿ ದಿಗ್ಗಜ ಟೆಕ್ ಮಹೀಂದ್ರ ಹಾಗೂ ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದೆ.
ಕಾನೂನು ವಿರುದ್ಧವಾಗಿ ಸಾಮೂಹಿಕವಾಗಿ ಕೆಲಸದಿಂದ ತೆಗೆದು ಹಾಕಿದ ವಿಚಾರವಾಗಿ ಟೆಕ್ ಮಹೀಂದ್ರ ನೌಕರರು ಸಲ್ಲಿಸಿದ ಅರ್ಜಿಗೆ ಉತ್ತರ ನೀಡುವಂತೆ ಮೂರು ವಾರದ ಗಡುವು ನೀಡಲಾಗಿದೆ.

ಸುಧಾಕರ್ ಸುದ್ದಾಲ ಮತ್ತು ಇತರ ಮೂವರು ಕೆಲಸದಿಂದ ತೆಗೆದುಹಾಕಿದ ಟೆಕ್ ಮಹೀಂದ್ರ ನೌಕರರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ನ ನ್ಯಾಯಮೂರ್ತಿ ಎಂ.ಎಸ್.ರಾಮಚಂದ್ರರಾವ್ ಕೈಗೆತ್ತಿಕೊಂಡರು.
ಐಟಿ ವಲಯದಲ್ಲಿ ಸಾಮೂಹಿಕವಾಗಿ ಉದ್ಯೋಗಿಗಳನ್ನು ತೆಗೆದುಹಾಕುತ್ತಿರುವುದು ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಈ ಸನ್ನಿವೇಶದ ಮೌಲ್ಯಮಾಪನ ಆಗಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.
ಈಚೆಗೆ ಟೆಕ್ ಮಹೀಂದ್ರ ಉದ್ಯೋಗಿ ಜತೆಗೆ ಅಲ್ಲಿನ ಎಚ್ ಆರ್ ಮತ್ತು ಉದ್ಯೋಗಿ ಮಧ್ಯೆ ನಡೆದ ಸಂಭಾಷಣೆಯ ಆಡಿಯೋ ಎಲ್ಲೆಡೆ ವೈರಲ್ ಆಗಿತ್ತು. ವೆಚ್ಚ ಕಡಿಮೆ ಮಾಡುವ ಪ್ರಕ್ರಿಯೆ ಇಡೀ ದೇಶದಲ್ಲಿ ನಡೀತಿದೆ. ನಿಮ್ಮ ರಾಜೀನಾಮೆ ನೀಡಿದರೆ ಅದು ಮಾಮೂಲಿ ಕೆಲಸ ಬಿಡುವಂತೆಯೇ ಆಗುತ್ತದೆ.
ಇಲ್ಲದಿದ್ದರೆ ನಾವು ಕೆಲಸದಿಂದ ತೆಗೆದುಹಾಕಿದ ಪತ್ರ ಕಳಿಸುತ್ತೇವೆ. ಆಗ ಕಂಪೆನಿಯಿಂದ ನಿಮ್ಮ ವೇತನ ಅಥವಾ ಅನುಭವದ ಪತ್ರ ಸಿಗಲ್ಲ ಎಂದು ಹೇಳಿದ್ದರು. ಆ ಆಡಿಯೋ ಎಲ್ಲೆಡೆ ಹರಿದಾಡಿತ್ತು.
ಕಂಪೆನಿಯ ಎಚ್ ಆರ್ ವಿಭಾಗದವರು ಕೆಲಸ ಬಿಡುವಂತೆ ಉದ್ಯೋಗಿಗಳಿಗೆ ಒತ್ತಡ ಹೇರುತ್ತಿದ್ದಾರೆ ಎಂದು ಅರ್ಜಿದಾರರು ಹೇಳಿದ್ದಾರೆ. ತೆಲಂಗಾಣ ಕಾರ್ಮಿಕ ಇಲಾಖೆಯ ಬಳಿ ಪರಿಹಾರಕ್ಕಾಗಿ ತೆರಳಿದರೂ ಯಾವುದೇ ಸಹಾಯ ಸಿಕ್ಕಿರಲಿಲ್ಲ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications